ಹೊತ್ತಿ ಉರಿದ ಬಸ್ 
ದೇಶ

ರಾಜಸ್ಥಾನದಲ್ಲಿ ಭೀಕರ ಅಪಘಾತ: ಬಸ್, ಟ್ಯಾಂಕರ್ ಮಧ್ಯೆ ಡಿಕ್ಕಿ; 12 ಮಂದಿ ಸಜೀವ ದಹನ

ಖಾಸಗಿ ಬಸ್​ ಮತ್ತು ಟ್ಯಾಂಕರ್​ ಡಿಕ್ಕಿಯಾದ ಪರಿಣಾಮ ಬಸ್​​ಗೆ ಬೆಂಕಿ ಹೊತ್ತಿಕೊಂಡು ಸುಮಾರು 12 ಮಂದಿ ಸಜೀವ ದಹನವಾದ ದುರ್ಘಟನೆ ರಾಜಸ್ಥಾನದ ಬಾರ್ಮರ್​-ಜೋಧ್​ಪುರ ಹೆದ್ದಾರಿಯಲ್ಲಿ ನಡೆದಿದೆ.

ಬಾರ್ಮರ್: ಖಾಸಗಿ ಬಸ್​ ಮತ್ತು ಟ್ಯಾಂಕರ್​ ಡಿಕ್ಕಿಯಾದ ಪರಿಣಾಮ ಬಸ್​​ಗೆ ಬೆಂಕಿ ಹೊತ್ತಿಕೊಂಡು ಸುಮಾರು 12 ಮಂದಿ ಸಜೀವ ದಹನವಾದ ದುರ್ಘಟನೆ ರಾಜಸ್ಥಾನದ ಬಾರ್ಮರ್​-ಜೋಧ್​ಪುರ ಹೆದ್ದಾರಿಯಲ್ಲಿ ನಡೆದಿದೆ.

ಟ್ಯಾಂಕರ್ ಹಾಗೂ ಬಸ್ ಮಧ್ಯೆ ಅಪಘಾತ ನಡೆದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ. ಅಲ್ಲದೆ, ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದ 12 ಮಂದಿ ಸಜೀವ ದಹನವಾಗಿದ್ದಾರೆ. ಈ ಭೀಕರ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಅವಘಡ ಸಂಭವಿಸಿದಾಗ ಬಸ್‌ನಲ್ಲಿ 25 ಮಂದಿ ಇದ್ದರು ಎಂದು ಹೇಳಲಾಗುತ್ತಿದೆ. ಡಿಕ್ಕಿಯ ನಂತರ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಪ್ರಯಾಣಿಕರು ಸಿಕ್ಕಿಬಿದ್ದಿದ್ದು, ಕೆಲವರು ಕಿಟಕಿ ಗ್ಲಾಸನ್ನು ಒಡೆದು ಹಾಕಿ ಹೊರಗೆ ಬಂದು ಬಚಾವ್ ಆಗಿದ್ದಾರೆ ಅಂತಾ ಸ್ಥಳೀಯರು ತಿಳಿಸಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ 10 ಜನರನ್ನು ರಕ್ಷಣೆ ಮಾಡಿದ್ದಾರೆ.

ಖಾಸಗಿ ಬಸ್​ ಮತ್ತು ಟ್ಯಾಂಕರ್​ ನಡುವಿನ ಅಪಘಾತದಲ್ಲಿ 12 ಮಂದಿ ಮೃತಪಟ್ಟಿದ್ದಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​ ಸಂತಾಪ ಸೂಚಿಸಿದ್ದಾರೆ. ಬಾರ್ಮರ್​ ಜಿಲ್ಲಾಧಿಕಾರಿಯೊಟ್ಟಿಗೆ ಮಾತನಾಡಿದ್ದೇನೆ. ರಕ್ಷಣಾ ಕಾರ್ಯಾಚರಣೆ ಕುರಿತಾಗಿ ಅವರಿಗೆ ನಿರ್ದೇಶನ ನೀಡಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಎಲ್ಲ ವ್ಯವಸ್ಥೆ ಮಾಡಲಾಗುವುದು ಎಂದು ಟ್ವೀಟ್​ ಮೂಲಕ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT