ಮೃತದೇಹದ ಬಳಿ ರೋಧಿಸುತ್ತಿರುವ ಕುಟುಂಬಸ್ಥರು 
ದೇಶ

ಮಧ್ಯಪ್ರದೇಶ:  ಇಬ್ಬರು ಗ್ರಾಮಸ್ಥರನ್ನು ಅಪಹರಿಸಿ, ಹತ್ಯೆಗೈದ ನಕ್ಸಲೀಯರು!

 ಪೊಲೀಸ್ ಮಾಹಿತಿದಾರರು ಎಂಬ ಅನುಮಾನದಿಂದ ಶಸ್ತ್ರ ಸಜ್ಜಿತ ನಕ್ಸಲೀಯರು ಇಬ್ಬರು ಗ್ರಾಮಸ್ಥರನ್ನು ಅಪಹರಿಸಿ,  ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ನಕ್ಸಲ್ ಪೀಡಿತ ಬಾಲ್ಗಟ್ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಕಳೆದ ವರ್ಷ ಮಹಿಳಾ ನಕ್ಸಲ್ ಒಬ್ಬರನ್ನು ಪೊಲೀಸರು ಗುಂಡಿಟ್ಟು ಹತ್ಯೆ ಮಾಡಿದ್ದರು. 

ಭೂಪಾಲ್: ಪೊಲೀಸ್ ಮಾಹಿತಿದಾರರು ಎಂಬ ಅನುಮಾನದಿಂದ ಶಸ್ತ್ರ ಸಜ್ಜಿತ ನಕ್ಸಲೀಯರು ಇಬ್ಬರು ಗ್ರಾಮಸ್ಥರನ್ನು ಅಪಹರಿಸಿ,  ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ನಕ್ಸಲ್ ಪೀಡಿತ ಬಾಲ್ಗಟ್ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಕಳೆದ ವರ್ಷ ಮಹಿಳಾ ನಕ್ಸಲ್ ಒಬ್ಬರನ್ನು ಪೊಲೀಸರು ಗುಂಡಿಟ್ಟು ಹತ್ಯೆ ಮಾಡಿದ್ದರು. 

 ಸಂತೋಷ್ ಯಾದವ್ ಮತ್ತು ಜಗದೀಶ್ ಪಟೇಲ್ ಎಂಬ ಇಬ್ಬರು ವ್ಯಕ್ತಿಗಳನ್ನು ಅವರ ಮನೆಯಿಂದ ನಾಲ್ವರು ಮುಸುಕುದಾರಿ ಮಾವೋವಾದಿಗಳು ಶುಕ್ರವಾರ ರಾತ್ರಿ 7 ಗಂಟೆ ಸುಮಾರಿನಲ್ಲಿ ಅಪಹರಿಸಿದ್ದಾರೆ. ಸುಮಾರು ಎಂಟು ಗಂಟೆಗಳ ನಂತರ ಮೂರು ಗಂಟೆ ಸುಮಾರಿನಲ್ಲಿ ಅರಣ್ಯಕ್ಕೆ ಹೊಂದಿಕೊಂಡಿರುವ ಗ್ರಾಮದಲ್ಲಿ ಬಂದೂಕಿನ ಶಬ್ದ ಕೇಳಿಬಂದಿದೆ. ಶನಿವಾರ ಸೂರ್ಯೋದಯ ನಂತರ ಅವರಿಬ್ಬರ ಮೃತದೇಹಗಳು ಕಂಡುಬಂದಿವೆ.

ಮೃತದೇಹಗಳು ಬಿದಿದ್ದ ಪ್ರದೇಶದಿಂದ ಸಿಪಿಐ (ಮಾವೋವಾದಿ) ಕಾಟಿಯಾ ಮೊಚಿ ಪ್ರದೇಶ ಸಮಿತಿ ಹೆಸರಿನಲ್ಲಿದ್ದ ಪತ್ರವೊಂದನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅದರಲ್ಲಿ ಗ್ರಾಮಸ್ಥರು ಪೊಲೀಸ್ ಮಾಹಿತಿದಾರರು ಆಗಬಾರದು, ತಪ್ಪಿದರೆ ಇಂತಹ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.  ಪೊಲೀಸ್ ಮಾಹಿತಿದಾರರೆಂದು ಅಮಾಯಕ ಗ್ರಾಮಸ್ಥರನ್ನು ನಕ್ಸಲೀಯರು ಹೇಗೆ ಟಾರ್ಗೆಟ್ ಮಾಡುತ್ತಿದ್ದಾರೆ ಎಂಬುದು ಈ ಘಟನೆಯಿಂದ ಗೊತ್ತಾಗುತ್ತದೆ ಎಂದು ಬಾಲ್ಗಟ್ ಎಸ್ ಪಿ ಹೇಳಿದ್ದಾರೆ.

ನಕ್ಸಲೀಯರಿಂದ ಹತ್ಯೆಗೀಡಾದ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಹಾಗೂ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಕೆಲಸ ಕೊಡುವುದಾಗಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್ ಹೇಳಿದ್ದಾರೆ. ನಕ್ಸಲ್ ವಿರೋಧಿ ಕಾರ್ಯಾಚರಣೆಯನ್ನು ತೀವ್ರಗೊಳಿಸುವಂತೆ ಪೊಲೀಸರಿಗೆ ಚೌಹ್ಹಾಣ್ ನಿರ್ದೇಶನ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್‌ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ