ಮೋದಿ-ಇಮ್ರಾನ್-ಜಿನ್ ಪಿಂಗ್ 
ದೇಶ

ದೆಹಲಿಯಲ್ಲಿ ಅಫ್ಘಾನಿಸ್ತಾನ ಕುರಿತು ಚರ್ಚೆ: ಭಾರತ ಆಹ್ವಾನ ತಿರಸ್ಕರಿಸಿ ಪಾಕ್, ಚೀನಾ ಸಭೆಗೆ ಗೈರು!

ಅಫ್ಘಾನಿಸ್ತಾನವನ್ನು ತಾಲಿಬಾನಿಗಳು ಕೈವಶ ಮಾಡಿಕೊಂಡ ಮೇಲೆ ಸದ್ಯದ ಪರಿಸ್ಥಿತಿ ಕುರಿತು ಚರ್ಚೆ ಮಾಡಲು 8 ರಾಷ್ಟ್ರಗಳನ್ನೊಳಗೊಂಡ ಭದ್ರತಾ ಸಲಹೆಗಾರರ ಸಭೆ ದೆಹಲಿಯಲ್ಲಿ ನಡೆಯುತ್ತಿದೆ. ಭಯೋತ್ಪಾದನೆ, ಮಹಿಳೆಯರ ಮೇಲಿನ ಹಲ್ಲೆ, ಹಿಂಸಾಚಾರ ಸೇರಿದಂತೆ ಅನೇಕ ವಿಚಾರಗಳ ಕುರಿತಂತೆ ಚರ್ಚಿಸಲಾಗುತ್ತಿದೆ.

ನವದೆಹಲಿ: ಅಫ್ಘಾನಿಸ್ತಾನವನ್ನು ತಾಲಿಬಾನಿಗಳು ಕೈವಶ ಮಾಡಿಕೊಂಡ ಮೇಲೆ ಸದ್ಯದ ಪರಿಸ್ಥಿತಿ ಕುರಿತು ಚರ್ಚೆ ಮಾಡಲು 8 ರಾಷ್ಟ್ರಗಳನ್ನೊಳಗೊಂಡ ಭದ್ರತಾ ಸಲಹೆಗಾರರ ಸಭೆ ದೆಹಲಿಯಲ್ಲಿ ನಡೆಯುತ್ತಿದೆ. ಭಯೋತ್ಪಾದನೆ, ಮಹಿಳೆಯರ ಮೇಲಿನ ಹಲ್ಲೆ, ಹಿಂಸಾಚಾರ ಸೇರಿದಂತೆ ಅನೇಕ ವಿಚಾರಗಳ ಕುರಿತಂತೆ ಚರ್ಚಿಸಲಾಗುತ್ತಿದೆ.

ಸುಸ್ಥಿರ ಸರ್ಕಾರ ಹಾಗೂ ಅಫ್ಘಾನಿಸ್ತಾನದಲ್ಲಿ ಶಾಂತಿ ನೆಲಸುವ ದೃಷ್ಟಿಯಿಂದ ದೆಹಲಿ ಸಭೆ ಅತ್ಯಂತ ಮಹತ್ವ ಪಡೆದುಕೊಂಡಿದೆ. ಇರಾನ್, ರಷ್ಯಾ, ಮಧ್ಯ ಏಷ್ಯಾದ ದೇಶಗಳಾದ ತಜಕಿಸ್ತಾನ್, ಕಿರ್ಗಿಸ್ತಾನ್, ಕಜಕಿಸ್ತಾನ್, ಉಜ್ಬೇಕಿಸ್ತಾನ್ ಮತ್ತು ತುರ್ಕಿಮೆನಿಸ್ತಾನ್ ಸಹ ಈ ಸಭೆಯಲ್ಲಿ ಪಾಲ್ಗೊಂಡಿವೆ. 

ಸಭೆಯಲ್ಲಿ, ಎಲ್ಲಾ ದೇಶಗಳು ಅಫ್ಘಾನಿಸ್ತಾನದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿವೆ. ಆ ರಾಷ್ಟ್ರದಲ್ಲಿನ ಭಯೋತ್ಪಾದನೆ ಮತ್ತು ಮಾದಕವಸ್ತುಗಳ ಕಳ್ಳಸಾಗಣೆಯನ್ನು ಅಲ್ಲಿಂದ ನಿಲ್ಲಿಸಬೇಕು ಅನ್ನೋ ಬಗ್ಗೆ ಗಡಿ ಹಂಚಿಕೊಂಡಿರುವ ರಾಷ್ಟ್ರಗಳ ಒತ್ತಾಯವಾಗಿದೆ.

ರಷ್ಯಾದ ನಂತರ ಭಾರತದಲ್ಲಿ ಅಪ್ಘಾನಿಸ್ತಾನ ಕುರಿತಾದ ಮೊದಲ ಮಹತ್ವದ ಚರ್ಚೆ ನಡೆಯುತ್ತಿದೆ. ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಆಗಿರುವ ಅಜಿತ್ ಧೋವಲ್ ಅಧ್ಯಕ್ಷತೆಯಲ್ಲಿ ಈ ಮಹತ್ವದ ಚರ್ಚೆ ನಡೆಯುತ್ತಿವೆ.

ಈ ಸಭೆಯಲ್ಲಿ ಭಾಗವಹಿಸುವಂತೆ ಪಾಕಿಸ್ತಾನಕ್ಕೆ ಆಹ್ವಾನ ನೀಡಲಾಗಿತ್ತು. ಆದರೆ, ಪಾಕಿಸ್ತಾನದ ಭದ್ರತಾ ಸಲಹೆಗಾರರಾಗಿರುವ ಮೋಯಿದ್ ಯೂಸುಫ್ ದೆಹಲಿ ಭೇಟಿ ತಿರಸ್ಕರಿಸಿದ್ದರು. ಇನ್ನು ಪಾಕ್ ನ ವಿಶೇಷ ಸ್ನೇಹಿತನಾಗಿರುವ ಚೀನಾ ಕೂಡ ವೇಳಾಪಟ್ಟಿಯ ನೆಪದಲ್ಲಿ ಸಭೆಗೆ ಬರಲು ನಿರಾಕರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಟೌನ್‌ಶಿಪ್‌ ಯೋಜನೆ ಬಗ್ಗೆ BJP-JDS ಅಪಪ್ರಚಾರ, ರೈತರ ಭೂಮಿ ಬಲವಂತವಾಗಿ ಪಡೆಯಲ್ಲ: ಸಚಿವ ಯತೀಂದ್ರ

ಖಾತೆ ಹಂಚಿಕೆಗೂ ಮುನ್ನ ಸಚಿವ ನಾಗೇಂದ್ರಗೆ ಸಂಕಷ್ಟ! ವಿಶೇಷ ನ್ಯಾಯಾಲಯದ ಜಾಮೀನು ಷರತ್ತು ಉಲ್ಲಂಘಿಸಿದ ಆರೋಪ