ಕಾಂಗ್ರೆಸ್ ಮುಖಂಡ ಸಲ್ಮಾನ್ ಖುರ್ಷಿದ್ 
ದೇಶ

ಸುಪ್ರೀಂ ಕೋರ್ಟಿನ ಅಯೋಧ್ಯೆ ತೀರ್ಪನ್ನು ನನ್ನ ಬಾಂಧವರಿಗೆ ವಿವರಿಸಬೇಕಾಗಿದ್ದು ನನ್ನ ಹೊಣೆಯಾಗಿತ್ತು: ಸಲ್ಮಾನ್ ಖುರ್ಷಿದ್

ಅಯೋಧ್ಯೆ ತೀರ್ಪು ಹೊರಬೀಳಲು 100 ವರ್ಷಗಳು ಬೇಕಾಗುತ್ತದೆ ಎಂದು ಜನರು ಮಾತಾಡಿಕೊಳ್ಳುತ್ತಿದ್ದರು. ಆದರೆ ಅಯೋಧ್ಯೆ ತೀರ್ಪು ಹೊರಬಿದ್ದ ನಂತರ ಜನರು ತೀರ್ಪಿನಲ್ಲಿ ಏನಿದೆ ಎಂಬುದನ್ನು ತಿಳಿದುಕೊಳ್ಳದೆಯೇ ಅದರ ಬಗ್ಗೆ ನಾನಾ ರೀತಿಯಲ್ಲಿ ಮಾತಾಡಿಕೊಂಡರು. 

ನವದೆಹಲಿ: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಮುಖಂಡ ಸಲ್ಮಾನ್ ಖುರ್ಷಿದ್ ಅವರು ಅಯೋಧ್ಯೆ ತೀರ್ಪು ಕುರಿತು ಪುಸ್ತಕವೊಂದನ್ನು ಹೊರತಂದಿದ್ದಾರೆ. ಬಿಡುಗಡೆ ಸಂದರ್ಭ ಸುದ್ದಿಗಾರರೊಡನೆ ಮಾತನಾಡಿದ ಅವರು ಸುಪ್ರೀಂ ಕೋರ್ಟ್ ನೀಡಿದ ಅಯೋಧ್ಯೆ ತೀರ್ಪನ್ನು ತಮ್ಮ ಬಾಂಧವರಿಗೆ ವಿವರಿಸುವ ಗುರುತರವಾದ ಜವಾಬ್ದಾರಿ ತಮ್ಮ ಮೇಲಿತ್ತು ಎಂದು ಹೇಳಿದ್ದಾರೆ.

ಅಯೋಧ್ಯೆ ತೀರ್ಪು ಹೊರಬೀಳಲು 100 ವರ್ಷಗಳು ಬೇಕಾಗುತ್ತದೆ ಎಂದು ಜನರು ಮಾತಾಡಿಕೊಳ್ಳುತ್ತಿದ್ದರು. ಆದರೆ ಅಯೋಧ್ಯೆ ತೀರ್ಪು ಹೊರಬಿದ್ದ ನಂತರ ಜನರು ತೀರ್ಪಿನಲ್ಲಿ ಏನಿದೆ ಎಂಬುದನ್ನು ತಿಳಿದುಕೊಳ್ಳದೆಯೇ ಅದರ ಬಗ್ಗೆ ನಾನಾ ರೀತಿಯಲ್ಲಿ ಮಾತಾಡಿಕೊಂಡರು. 

ಆ ಸಮಯದಲ್ಲಿ ತೀರ್ಪಿನ ಬಗ್ಗೆ ವಿವರಣೆ ನೀಡಬೇಕಾದ ಅಗತ್ಯತೆ ಇತ್ತು. ಮೊದಲು ನ್ಯಾಯಾಲಯದ ತೀರ್ಪನ್ನು ಸ್ವೀಕರಿಸಿದೆ. ಈಗಾಗಲೇ ದೇಶದಲ್ಲಿ ಉದ್ಭವವಾಗಿರುವ ಧಾರ್ಮಿಕ ಸಂಧಿಗ್ಧತೆ ವಾತಾವರಣ ಇರುವುದರಿಂದ ಅದಕ್ಕೆ ಮುಲಾಮು ಹಚ್ಚುವ ಪ್ರಯತ್ನವಾಗಿತ್ತು ಅದು ಎಂದು ಅವರು ತಿಳಿಸಿದ್ದಾರೆ. 

ಸುಪ್ರೀಂ ಕೋರ್ಟ್ ನವೆಂಬರ್ 9, 2019ರಂದು 2.77 ಎಕರೆಯಷ್ಟು ವಿವಾದಾತ್ಮಕ ಪ್ರದೇಶವನ್ನು ಟ್ರಸ್ಟ್ ಗೆ ಹಸ್ತಾಂತರಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT