ಮನೀಶ್ ಸಿಸೋಡಿಯಾ 
ದೇಶ

ಗೋವಾ ಚುನಾವಣೆಯಲ್ಲಿ ಎಎಪಿ ಗೆದ್ದರೆ ಭಂಡಾರಿ ಸಮುದಾಯದ ವ್ಯಕ್ತಿ ಸಿಎಂ, ಕ್ರಿಶ್ಚಿಯನ್ ಡಿಸಿಎಂ: ಮನೀಶ್ ಸಿಸೋಡಿಯಾ

ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಭಂಡಾರಿ ಸಮುದಾಯದ ವ್ಯಕ್ತಿಯನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸುವುದಾಗಿ ಆಮ್ ಆದ್ಮಿ ಪಕ್ಷದ(ಎಎಪಿ) ಹಿರಿಯ ನಾಯಕ...

ಪಣಜಿ: ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಭಂಡಾರಿ ಸಮುದಾಯದ ವ್ಯಕ್ತಿಯನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸುವುದಾಗಿ ಆಮ್ ಆದ್ಮಿ ಪಕ್ಷದ(ಎಎಪಿ) ಹಿರಿಯ ನಾಯಕ, ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಅವರು ಗುರುವಾರ ಹೇಳಿದ್ದಾರೆ.

ಇಂದು ಪಣಜಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಸೋಡಿಯಾ ಅವರು, ಗೋವಾದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಕ್ರೈಸ್ತ ಸಮುದಾಯದ ವ್ಯಕ್ತಿ ಉಪಮುಖ್ಯಮಂತ್ರಿ ಆಗಲಿದ್ದಾರೆ ಎಂದು ತಿಳಿಸಿದರು.

ಗೋವಾದಲ್ಲಿ ಎಎಪಿಗೆ ಹೆಚ್ಚು ಮನ್ನಣೆ ಸಿಗುತ್ತಿದೆ, ಎಲ್ಲಾ ಸಮುದಾಯಗಳ ಜನರು ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷದ ಜೊತೆ ಕೈಜೋಡಿಸುತ್ತಿದ್ದಾರೆ ಎಂದು ದೆಹಲಿಯ ಉಪ ಮುಖ್ಯಮಂತ್ರಿ ಹೇಳಿದ್ದಾರೆ.

ರಾಜ್ಯದಲ್ಲಿ ಸಾಕಷ್ಟು ಜನಸಂಖ್ಯೆಯನ್ನು ಹೊಂದಿರುವ ಭಂಡಾರಿ ಸಮುದಾಯವನ್ನು ಸರ್ಕಾರದಲ್ಲಿ ಪ್ರಾತಿನಿಧ್ಯಕ್ಕೆ ಸಂಬಂಧಿಸಿದಂತೆ ಯಾವಾಗಲೂ ಕಡೆಗಣಿಸಲಾಗಿದೆ ಎಂದರು.

ಗೋವಾ ವಿಮೋಚನೆಯ ನಂತರ ರಾಜ್ಯದ ಇತಿಹಾಸದಲ್ಲಿ ಒಮ್ಮೆ ಮಾತ್ರ ಭಂಡಾರಿ ಸಮುದಾಯದ ನಾಯಕರೊಬ್ಬರು ಮುಖ್ಯಮಂತ್ರಿಯಾಗಿದ್ದಾರೆ ಮತ್ತು ಅದು ಕೂಡ ಎರಡೂವರೆ ವರ್ಷಗಳ ಅಲ್ಪಾವಧಿಗೆ ಯಾರನ್ನೂ ಹೆಸರಿಸದೆ ಸಿಸೋಡಿಯಾ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT