ರಫೇಲ್ ವಿಮಾನ 
ದೇಶ

'ಕಾಂಗ್ರೆಸ್ ಆಡಳಿತದಲ್ಲಿ ರಫೇಲ್ ಕಿಕ್ ಬ್ಯಾಕ್, 'ಐಎನ್‌ಸಿ ಎಂದರೆ ಐ ನೀಡ್ ಕಮಿಷನ್': ಬಿಜೆಪಿ ತಿರುಗೇಟು

ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದದಲ್ಲಿ ಭಾರಿ ಕಿಕ್ ಬ್ಯಾಕ್ ಪಡೆಯಲಾಗಿದೆ ಎಂಬ ಫ್ರಾನ್ಸ್‌ ಮಾಧ್ಯಮ ಸಂಸ್ಥೆ ಮೀಡಿಯಾಪಾರ್ಟ್ ಮಾಡಿರುವ ವರದಿ ಈಗ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದು,...

ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದದಲ್ಲಿ ಭಾರಿ ಕಿಕ್ ಬ್ಯಾಕ್ ಪಡೆಯಲಾಗಿದೆ ಎಂಬ ಫ್ರಾನ್ಸ್‌ ಮಾಧ್ಯಮ ಸಂಸ್ಥೆ ಮೀಡಿಯಾಪಾರ್ಟ್ ಮಾಡಿರುವ ವರದಿ ಈಗ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಈ ಕಿಕ್ ಬ್ಯಾಕ್ ಹಗರಣ ನಡೆದಿದೆ ಎಂದು ಮಂಗಳವಾರ ಬಿಜೆಪಿ ತಿರುಗೇಟು ನೀಡಿದೆ.

ರಫೇಲ್ ಫೈಟರ್ ಜೆಟ್ ಖರೀದಿಯಲ್ಲಿ ನಡೆದ ಭ್ರಷ್ಟಾಚಾರವನ್ನು ಮುಚ್ಚಿಹಾಕಲು ಮೋದಿ ಸರ್ಕಾರ ಯತ್ನಿಸುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಮಧ್ಯವರ್ತಿಯಿಂದ ದೋಷಾರೋಪಣೆಯ ದಾಖಲೆಗಳನ್ನು ವಶಪಡಿಸಿಕೊಂಡಿದ್ದರೂ ಏಕೆ ತನಿಖೆ ಆರಂಭಿಸಲಿಲ್ಲ ಎಂದು ಪ್ರಶ್ನಿಸಿದೆ.

ಕಾಂಗ್ರೆಸ್ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾ ಅವರು, 2007 ರಿಂದ 2012 ರ ವರೆಗೆ ಕಾಂಗ್ರೆಸ್ ಅಧಿಕಾರದಲ್ಲಿತ್ತು. 'ಐಎನ್‌ಸಿ (ಭಾರತೀಯ ನ್ಯಾಷನಲ್ ಕಾಂಗ್ರೆಸ್) ಎಂದರೆ 'ನನಗೆ ಕಮಿಷನ್ ಬೇಕು' (I Need Commission) ಎಂದರ್ಥ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ರಾಬರ್ಟ್ ವಾದ್ರಾ ಎಲ್ಲರೂ 'ಐ ನೀಡ್ ಕಮಿಷನ್' ಎಂದು ಹೇಳುತ್ತಾರೆ' ಎಂದು ವ್ಯಂಗ್ಯವಾಡಿದ್ದಾರೆ.

ಇಂದು ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪಾತ್ರಾ, 2019 ರ ಚುನಾವಣೆಗೆ ಮುನ್ನ ವಿರೋಧ ಪಕ್ಷಗಳು, ವಿಶೇಷವಾಗಿ ಕಾಂಗ್ರೆಸ್ ಪಕ್ಷ ರಫೇಲ್ ಬಗ್ಗೆ ಸುಳ್ಳುಗಳನ್ನು ಹರಡಲು ಪ್ರಯತ್ನಿಸಿದ ರೀತಿಯನ್ನು ನಾವೆಲ್ಲರೂ ನೋಡಿದ್ದೇವೆ. ಇದಕ್ಕೆ ರಾಹುಲ್ ಗಾಂಧಿ ಉತ್ತರ ನೀಡಲಿ. 2007-2012ರಲ್ಲಿ ನಿಮ್ಮದೇ ಸರ್ಕಾರ ಅಧಿಕಾರದಲ್ಲಿದ್ದಾಗ ಕಮಿಷನ್ ಪಾವತಿಸಲಾಗಿದೆ ಎನ್ನುವುದು ಈಗ ಬಯಲಾಗಿದೆ. ಅದರಲ್ಲಿದ್ದ ಮಧ್ಯವರ್ತಿಗಳ ಹೆಸರೂ ಹೊರಬಂದಿದೆ' ಎಂದಿದ್ದಾರೆ.

2007ರಿಂದ 2012ರ ಅವಧಿಯಲ್ಲಿ ರಫೇಲ್ ಒಪ್ಪಂದದಲ್ಲಿ ಭಾಗಿಯಾದ ಮಧ್ಯವರ್ತಿಗಳಿಗೆ ಕಿಕ್‌ಬ್ಯಾಕ್ ನೀಡಲಾಗಿತ್ತು. ಈ ಬಗ್ಗೆ ದಾಖಲೆಗಳನ್ನು ಪಡೆದುಕೊಂಡಿದ್ದರೂ ಆರೋಪಗಳ ವಿರುದ್ಧ ಯಾವುದೇ ತನಿಖೆ ಕೈಗೊಳ್ಳುವಲ್ಲಿ ಸಿಬಿಐ ವಿಫಲವಾಗಿತ್ತು ಎಂದು ಮೀಡಿಯಾಪಾರ್ಟ್ ವರದಿ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕುರ್ಚಿ ಕಾಳಗ: ಸಿದ್ದರಾಮಯ್ಯ, ಡಿಕೆಸಿ ಜತೆ ರಾಹಲ್ ಗಾಂಧಿ ಪ್ರತ್ಯೇಕ ಚರ್ಚೆ; ಕುತೂಹಲ ಮೂಡಿಸಿದೆ ಚುಟುಕು ಮಾತುಕತೆ! Video

ಇರಾನ್ ಪ್ರತಿಭಟನೆಯಲ್ಲಿ 2000 ಜನ ಸಾವು; ಇದಕ್ಕೆ ಉಗ್ರರು ಕಾರಣ ಎಂದ ಅಧಿಕಾರಿಗಳು

Toxic Teaserನಲ್ಲಿ 'ಟೂ ಮಚ್ ಸೆಕ್ಸ್' ಇದೆಯೇ? CBFCಗೆ ಮತ್ತೊಂದು ದೂರು!

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

IPL 2026: RCB ತವರು ಮೈದಾನ ಕೊನೆಗೂ ಬಹುತೇಕ ಫಿಕ್ಸ್, ಈ ಎರಡು ಮೈದಾನಗಳಲ್ಲೇ ಪಂದ್ಯ!

SCROLL FOR NEXT