ತಿರುಮಲದಲ್ಲಿ ಭಾರಿ ಮಳೆ 
ದೇಶ

ತಿರುಮಲದಲ್ಲಿ ಭಾರಿ ಮಳೆ: ಪ್ರವಾಹದಿಂದ ಯಾತ್ರಿಕರು ತತ್ತರ; ಅಲ್ಲಲ್ಲಿ ಭೂಕುಸಿತ, ಘಾಟ್ ರಸ್ತೆಗಳು ತಾತ್ಕಾಲಿಕ ಬಂದ್!

ಖ್ಯಾತ ಧಾರ್ಮಿಕ ಯಾತ್ರಾತಾಣ ತಿರುಪತಿ-ತಿರುಮಲದಲ್ಲಿ ಸುರಿಯುತ್ತಿರುವ ವರ್ಷಧಾರೆ ಭಾರಿ ಅವಾಂತರ ಸೃಷ್ಟಿ ಮಾಡಿದ್ದು, ತಿರುಮಲದಲ್ಲಿ ಪ್ರವಾಹ ನೀರಿನಿಂದ ಯಾತ್ರಿಕರು ತತ್ತರಿಸಿ ಹೋಗಿದ್ದಾರೆ.

ತಿರುಪತಿ: ಖ್ಯಾತ ಧಾರ್ಮಿಕ ಯಾತ್ರಾತಾಣ ತಿರುಪತಿ-ತಿರುಮಲದಲ್ಲಿ ಸುರಿಯುತ್ತಿರುವ ವರ್ಷಧಾರೆ ಭಾರಿ ಅವಾಂತರ ಸೃಷ್ಟಿ ಮಾಡಿದ್ದು, ತಿರುಮಲದಲ್ಲಿ ಪ್ರವಾಹ ನೀರಿನಿಂದ ಯಾತ್ರಿಕರು ತತ್ತರಿಸಿ ಹೋಗಿದ್ದಾರೆ.

ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತದಿಂದಾಗಿ ದಕ್ಷಿಣ ಭಾರತದ ರಾಜ್ಯಗಳು ಅಂದರೆ ತಮಿಳುನಾಡು, ಕೇರಳ, ಆಂಧ್ರ ಪ್ರದೇಶ ಮತ್ತು ಕರ್ನಾಟಕದಲ್ಲಿ ಭಾರಿ ಮಳೆಯಾಗುತ್ತಿದೆ. ಪರಿಣಾಮ ಆಂಧ್ರ ಪ್ರದೇಶದಲ್ಲೂ ಪ್ರಮುಖವಾಗಿ ಆಂಧ್ರ ಪ್ರದೇಶ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುತ್ತಿದೆ. ತಿರುಮಲದ ಪ್ರಮುಖ ಯಾತ್ರಾ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ಬೆಟ್ಟಗುಡ್ಡಗಳಲ್ಲಿ ಸಣ್ಣ ಜಲಪಾತಗಳು ಸೃಷ್ಟಿಯಾಗಿವೆ. ಅಲ್ಲದೆ ಭಾರಿ ಮಳೆಯಿಂದಾಗಿ ತಿರುಮಲದಲ್ಲಿ ಜನಜೀವನ ಅಸ್ಥವ್ಯಸ್ಥವಾಗಿದ್ದು, ಹಲವು ಮರಗಳು ಬುಡಮೇಲಾಗಿ ಅಲ್ಲಲ್ಲಿ ಭೂಕುಸಿತ ಕೂಡ ಉಂಟಾಗಿವೆ. 

ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಕೆಲವೇ ಗಂಟೆಗಳ ಅವಧಿಯಲ್ಲಿ ತಿರುಮಲದಲ್ಲಿ ಬರೊಬ್ಬರಿ 10 ಸೆಂಮೀ ಮಳೆಯಾಗಿದೆ. ಮಳೆಯಿಂದಾಗಿ ತಿರುಮಲದಲ್ಲಿ ಮೂರು ಬೃಹತ್ ಮರಗಳು ನೆಲಕ್ಕುರುಳಿವೆ. ತಿರುಮಲದ ಪ್ರಮುಖ ಯಾತ್ರಾ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ಅಲ್ಲಲ್ಲಿ ಭೂಕುಸಿತ ಸಂಭವಿಸಿದೆ. ಹೀಗಾಗಿ ತಾತ್ಕಾಲಿಕವಾಗಿ ಘಾಟ್ ರಸ್ತೆಗಳನ್ನು ಬಂದ್ ಮಾಡಲಾಗಿದೆ. 

ಅಲಿಪಿರಿಯಲ್ಲಿ ಪ್ರವಾಹ, ಭೀತಿಯಲ್ಲಿ ಯಾತ್ರಿಕರು
ಇನ್ನು ತಿರುಪತಿಯಿಂದ ತಿರುಮಲಕ್ಕೆ ಸಾಗುವ ಅಲಿಪಿರಿ ಮಾರ್ಗದಲ್ಲಿ ಪ್ರವಾಹದ ನೀರು ನುಗ್ಗಿದ್ದು, ಕಾಲ್ದಾರಿ ಸಾಗುವ ಕಾಂಪ್ಲೆಕ್ಸ್ ಒಳಗೆ ಭಾರಿ ಪ್ರಮಾಣದ ನೀರು ಹರಿಯುತ್ತಿದೆ. ಈ ಕುರಿತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಭಾರಿ ನೀರಿನ ನಡುವೆಯೇ ಯಾತ್ರಿಕರು ಮೆಟ್ಟಿಲುಗಳನ್ನು ಹತ್ತಿ ದೇಗುಲಕ್ಕೆ ತೆರಳುವ ದೃಶ್ಯಗಳು ಇದೀಗ ವೈರಲ್ ಆಗುತ್ತಿವೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT