ಅಸ್ವಸ್ಥ ವ್ಯಕ್ತಿಯನ್ನು ಹೊತ್ತು ಸಾಗಿದ ಮಹಿಳಾ ಪೊಲೀಸ್ ಅಧಿಕಾರಿ 
ದೇಶ

ಚೆನ್ನೈನಲ್ಲಿ ಭಾರಿ ಮಳೆ: ಅಸ್ವಸ್ಥಗೊಂಡಿದ್ದ ವ್ಯಕ್ತಿಯನ್ನು ಹೆಗಲ ಮೇಲೆ ಹೊತ್ತು ಸಾಗಿದ ಮಹಿಳಾ ಪೊಲೀಸ್, ವಿಡಿಯೋ ವೈರಲ್

ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ಸುರಿಯುತ್ತಿರುವ ಭಾರಿ ಮಳೆ ಅಲ್ಲಿನ ಜನಜೀವನವನ್ನು ತೀವ್ರ ಅಸ್ಥವ್ಯಸ್ಥಗೊಳಿಸಿದ್ದು, ಸತತ ಮಳೆಯಿಂದಾಗಿ ಅಸ್ವಸ್ಥಗೊಂಡಿದ್ದ ವ್ಯಕ್ತಿಯೊಬ್ಬರನ್ನು ಅಲ್ಲಿನ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಹೆಗಲ ಮೇಲೆ ಹೊತ್ತು ಸಾಗಿದ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

ಚೆನ್ನೈ: ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ಸುರಿಯುತ್ತಿರುವ ಭಾರಿ ಮಳೆ ಅಲ್ಲಿನ ಜನಜೀವನವನ್ನು ತೀವ್ರ ಅಸ್ಥವ್ಯಸ್ಥಗೊಳಿಸಿದ್ದು, ಸತತ ಮಳೆಯಿಂದಾಗಿ ಅಸ್ವಸ್ಥಗೊಂಡಿದ್ದ ವ್ಯಕ್ತಿಯೊಬ್ಬರನ್ನು ಅಲ್ಲಿನ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಹೆಗಲ ಮೇಲೆ ಹೊತ್ತು ಸಾಗಿದ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

ಹೌದು.. ಮಳೆ ಪೀಡಿತ ಚೆನ್ನೈನ ಟಿಪಿ ಚತ್ರಂ ಸ್ಮಶಾನದ ಬಳಿ ಈ ಘಟನೆ ನಡೆದಿದ್ದು, ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸೂರಿಲ್ಲದೇ ನೆಂದು ಅಸ್ವಸ್ಥನಾಗಿ ಬಿದ್ದಿದ್ದ ವ್ಯಕ್ತಿಯೊಬ್ಬರನ್ನು ಮಹಿಳಾ ಪೊಲೀಸ್ ಅಧಿಕಾರಿ ರಾಜೇಶ್ವರಿ ಅವರ ಸಹಾಯದಿಂದ ಆಸ್ಪತ್ರೆಗೆ ಸೇರಿಸಲಾಗಿದೆ.

ಪ್ರವಾಹ ಪೀಡಿತ ಪ್ರದೇಶದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ರಾಜೇಶ್ವರಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಮಳೆಯಿಂದಾಗಿ ಅಲ್ಲಿ ಮರವೊಂದು ಬಿದ್ದಿದ್ದು, ಮರವನ್ನು ತೆರವುಗೊಳಿಸುವಾಗ ಅಲ್ಲೇ ಪಕ್ಕದಲ್ಲಿ ಟಿಪಿ ಚತ್ರಂ ಸ್ಮಶಾನದ  ಬಳಿ ವ್ಯಕ್ತಿಯೋರ್ವ ಅಸ್ವಸ್ಥನಾಗಿ ಬಿದ್ದಿದ್ದನ್ನು ಅವರು ಗಮನಿಸಿದ್ದಾರೆ. ಕೂಡಲೇ ಸ್ಥಳೀಯರ ನೆರವಿನಿಂದ ಆತನನ್ನು ತಮ್ಮ ಭುಜದ ಮೇಲೆ ಹಾಕಿಕೊಂಡು ಆಟೋದಲ್ಲಿ ಹಾಕಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಅಲ್ಲದೆ ಅಸ್ವಸ್ಥ ವ್ಯಕ್ತಿಯೊಂದಿಗೆ ಮತ್ತೋರ್ವ ಸ್ಥಳೀಯನನ್ನು ಕಳುಹಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಈ ವಿಡಿಯೋವನ್ನು ಸ್ಥಳೀಯರು ಚಿತ್ರೀಕರಿಸಿದ್ದು, ರಾಜೇಶ್ವರಿ ಅವರ ಕಾರ್ಯಕ್ಕೆ ಎಲ್ಲಡೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT