ಮಹಿಳಾ ಪೊಲೀಸ್ ಅಧಿಕಾರಿಗೆ ಸಿಎಂ ಗೌರವ 
ದೇಶ

ಚೆನ್ನೈ: ಅಸ್ವಸ್ಥ ವ್ಯಕ್ತಿಯನ್ನು ಭುಜದ ಮೇಲೆ ಹೊತ್ತು ಸಾಗಿ ಆಸ್ಪತ್ರೆಗೆ ಸಾಗಿಸಿದ ಮಹಿಳಾ ಪೊಲೀಸ್ ಗೆ ಸಿಎಂ ಗೌರವ 

ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ಸುರಿಯುತ್ತಿರುವ ಭಾರಿ ಮಳೆಯಲ್ಲಿಯೇ ಅಸ್ವಸ್ಥಗೊಂಡಿದ್ದ ವ್ಯಕ್ತಿಯನ್ನು ತಮ್ಮ ಭುಜದ ಮೇಲೆ ಹೊತ್ತು ಸಾಗಿ ಆಟೋದಲ್ಲಿ ಆಸ್ಪತ್ರೆಗೆ ಸೇರಿಸಿದ ಚೈನ್ನೈ ಪೊಲೀಸ್ ಇನ್ಸ್ ಪೆಕ್ಟರ್ ರಾಜೇಶ್ವರಿ ಅವರನ್ನು ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಗೌರವಿಸಿದ್ದಾರೆ.

ಚೆನ್ನೈ: ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ಸುರಿಯುತ್ತಿರುವ ಭಾರಿ ಮಳೆಯಲ್ಲಿಯೇ ಅಸ್ವಸ್ಥಗೊಂಡಿದ್ದ ವ್ಯಕ್ತಿಯನ್ನು ತಮ್ಮ ಭುಜದ ಮೇಲೆ ಹೊತ್ತು ಸಾಗಿ ಆಟೋದಲ್ಲಿ ಆಸ್ಪತ್ರೆಗೆ ಸೇರಿಸಿದ ಚೈನ್ನೈ ಪೊಲೀಸ್ ಇನ್ಸ್ ಪೆಕ್ಟರ್ ರಾಜೇಶ್ವರಿ ಅವರನ್ನು ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಗೌರವಿಸಿದ್ದಾರೆ.

ತಮ್ಮ ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಉಪಸ್ಥಿತಿಯಲ್ಲಿ ರಾಜೇಶ್ವರಿ ಅವರು ಮಾನವೀಯ ಕಾರ್ಯವನ್ನು ಶ್ಲಾಘಿಸಿದ ಎಂಕೆ ಸ್ಚಾಲಿನ್ ಅವರು ಸರ್ಕಾರದಿಂದ ಪ್ರಶಂಸಾ ಪತ್ರವನ್ನು ನೀಡಿ ಗೌರವಿಸಿದ್ದಾರೆ. ಅಲ್ಲದೆ ಕಿರಿಯ ಅಧಿಕಾರಿಯ ಮಾನವೀಯ ಕಾರ್ಯಕ್ಕೆ ಹಿರಿಯ ಅಧಿಕಾರಿಗಳೂ ಕೂಡ ಶ್ಲಾಘನೆ ವ್ಯಕ್ತಪಡಿಸಿದ್ದು, 'ಇನ್ಸ್ ಪೆಕ್ಟರ್ ರಾಜೇಶ್ವರಿ ಅವರು ಉತ್ತಮ ಕೆಲಸ ಮಾಡಿದ್ದಾರೆ. ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಪ್ರಜ್ಞಾಹೀನ ವ್ಯಕ್ತಿಯನ್ನು ಆಕೆಯೇ ಎತ್ತಿ ಆಸ್ಪತ್ರೆಗೆ ಕಳುಹಿಸಿದ್ದಾರೆ.

ಆಸ್ಪತ್ರೆಯಲ್ಲಿ ಯುವಕನಿಗೆ ಚಿಕಿತ್ಸೆ ನಡೆಯುತ್ತಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಜೇಶ್ವರಿ ಅವರು ಅತ್ಯುತ್ತಮ ಅಧಿಕಾರಿಯಾಗಿದ್ದು, ಎಲ್ಲಾ ಗೌರವಗಳು ಅವರಿಗೇ ಸಲ್ಲುತ್ತವೆ ಎಂದು ಚೆನ್ನೈ ಪೊಲೀಸ್ ಆಯುಕ್ತ ಶಂಕರ್ ಜಿವಾಲ್ ಹೇಳಿದ್ದಾರೆ.

ಏನಿದು ಘಟನೆ?
ಮಳೆ ಪೀಡಿತ ಚೆನ್ನೈನ ಟಿಪಿ ಚತ್ರಂ ಸ್ಮಶಾನದ ಬಳಿ ಈ ಘಟನೆ ನಡೆದಿದ್ದು, ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸೂರಿಲ್ಲದೇ ನೆಂದು ಅಸ್ವಸ್ಥನಾಗಿ ಬಿದ್ದಿದ್ದ ವ್ಯಕ್ತಿಯೊಬ್ಬರನ್ನು ಮಹಿಳಾ ಪೊಲೀಸ್ ಅಧಿಕಾರಿ ರಾಜೇಶ್ವರಿ ಅವರ ಸಹಾಯದಿಂದ ಆಸ್ಪತ್ರೆಗೆ ಸೇರಿಸಲಾಗಿದೆ.

ಇದನ್ನೂ ಓದಿ: ಚೆನ್ನೈನಲ್ಲಿ ಭಾರಿ ಮಳೆ: ಅಸ್ವಸ್ಥಗೊಂಡಿದ್ದ ವ್ಯಕ್ತಿಯನ್ನು ಹೆಗಲ ಮೇಲೆ ಹೊತ್ತು ಸಾಗಿದ ಮಹಿಳಾ ಪೊಲೀಸ್, ವಿಡಿಯೋ ವೈರಲ್

ಪ್ರವಾಹ ಪೀಡಿತ ಪ್ರದೇಶದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ರಾಜೇಶ್ವರಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಮಳೆಯಿಂದಾಗಿ ಅಲ್ಲಿ ಮರವೊಂದು ಬಿದ್ದಿದ್ದು, ಮರವನ್ನು ತೆರವುಗೊಳಿಸುವಾಗ ಅಲ್ಲೇ ಪಕ್ಕದಲ್ಲಿ ಟಿಪಿ ಚತ್ರಂ ಸ್ಮಶಾನದ  ಬಳಿ ವ್ಯಕ್ತಿಯೋರ್ವ ಅಸ್ವಸ್ಥನಾಗಿ ಬಿದ್ದಿದ್ದನ್ನು ಅವರು ಗಮನಿಸಿದ್ದಾರೆ. ಕೂಡಲೇ ಸ್ಥಳೀಯರ ನೆರವಿನಿಂದ ಆತನನ್ನು ತಮ್ಮ ಭುಜದ ಮೇಲೆ ಹಾಕಿಕೊಂಡು ಆಟೋದಲ್ಲಿ ಹಾಕಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಅಲ್ಲದೆ ಅಸ್ವಸ್ಥ ವ್ಯಕ್ತಿಯೊಂದಿಗೆ ಮತ್ತೋರ್ವ ಸ್ಥಳೀಯನನ್ನು ಕಳುಹಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಈ ವಿಡಿಯೋವನ್ನು ಸ್ಥಳೀಯರು ಚಿತ್ರೀಕರಿಸಿದ್ದು, ರಾಜೇಶ್ವರಿ ಅವರ ಕಾರ್ಯಕ್ಕೆ ಎಲ್ಲಡೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!