ಸಾಂದರ್ಭಿಕ ಚಿತ್ರ 
ದೇಶ

ಸೆಪ್ಟೆಂಬರ್ 27 ರವರೆಗೆ ಹಿರಿಯರಿಗೆ 17. 26 ಕೋಟಿ ಡೋಸ್ ಕೋವಿಡ್ -19 ಲಸಿಕೆ ನೀಡಿಕೆ-  ಕೇಂದ್ರ ಸರ್ಕಾರ

ದೇಶದಲ್ಲಿ ಸೆಪ್ಟೆಂಬರ್ 27ರವರೆಗೆ ವಯೋವೃದ್ಧರು ಹಾಗೂ ವಿಶೇಷ ಚೇತನರಿಗೆ  ಹತ್ತಿರದ ಕೋವಿಡ್ ಲಸಿಕಾ ಕೇಂದ್ರಗಳಿಂದ ಸುಮಾರು 17.26 ಕೋಟಿ ಡೋಸ್ ಕೋವಿಡ್-19 ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಶನಿವಾರ ಸುಪ್ರೀಂಕೋರ್ಟ್ ಗೆ ತಿಳಿಸಿದೆ.

ನವದೆಹಲಿ: ದೇಶದಲ್ಲಿ ಸೆಪ್ಟೆಂಬರ್ 27ರವರೆಗೆ ವಯೋವೃದ್ಧರು ಹಾಗೂ ವಿಶೇಷ ಚೇತನರಿಗೆ  ಹತ್ತಿರದ ಕೋವಿಡ್ ಲಸಿಕಾ ಕೇಂದ್ರಗಳಿಂದ ಸುಮಾರು 17.26 ಕೋಟಿ ಡೋಸ್ ಕೋವಿಡ್-19 ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಶನಿವಾರ ಸುಪ್ರೀಂಕೋರ್ಟ್ ಗೆ ತಿಳಿಸಿದೆ.

ವೃದ್ದರು ಹಾಗೂ ವಿಶೇಷ ಚೇತನರಿಗೆ ಕೋವಿಡ್-19 ಲಸಿಕೆಗೆ  ಶಿಫಾರಸ್ಸಿಗಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮೇ 2021ರಲ್ಲಿ ತಜ್ಞರ ಸಮಿತಿಯೊಂದನ್ನು ರಚಿಸಿತ್ತು ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ಅವರ ಮೂಲಕ ಕೇಂದ್ರ ಸರ್ಕಾರ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ಎಎಸ್ ಬೊಪಣ್ಣ ಅವರಿದ್ದ ನ್ಯಾಯಪೀಠಕ್ಕೆ ಕೇಂದ್ರ ಸರ್ಕಾರ ತಿಳಿಸಿತು.

 ವಿಕಲಾಂಗತೆ ಮತ್ತಿತರ ಸಮಸ್ಯೆಗಳಿಂದ ಬಳಲುತ್ತಿರುವ ಜನರಿಗೆ ಮನೆ- ಮನೆಗೆ ತೆರಳಿ ಕೋವಿಡ್ ಲಸಿಕೆ ಒದಗಿಸುವಂತೆ ಕೋರಿ ಎನ್ ಜಿಒವೊಂದು ಸಲ್ಲಿಸಿದ ಅರ್ಜಿಗೆ ಕೇಂದ್ರ  ಸರ್ಕಾರ ಪ್ರತಿಕ್ರಿಯಿಸಿದ್ದು, ವೃದ್ದರು ಹಾಗೂ ವಿಶೇಷ ಚೇತನರಿಗೆ ಲಸಿಕೆಯ ವಿಶೇಷ ಅಗತ್ಯತೆಗೆ ಹತ್ತಿರದ ಕೋವಿಡ್ ಲಸಿಕಾ ಕೇಂದ್ರಗಳ ಕಾರ್ಯತಂತ್ರವನ್ನು ತಜ್ಞರ ಸಮಿತಿ ಶಿಫಾರಸು ಮಾಡಿತ್ತು ಎಂದು ಅಫಿಡವಿಟ್ ನಲ್ಲಿ ಕೇಂದ್ರ ಸರ್ಕಾರ ಹೇಳಿದೆ. 

ಸೆಪ್ಟೆಂಬರ್ 27, 2021ರವರೆಗೆ ಸುಮಾರು 17.26 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಹತ್ತಿರದ ಕೋವಿಡ್ ಲಸಿಕಾ ಕೇಂದ್ರಗಳ ಪ್ರಯೋಜನವನ್ನು ವಿಶೇಷ ಚೇತನರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಪಡೆದುಕೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT