ನಿರ್ಮಲಾ ಸೀತಾರಾಮನ್ 
ದೇಶ

ನ.15 ರಂದು ಮುಖ್ಯಮಂತ್ರಿಗಳೊಂದಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಭೆ 

 ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನ.15 ರಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. 

ಅಮರಾವತಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನ.15 ರಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. 

ಕೋವಿಡ್-19 ಎರಡನೇ ಅಲೆಯ ನಂತರದಲ್ಲಿ ದೇಶದ ಆರ್ಥಿಕತೆ ಬೆಳವಣಿಗೆಯ ಹಾದಿಯಲ್ಲಿದ್ದು, ಹೂಡಿಕೆ, ಮೂಲಸೌಕರ್ಯ ಸ್ಥಾಪನೆಗೆ ಸಂಬಂಧಿಸಿದಂತೆ, ಚರ್ಚೆ ಮಾಡಲಿದ್ದಾರೆ. 

ವರ್ಚ್ಯುಯಲ್ ಮೋಡ್ ನಲ್ಲಿ ಮಧ್ಯಾಹ್ನ 3 ರಿಂದ 6 ಗಂಟೆಗೆ ಸಭೆ ನಡೆಯಲಿದೆ. ಎರಡನೇ ಅಲೆಯ ಬಳಿಕ ಆರ್ಥಿಕತೆಯಲ್ಲಿ ಚೇತರಿಕೆ ಕಂಡುಬಂದಿದ್ದು, ಎಲ್ಲಾ ಕ್ಷೇತ್ರಗಳಲ್ಲಿ ಗಣನೀಯ ಚಟುವಟಿಕೆಗಳು ನಡೆಯುತ್ತಿವೆ ಎಂದು ಮುಖ್ಯಮಂತ್ರಿಗಳು, ಕೇಂದ್ರಾಡಳಿತ ಪ್ರದೇಶದಲ್ಲಿರುವ ಆಡಳಿತಗಾರರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. 

ಹೂಡಿಕೆದಾರರಲ್ಲಿ ಸಾಮಾನ್ಯವಾಗಿ ಸಕಾರಾತ್ಮಕತೆ ಇದ್ದು, " ಈ ಹೆಚ್ಚುತ್ತಿರುವ ಆಶಾವಾದದ ಲಾಭವನ್ನು ಪಡೆದುಕೊಂಡಲ್ಲಿ ನಾವು ರಾಜ್ಯಗಳಲ್ಲಿ ಹೂಡಿಕೆಯನ್ನು ಹೆಚ್ಚಿಸಬಹುದಾಗಿದೆ ಈ ಮೂಲಕ ಉದ್ಯೋಗ ಬೆಳವಣಿಗೆ ಹಾಗೂ ಆದಾಯದ ಮೇಲೆ ದ್ವಿಗುಣ ಪರಿಣಾಮವನ್ನು ಕಾಣಬಹುದಾಗಿದೆ ಎಂದು ಸೀತಾರಾಮನ್ ಹೇಳಿದ್ದಾರೆ. 

ನ.15 ರ ಸಂವಾದ ರಾಜ್ಯ ನಿರ್ದಿಷ್ಟ ಆರ್ಥಿಕತೆಯ ಕೇಂದ್ರಿತವಾಗಿರಲಿದೆ. ಆರ್ಥಿಕತೆಗೆ ಸಂಬಂಧಿಸಿದ ಸವಾಲುಗಳು ಹಾಗೂ ಸಾಮರ್ಥ್ಯದ ಬಗ್ಗೆ, ಹೂಡಿಕೆ, ಮೂಲಸೌಕರ್ಯ ಬೆಳವಣಿಗೆಳಿಗೆ ಸಂಬಂಧಿಸಿದಂತೆ ಭಾರತ ಸರ್ಕಾರ-ರಾಜ್ಯ ಸರ್ಕಾರಗಳ ನಡುವೆ ಸಮನ್ವಯತೆ ಸಾಧಿಸುವುದಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆಯೂ ಈ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT