ಕಾಂಗ್ರೆಸ್ ಮುಖಂಡ ಸಲ್ಮಾನ್ ಖುರ್ಷಿದ್ 
ದೇಶ

ಸುಪ್ರೀಂ ಕೋರ್ಟಿನ ಅಯೋಧ್ಯೆ ತೀರ್ಪನ್ನು ನನ್ನ ಬಾಂಧವರಿಗೆ ವಿವರಿಸಬೇಕಾಗಿದ್ದು ನನ್ನ ಹೊಣೆಯಾಗಿತ್ತು: ಸಲ್ಮಾನ್ ಖುರ್ಷಿದ್

ಅಯೋಧ್ಯೆ ತೀರ್ಪು ಹೊರಬೀಳಲು 100 ವರ್ಷಗಳು ಬೇಕಾಗುತ್ತದೆ ಎಂದು ಜನರು ಮಾತಾಡಿಕೊಳ್ಳುತ್ತಿದ್ದರು. ಆದರೆ ಅಯೋಧ್ಯೆ ತೀರ್ಪು ಹೊರಬಿದ್ದ ನಂತರ ಜನರು ತೀರ್ಪಿನಲ್ಲಿ ಏನಿದೆ ಎಂಬುದನ್ನು ತಿಳಿದುಕೊಳ್ಳದೆಯೇ ಅದರ ಬಗ್ಗೆ ನಾನಾ ರೀತಿಯಲ್ಲಿ ಮಾತಾಡಿಕೊಂಡರು. 

ನವದೆಹಲಿ: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಮುಖಂಡ ಸಲ್ಮಾನ್ ಖುರ್ಷಿದ್ ಅವರು ಅಯೋಧ್ಯೆ ತೀರ್ಪು ಕುರಿತು ಪುಸ್ತಕವೊಂದನ್ನು ಹೊರತಂದಿದ್ದಾರೆ. ಬಿಡುಗಡೆ ಸಂದರ್ಭ ಸುದ್ದಿಗಾರರೊಡನೆ ಮಾತನಾಡಿದ ಅವರು ಸುಪ್ರೀಂ ಕೋರ್ಟ್ ನೀಡಿದ ಅಯೋಧ್ಯೆ ತೀರ್ಪನ್ನು ತಮ್ಮ ಬಾಂಧವರಿಗೆ ವಿವರಿಸುವ ಗುರುತರವಾದ ಜವಾಬ್ದಾರಿ ತಮ್ಮ ಮೇಲಿತ್ತು ಎಂದು ಹೇಳಿದ್ದಾರೆ.

ಅಯೋಧ್ಯೆ ತೀರ್ಪು ಹೊರಬೀಳಲು 100 ವರ್ಷಗಳು ಬೇಕಾಗುತ್ತದೆ ಎಂದು ಜನರು ಮಾತಾಡಿಕೊಳ್ಳುತ್ತಿದ್ದರು. ಆದರೆ ಅಯೋಧ್ಯೆ ತೀರ್ಪು ಹೊರಬಿದ್ದ ನಂತರ ಜನರು ತೀರ್ಪಿನಲ್ಲಿ ಏನಿದೆ ಎಂಬುದನ್ನು ತಿಳಿದುಕೊಳ್ಳದೆಯೇ ಅದರ ಬಗ್ಗೆ ನಾನಾ ರೀತಿಯಲ್ಲಿ ಮಾತಾಡಿಕೊಂಡರು. 

ಆ ಸಮಯದಲ್ಲಿ ತೀರ್ಪಿನ ಬಗ್ಗೆ ವಿವರಣೆ ನೀಡಬೇಕಾದ ಅಗತ್ಯತೆ ಇತ್ತು. ಮೊದಲು ನ್ಯಾಯಾಲಯದ ತೀರ್ಪನ್ನು ಸ್ವೀಕರಿಸಿದೆ. ಈಗಾಗಲೇ ದೇಶದಲ್ಲಿ ಉದ್ಭವವಾಗಿರುವ ಧಾರ್ಮಿಕ ಸಂಧಿಗ್ಧತೆ ವಾತಾವರಣ ಇರುವುದರಿಂದ ಅದಕ್ಕೆ ಮುಲಾಮು ಹಚ್ಚುವ ಪ್ರಯತ್ನವಾಗಿತ್ತು ಅದು ಎಂದು ಅವರು ತಿಳಿಸಿದ್ದಾರೆ. 

ಸುಪ್ರೀಂ ಕೋರ್ಟ್ ನವೆಂಬರ್ 9, 2019ರಂದು 2.77 ಎಕರೆಯಷ್ಟು ವಿವಾದಾತ್ಮಕ ಪ್ರದೇಶವನ್ನು ಟ್ರಸ್ಟ್ ಗೆ ಹಸ್ತಾಂತರಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT