ಮೃತದೇಹದ ಬಳಿ ರೋಧಿಸುತ್ತಿರುವ ಕುಟುಂಬಸ್ಥರು 
ದೇಶ

ಮಧ್ಯಪ್ರದೇಶ:  ಇಬ್ಬರು ಗ್ರಾಮಸ್ಥರನ್ನು ಅಪಹರಿಸಿ, ಹತ್ಯೆಗೈದ ನಕ್ಸಲೀಯರು!

 ಪೊಲೀಸ್ ಮಾಹಿತಿದಾರರು ಎಂಬ ಅನುಮಾನದಿಂದ ಶಸ್ತ್ರ ಸಜ್ಜಿತ ನಕ್ಸಲೀಯರು ಇಬ್ಬರು ಗ್ರಾಮಸ್ಥರನ್ನು ಅಪಹರಿಸಿ,  ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ನಕ್ಸಲ್ ಪೀಡಿತ ಬಾಲ್ಗಟ್ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಕಳೆದ ವರ್ಷ ಮಹಿಳಾ ನಕ್ಸಲ್ ಒಬ್ಬರನ್ನು ಪೊಲೀಸರು ಗುಂಡಿಟ್ಟು ಹತ್ಯೆ ಮಾಡಿದ್ದರು. 

ಭೂಪಾಲ್: ಪೊಲೀಸ್ ಮಾಹಿತಿದಾರರು ಎಂಬ ಅನುಮಾನದಿಂದ ಶಸ್ತ್ರ ಸಜ್ಜಿತ ನಕ್ಸಲೀಯರು ಇಬ್ಬರು ಗ್ರಾಮಸ್ಥರನ್ನು ಅಪಹರಿಸಿ,  ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ನಕ್ಸಲ್ ಪೀಡಿತ ಬಾಲ್ಗಟ್ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಕಳೆದ ವರ್ಷ ಮಹಿಳಾ ನಕ್ಸಲ್ ಒಬ್ಬರನ್ನು ಪೊಲೀಸರು ಗುಂಡಿಟ್ಟು ಹತ್ಯೆ ಮಾಡಿದ್ದರು. 

 ಸಂತೋಷ್ ಯಾದವ್ ಮತ್ತು ಜಗದೀಶ್ ಪಟೇಲ್ ಎಂಬ ಇಬ್ಬರು ವ್ಯಕ್ತಿಗಳನ್ನು ಅವರ ಮನೆಯಿಂದ ನಾಲ್ವರು ಮುಸುಕುದಾರಿ ಮಾವೋವಾದಿಗಳು ಶುಕ್ರವಾರ ರಾತ್ರಿ 7 ಗಂಟೆ ಸುಮಾರಿನಲ್ಲಿ ಅಪಹರಿಸಿದ್ದಾರೆ. ಸುಮಾರು ಎಂಟು ಗಂಟೆಗಳ ನಂತರ ಮೂರು ಗಂಟೆ ಸುಮಾರಿನಲ್ಲಿ ಅರಣ್ಯಕ್ಕೆ ಹೊಂದಿಕೊಂಡಿರುವ ಗ್ರಾಮದಲ್ಲಿ ಬಂದೂಕಿನ ಶಬ್ದ ಕೇಳಿಬಂದಿದೆ. ಶನಿವಾರ ಸೂರ್ಯೋದಯ ನಂತರ ಅವರಿಬ್ಬರ ಮೃತದೇಹಗಳು ಕಂಡುಬಂದಿವೆ.

ಮೃತದೇಹಗಳು ಬಿದಿದ್ದ ಪ್ರದೇಶದಿಂದ ಸಿಪಿಐ (ಮಾವೋವಾದಿ) ಕಾಟಿಯಾ ಮೊಚಿ ಪ್ರದೇಶ ಸಮಿತಿ ಹೆಸರಿನಲ್ಲಿದ್ದ ಪತ್ರವೊಂದನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅದರಲ್ಲಿ ಗ್ರಾಮಸ್ಥರು ಪೊಲೀಸ್ ಮಾಹಿತಿದಾರರು ಆಗಬಾರದು, ತಪ್ಪಿದರೆ ಇಂತಹ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.  ಪೊಲೀಸ್ ಮಾಹಿತಿದಾರರೆಂದು ಅಮಾಯಕ ಗ್ರಾಮಸ್ಥರನ್ನು ನಕ್ಸಲೀಯರು ಹೇಗೆ ಟಾರ್ಗೆಟ್ ಮಾಡುತ್ತಿದ್ದಾರೆ ಎಂಬುದು ಈ ಘಟನೆಯಿಂದ ಗೊತ್ತಾಗುತ್ತದೆ ಎಂದು ಬಾಲ್ಗಟ್ ಎಸ್ ಪಿ ಹೇಳಿದ್ದಾರೆ.

ನಕ್ಸಲೀಯರಿಂದ ಹತ್ಯೆಗೀಡಾದ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಹಾಗೂ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಕೆಲಸ ಕೊಡುವುದಾಗಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್ ಹೇಳಿದ್ದಾರೆ. ನಕ್ಸಲ್ ವಿರೋಧಿ ಕಾರ್ಯಾಚರಣೆಯನ್ನು ತೀವ್ರಗೊಳಿಸುವಂತೆ ಪೊಲೀಸರಿಗೆ ಚೌಹ್ಹಾಣ್ ನಿರ್ದೇಶನ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT