ಪಂಜಾಬ್ ಸಿಎಂ ಚನ್ನಿ 
ದೇಶ

ದೆಹಲಿ ಟ್ರಾಕ್ಟರ್ ರ್ಯಾಲಿಯಲ್ಲಿ ಬಂಧನಕ್ಕೊಳಗಾಗಿದ್ದ ಪ್ರತಿ ರೈತರಿಗೆ 2 ಲಕ್ಷ ರೂಪಾಯಿ ಘೋಷಿಸಿದ ಪಂಜಾಬ್ ಸರ್ಕಾರ!

ದೆಹಲಿಯಲ್ಲಿ 2021 ರ ಜನವರಿ 26 ರಂದು ಹಿಂಸಾಚಾರಕ್ಕೆ ತಿರುಗಿದ ಟ್ರ್ಯಾಕ್ಟರ್ ರ್ಯಾಲಿ ಪ್ರಕರಣದಲ್ಲಿ ಬಂಧನಕ್ಕೊಳಗಾದವರಿಗೆ ಪಂಜಾಬ್ ಸರ್ಕಾರ 2 ಲಕ್ಷ ರೂಪಾಯಿಗಳ ಆರ್ಥಿಕ ನೆರವನ್ನು ಘೋಷಿಸಿದೆ. 

ಚಂಡೀಗಢ: ದೆಹಲಿಯಲ್ಲಿ 2021 ರ ಜನವರಿ 26 ರಂದು ಹಿಂಸಾಚಾರಕ್ಕೆ ತಿರುಗಿದ ಟ್ರ್ಯಾಕ್ಟರ್ ರ್ಯಾಲಿ ಪ್ರಕರಣದಲ್ಲಿ ಬಂಧನಕ್ಕೊಳಗಾದವರಿಗೆ ಪಂಜಾಬ್ ಸರ್ಕಾರ 2 ಲಕ್ಷ ರೂಪಾಯಿಗಳ ಆರ್ಥಿಕ ನೆರವನ್ನು ಘೋಷಿಸಿದೆ. 

ಪಂಜಾಬ್ ಸರ್ಕಾರದ ಈ ನಡೆ ಕೇಂದ್ರ ಸರ್ಕಾರ ಮತ್ತು ಪಂಜಾಬ್ ನಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರದ ನಡುವೆ ಮತ್ತೊಂದು ಸಮರ, ವಿವಾದವನ್ನು ಹುಟ್ಟುಹಾಕಲಿದೆ.

ದೆಹಲಿಯಲ್ಲಿ ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ಪಂಜಾಬ್-ಹರ್ಯಾಣ ರೈತರು ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಇದರ ಭಾಗವಾಗಿ ಈ ವರ್ಷದ ಜ.26 ರಂದು, ರೈತರು ದೆಹಲಿಯ ನಿರ್ದಿಷ್ಟ ಪ್ರದೇಶಗಳಲ್ಲಿ ಟ್ರಾಕ್ಟರ್ ರ್ಯಾಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಈ ಪ್ರತಿಭಟನೆ ಹಿಂಸಾಚಾರದ ಸ್ವರೂಪ ಪಡೆದು ಹಲವು ಮಂದಿಯನ್ನು ಬಂಧಿಸಲಾಗಿತ್ತು.

ಈ ಘಟನೆಯನ್ನು ಬಂಧನಕ್ಕೊಳಗಾದವರಿಗೆ 2 ಲಕ್ಷ ರೂಪಾಯಿ ನೀಡುವುದರ ಬಗ್ಗೆ ಪಂಜಾಬ್ ಸಿಎಂ ಚರಣ್ ಜಿತ್ ಸಿಂಗ್ ಛನ್ನಿ ಟ್ವೀಟ್ ಮೂಲಕ ಖಚಿತಪಡಿಸಿದ್ದು,  ಜ.26 ರ ಟ್ರ್ಯಾಕ್ಟರ್ ರ್ಯಾಲಿಯ ಪ್ರತಿಭಟನೆ ವೇಳೆ ದೆಹಲಿ ಪೊಲೀಸರಿಂದ ಬಂಧನಕ್ಕೆ ಒಳಗಾದವರಿಗೆ ತಲಾ 2 ಲಕ್ಷ ರೂಪಾಯಿ ನೆರವು ನೀಡುವುದಾಗಿ ಘೋಷಿಸಲಾಗಿದೆ. "ರೈತರ ಪ್ರತಿಭಟನೆಯ ಪರವಾಗಿರುವ ನಮ್ಮ ಸರ್ಕಾರದ ನಿಲುವನ್ನು ಮತ್ತೊಮ್ಮೆ ಸ್ಪಷ್ಟಪಡಿಸುತ್ತಿದ್ದು ದೆಹಲಿಯಲ್ಲಿ ಜ.26 ರಂದು ಪ್ರತಿಭಟನೆ ವೇಳೆ ಬಂಧನಕ್ಕೆ ಒಳಗಾದವರಿಗೆ ನಮ್ಮ ಸರ್ಕಾರ 2 ಲಕ್ಷ ರೂಪಾಯಿ ನೆರವು ನೀಡುತ್ತಿದೆ" ಎಂದು ಸಿಎಂ ಛನ್ನಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT