ಮಳೆಯ ತೀವ್ರತೆಗೆ ಜಲಾವೃತಗೊಂಡಿರುವ ರಸ್ತೆಗಳು 
ದೇಶ

ಚೆನ್ನೈ ನ 500 ರಸ್ತೆಗಳು ಜಲಾವೃತ, ಹೆಲ್ಪ್ ಲೈನ್ ಗೆ 3,800 ದೂರು ದಾಖಲು

ಚೆನ್ನೈ ನಲ್ಲಿ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. 

ಚೆನ್ನೈ: ಚೆನ್ನೈ ನಲ್ಲಿ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. 

ಚೆನ್ನೈ ನ ಪ್ರಮುಖ ಪ್ರದೇಶಗಳಾದ ಟಿ ನಗರ್, ಅಶೋಕ್ ನಗರ್, ಕೆಕೆ ನಗರ್, ತೇಯ್ನಮ್ಪೇಟ್ ಗಳು ಜಲಾವೃತಗೊಂಡಿವೆ. 

ಗುರುವಾರ ಒಂದೇ ದಿನ 502 ರಸ್ತೆಗಳು ಜಲಾವೃತಗೊಂಡಿದ್ದು, ಸ್ಥಳೀಯ ಆಡಳಿತ ತೆರೆದಿರುವ ಸಹಾಯವಾಣಿಗೆ 3,800 ದೂರುಗಳು ಗುರುವಾರ ಒಂದೇ ದಿನ ಬಂದಿದ್ದು, ಈ ಮಳೆಗಾಲದ ಋತುವಿನಲ್ಲಿ ಬಂದಿರುವ ಗರಿಷ್ಠ ದೂರುಗಳಾಗಿವೆ.

ಈಗಾಗಲೇ ಜಲಾವೃತಗೊಂಡಿರುವ ಅಶೋಕ್ ನಗರ ಹಾಗೂ ಟಿ ನಗರಗಳಲ್ಲಿ ನೀರಿನ ಮಟ್ಟ ಮತ್ತಷ್ಟು ಹೆಚ್ಚಳವಾಗಿದ್ದು, ಈ ಭಾಗದಲ್ಲಿ ವಾಸಿಸುತ್ತಿರುವ ಮಂದಿ ಮನೆಯಿಂದ ಹೊರಬರಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. 

ಇಂದು ಮಳೆಯಾಗದೇ ಇದ್ದಲ್ಲಿ ಜಲಾವೃತಗೊಂಡ ರಸ್ತೆಗಳಲ್ಲಿ ನೀರಿನ ಮಟ್ಟ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಕಾರ್ಪೊರೇಷನ್ ಅಧಿಕಾರಿಗಳು ತಿಳಿಸಿದ್ದಾರೆ. 

"ನಾವು ನೀರನ್ನು ಪಂಪ್ ಮಾಡಿ ಅಡ್ಯಾರ್ ನದಿಗೆ ಹೊರಹಾಕುತ್ತಿದ್ದೇವೆ. ಆದರೆ ನೀರಿನ ಮಟ್ಟ ಹೆಚ್ಚಾಗಿದೆ. ಮುಖ್ಯಮಂತ್ರಿಗಳ ನಿವಾಸವೂ ಜಲಾವೃತಗೊಳ್ಳುವುದರಿಂದ ತಪ್ಪಿಸಿಕೊಂಡಿಲ್ಲ. ಸಾಧ್ಯವಾದಷ್ಟೂ ಬೇಗ ನೀರನ್ನು ತೆರವುಗೊಳಿಸಲು ಯತ್ನಿಸುತ್ತೇವೆ" ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT