ಕಾಂಗ್ರೆಸ್ ಹಿರಿಯ ನಾಯಕ ರಶೀದ್ ಅಳ್ವಿ 
ದೇಶ

ಜೈ ಶ್ರೀ ರಾಮ್ ಎಂದು ಕೂಗುವವರೆಲ್ಲಾ ಸಾಧುಗಳಲ್ಲ: ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

ಉತ್ತರ ಪ್ರದೇಶ ಚುನಾವಣೆಯ ಹೊತ್ತಿನಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಹಿಂದೂ ಧರ್ಮದ ಬಗ್ಗೆ ಅನಾವಶ್ಯಕ ಹೇಳಿಕೆ ನೀಡುವ ಮೂಲಕ ವಿವಾದ ಸೃಷ್ಟಿಸುತ್ತಿದ್ದಾರೆ. 

ಸಂಭಾಲ್: ಉತ್ತರ ಪ್ರದೇಶ ಚುನಾವಣೆಯ ಹೊತ್ತಿನಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಹಿಂದೂ ಧರ್ಮದ ಬಗ್ಗೆ ಅನಾವಶ್ಯಕ ಹೇಳಿಕೆ ನೀಡುವ ಮೂಲಕ ವಿವಾದ ಸೃಷ್ಟಿಸುತ್ತಿದ್ದಾರೆ. 

ಇತ್ತೀಚೆಗಷ್ಟೇ ತಮ್ಮ ಪುಸ್ತಕದಲ್ಲಿ ಕಾಂಗ್ರೆಸ್ ನ ಹಿರಿಯ ನಾಯಕ ಸಲ್ಮಾನ್ ಖುರ್ಷಿದ್ ಹಿಂದುತ್ವವನ್ನು ಇಸೀಸ್ ಹಾಗೂ ಬೊಕೊ ಹರಾಮ್ ಉಗ್ರ ಸಂಘಟನೆಗಳಿಗೆ ಹೋಲಿಕೆ ಮಾಡಿ ವಿವಾದಕ್ಕೆ ಕಾರಣರಾಗಿದ್ದರು.

ಈಗ ಈ ಸಾಲಿಗೆ ಮತ್ತೋರ್ವ ಕಾಂಗ್ರೆಸ್ ನಾಯಕ ಸೇರ್ಪಡೆಯಾಗಿದ್ದಾರೆ.  ಜೈ ಶ್ರೀ ರಾಮ್ ಎಂದು ಘೋಷಣೆ ಕೂಗುವವರೆಲ್ಲಾ ಸಾಧುಗಳಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ರಶೀದ್ ಅಳ್ವಿ ರಾಮಾಯಣದ ರಾಕ್ಷಸ ಪಾತ್ರವನ್ನು ಉಲ್ಲೇಖಿಸಿ ಈ ರೀತಿ ಹೇಳಿದ್ದಾರೆ.

ಅಳ್ವಿಯವರ ಈ ಹೇಳಿಕೆಗೆ ಬಿಜೆಪಿ ನಾಯಕ ಅಮಿತ್ ಮಾಳವಿಯಾ ಅವರಿಂದ ತೀಕ್ಷ್ಣವಾದ ಪ್ರತಿಕ್ರಿಯೆ ಬಂದಿದ್ದು, ಈ ರೀತಿ ಹೇಳುವವರೆಲ್ಲಾ; ರಾಕ್ಷಸರು"; ಎಂದಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಉತ್ತರಪ್ರದೇಶದ ಸಂಭಾಲ್​ನಲ್ಲಿ ಗುರುವಾರ ರಾತ್ರಿ ನಡೆದ "ಕಲ್ಕಿ ಮಹೋತ್ಸವದಲ್ಲಿ ಅಳ್ವಿ ಈ ಹೇಳಿಕೆ ನೀಡಿದ್ದಾರೆ. ಜೈ ಶ್ರೀ ರಾಮ್ ಘೋಷಣೆ ಕೂಗುವ ಮೂಲಕ ಕೆಲವರು ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ಅವರೆಲ್ಲಾರು ಮುನಿಗಳು (ಋಷಿಗಳು) ಅಲ್ಲ" ಮತ್ತು ಇಂತಹವರಿಂದ ಎಚ್ಚರವಾಗಿರಬೇಕಾದ ಅಗತ್ಯವಿದೆ. ರಾಮರಾಜ್ಯದಲ್ಲಿ ದ್ವೇಷಕ್ಕೆ ಯಾವುದೇ ಅವಕಾಶವಿಲ್ಲ ಎಂದು ಕಾಂಗ್ರೆಸ್ ನಾಯಕ ಅಳ್ವಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT