ಕೋವಿಡ್-19 
ದೇಶ

ಕೋವಿಡ್-19: ಭಾರತದಲ್ಲಿ 11,850 ಹೊಸ ಕೇಸುಗಳು ವರದಿ, 555 ಸಾವು, ಕಳೆದ 274 ದಿನಗಳಲ್ಲಿಯೇ ಅತಿ ಕಡಿಮೆ

ಭಾರತದಲ್ಲಿ ಮಹಾಮಾರಿ ಕೊರೋನಾ ಮತ್ತಷ್ಟು ಕಡಿಮೆಯಾಗುತ್ತಿದೆ. ಇಂದು ಶನಿವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 11 ಸಾವಿರದ 850 ಮಂದಿಯಲ್ಲಿ ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 555 ಮಂದಿ ಮೃತಪಟ್ಟಿದ್ದಾರೆ. 

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಮತ್ತಷ್ಟು ಕಡಿಮೆಯಾಗುತ್ತಿದೆ. ಇಂದು ಶನಿವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 11 ಸಾವಿರದ 850 ಮಂದಿಯಲ್ಲಿ ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 555 ಮಂದಿ ಮೃತಪಟ್ಟಿದ್ದಾರೆ. 

ದೇಶದಲ್ಲಿ ಸಕ್ರಿಯ ಕೊರೋನಾ ಸೋಂಕಿತರ ಸಂಖ್ಯೆ 1 ಲಕ್ಷದ 36 ಸಾವಿರದ 308 ಇದ್ದು ಕಳೆದ 274 ದಿನಗಳಲ್ಲಿಯೇ ಇದು ಅತ್ಯಂತ ಕಡಿಮೆಯಾಗಿದೆ ಎಂದು  ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ 12 ಸಾವಿರದ 403 ಮಂದಿ ಕೊರೋನಾದಿಂದ ಗುಣಮುಖರಾಗುವುದರೊಂದಿಗೆ ಇದುವರಿಗೆ ಸೋಂಕಿನಿಂದ ದೇಶದಲ್ಲಿ ಗುಣಮುಖ ಹೊಂದಿದವರ ಸಂಖ್ಯೆ 3 ಕೋಟಿಯ 38 ಲಕ್ಷದ 26 ಸಾವಿರದ 483 ಆಗಿದೆ. ಒಟ್ಟು ಕೇಸಿಗಿಂತ ಸಕ್ರಿಯ ರೋಗಿಗಳ ಸಂಖ್ಯೆ ಶೇಕಡಾ 1ಕ್ಕಿಂತ ಕಡಿಮೆಯಿದ್ದು ಪ್ರಸ್ತುತ ಸಕ್ರಿಯ ರೋಗಿಗಳ ಪ್ರಮಾಣ ಶೇಕಡಾ 0.40ರಷ್ಟಿದ್ದು, ಕಳೆದ ವರ್ಷ ಮಾರ್ಚ್ ನಿಂದ ಇಲ್ಲಿಯವರೆಗೆ ಅತಿ ಕಡಿಮೆಯಾಗಿದೆ. 

ಗುಣಮುಖ ಹೊಂದಿರುವವರ ಪ್ರಮಾಣ ಶೇಕಡಾ 98.26ರಷ್ಟಾಗಿದ್ದು, ಕಳೆದ ವರ್ಷ ಮಾರ್ಚ್ 2020ರ ನಂತರ ಗುಣಮುಖ ಹೊಂದುತ್ತಿರುವವರ ಸಂಖ್ಯೆ ಅತ್ಯಧಿಕವಾಗಿದೆ. ನಿನ್ನೆ ಒಂದೇ ದಿನ 12 ಲಕ್ಷ 66 ಸಾವಿರದ 589 ಮಂದಿಯ ಮಾದರಿ ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ- I C M R ತಿಳಿಸಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಕೋವಿಡ್-19 ವಿರುದ್ಧ ಹೋರಾಡಲು ಜನರಿಗೆ ನೀಡುವ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 111.40 ಕೋಟಿ ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಆರೋಗ್ಯ ಇಲಾಖೆಯಿಂದ ರಾಜ್ಯಗಳಿಗೆ ಹಣ ಬಿಡುಗಡೆ: ಇನ್ನು 15ನೇ ಹಣಕಾಸು ಆಯೋಗದ ಶಿಫಾರಸಿನಂತೆ 19 ರಾಜ್ಯಗಳ ಸ್ಥಳೀಯ ಸಂಸ್ಥೆಗಳಿಗೆ ಆರೋಗ್ಯ ಇಲಾಖೆ 8 ಸಾವಿರದ 453.92 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ, ನೊಬೆಲ್​ ಶಾಂತಿ ಪ್ರಶಸ್ತಿಗೆ ನನ್ನಷ್ಟು ಅರ್ಹರು ಯಾರೂ ಇಲ್ಲ; ಡೊನಾಲ್ಡ್ ಟ್ರಂಪ್

ಡಿ-ಕೋಡ್: ದ್ವೇಷ ಭಾಷಣ ಮಸೂದೆ ಎಂಬ ‘ಗರಗಸ’; DDT ಆಗುವತ್ತ ಕರ್ನಾಟಕ ಸರ್ಕಾರ

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಮಸೂದೆ ವಿರುದ್ಧ ರಾಷ್ಟ್ರಪತಿಗೆ ನಿಯೋಗ; ರಾಜ್ಯ ಸರ್ಕಾರ

WPL 2026: ಮೊದಲ ಪಂದ್ಯದಲ್ಲೇ ಸಿನಿಮಾ ತೋರಿಸಿದ RCB, 4 ಎಸೆತಗಳಲ್ಲಿ 20 ರನ್! ಹೀರೋ ಆದ Nadine de Klerk!

SCROLL FOR NEXT