ಕೃಷ್ಣ ಎಲ್ಲ 
ದೇಶ

ಕೋವಿಡ್ ಲಸಿಕೆ: 2ನೇ ಡೋಸ್ ಪಡೆದ 6 ತಿಂಗಳ ನಂತರ ಬೂಸ್ಟರ್ ಡೋಸ್‌ಗೆ ಸೂಕ್ತ ಸಮಯ- ಭಾರತ್ ಬಯೋಟೆಕ್ ಎಂಡಿ

ಕೋವಿಡ್-19 ಲಸಿಕೆಯ ಎರಡನೇ ಡೋಸ್‌ ಪಡೆದುಕೊಂಡ ಆರು ತಿಂಗಳ ನಂತರ ಬೂಸ್ಟರ್ ಡೋಸ್‌ ಪಡೆಯಲು ಸೂಕ್ತ ಸಮಯ ಎಂದು ಭಾರತ್ ಬಯೋಟೆಕ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಎಲ್ಲ ಅವರು ಬುಧವಾರ ಹೇಳಿದ್ದಾರೆ.

ನವದೆಹಲಿ: ಕೋವಿಡ್-19 ಲಸಿಕೆಯ ಎರಡನೇ ಡೋಸ್‌ ಪಡೆದುಕೊಂಡ ಆರು ತಿಂಗಳ ನಂತರ ಬೂಸ್ಟರ್ ಡೋಸ್‌ ಪಡೆಯಲು ಸೂಕ್ತ ಸಮಯ ಎಂದು ಭಾರತ್ ಬಯೋಟೆಕ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಎಲ್ಲ ಅವರು ಬುಧವಾರ ಹೇಳಿದ್ದಾರೆ.

ಮೂಗಿನ ಲಸಿಕೆ ಹೊಂದುವ ಮಹತ್ವವನ್ನು ಒತ್ತಿ ಹೇಳಿದ ಕೃಷ್ಣ ಎಲ್ಲ ಅವರು, ಝಿಕಾ ವೈರಸ್ ಸೋಂಕಿಗೆ ಲಸಿಕೆ ಅಭಿವೃದ್ಧಿಪಡಿಸಿದ ವಿಶ್ವದ ಮೊದಲ ಕಂಪನಿ ತಮ್ಮದು ಎಂದಿದ್ದಾರೆ.

ಟೈಮ್ಸ್ ನೌ ಸಮಿಟ್ 2021 ರಲ್ಲಿ ಮಾತನಾಡಿದ ಕೃಷ್ಣ ಎಲ್ಲ ಅವರು, ಪ್ರಧಾನಿ ನರೇಂದ್ರ ಮೋದಿಯವರು ದೇಶಿಯ ಕೋವಾಕ್ಸಿನ್ ಲಸಿಕೆಯನ್ನು ಪಡೆದುಕೊಂಡಿರುವುದು ಭಾರತೀಯ ವಿಜ್ಞಾನದ ಮೇಲೆ ವಿಶ್ವಾಸವನ್ನು ತೋರಿಸಿದೆ ಎಂದು ಅವರು ಹೇಳಿದ್ದಾರೆ.

ವಿಶ್ವದಾದ್ಯಂತ ನೇಸಲ್ ಲಸಿಕೆ ಬಗ್ಗೆ ಗಮನಹರಿಸಲಾಗುತ್ತಿದೆ. ಸೋಂಕು ಹರಡುವಿಕೆ ತಡೆಗೆ ಅದೊಂದೇ ಸೂಕ್ತ ಮಾರ್ಗವಾಗಿದ್ದು, ಭಾರತ್ ಬಯೋಟೆಕ್ ಸಹ ನೇಸಲ್ ಲಸಿಕೆ ತಯಾರಿಕೆಗೆ ಮುಂದಾಗಿದೆ ಎಂದು ಅವರು ಹೇಳಿದ್ದಾರೆ.

‘ನಾವು ನೇಸಲ್ ಕೋವಿಡ್ ಲಸಿಕೆಯನ್ನು ಬಿಡುಗಡೆ ಮಾಡಲಿದ್ದು, ಮೊದಲ ಡೋಸ್ ಆಗಿ ಕೋವ್ಯಾಕ್ಸಿನ್ ಲಸಿಕೆ ಮತ್ತು ಎರಡನೇ ಡೋಸ್ ಆಗಿ ನೇಸಲ್ ಲಸಿಕೆ ನೀಡಲು ಚಿಂತಿಸುತ್ತಿದ್ದೇವೆ. ನೇಸಲ್ ಲಸಿಕೆಯು ವೈಜ್ಞಾನಿಕವಾಗಿ ಅತ್ಯಂತ ಮುಖ್ಯವಾದುದ್ದಾಗಿದ್ದು, ಅದರಿಂದ ಸೋಂಕಿನ ಹರಡುವಿಕೆ ತಡೆಯಬಹುದಾಗಿದೆ’ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT