ಕಾಂಗ್ರೆಸ್ ಮುಖಂಡ ಸಲ್ಮಾನ್ ಖುರ್ಷಿದ್ 
ದೇಶ

ಖುರ್ಷಿದ್ ಪುಸ್ತಕದ ವಿರುದ್ಧ ದೆಹಲಿ ಕೋರ್ಟ್ ನಲ್ಲಿ ಪ್ರಕರಣ ದಾಖಲು; ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ 

ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್ ಪುಸ್ತಕದ ಮುದ್ರಣ ಹಾಗೂ ಪ್ರಸರಣಕ್ಕೆ ತಡೆ ಕೋರಿ ದೆಹಲಿ ಕೋರ್ಟ್ ನಲ್ಲಿ ಇಂಜೆನ್ಷನ್ ಅರ್ಜಿ ಸಲ್ಲಿಸಲಾಗಿದೆ. 

ನವದೆಹಲಿ: ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್ ಪುಸ್ತಕದ ಮುದ್ರಣ ಹಾಗೂ ಪ್ರಸರಣಕ್ಕೆ ತಡೆ ಕೋರಿ ದೆಹಲಿ ಕೋರ್ಟ್ ನಲ್ಲಿ ಇಂಜೆನ್ಷನ್ ಅರ್ಜಿ ಸಲ್ಲಿಸಲಾಗಿದೆ. ಸಮಾಜದ ನಿರ್ದಿಷ್ಟ ಸಮುದಾಯದ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಆರೋಪದಡಿ ಈ ಅರ್ಜಿ ಸಲ್ಲಿಸಲಾಗಿದೆ.

ಹಿಂದೂ ಸೇನಾದ ಅಧ್ಯಕ್ಷ ವಿಷ್ಣು ಗುಪ್ತ ಸಲ್ಮಾನ್ ಖುರ್ಷಿದ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹಿಂದು ಧರ್ಮದ ಇತ್ತೀಚಿನ ಪ್ರಬಲ ರೂಪವನ್ನು ಸಲ್ಮಾನ್ ಖುರ್ಷಿದ್ ತಮ್ಮ ಪುಸ್ತಕದಲ್ಲಿ ಐಎಸ್ಐಎಸ್ ಹಾಗೂ ಬೊಕೊ ಹರಾಮ್ ಹೋಲಿಕೆ ಮಾಡಿ ವಿವಾದಕ್ಕೆ ಕಾರಣರಾಗಿದ್ದರು.

ಉತ್ತರ ಪ್ರದೇಶ ಚುನಾವಣೆ ಮುಂದಿನ ವರ್ಷ ನಡೆಯಲಿದ್ದು, ಅಲ್ಪಸಂಖ್ಯಾತರ ಮತಗಳನ್ನು ಸೆಳೆಯುವ, ಮತಗಳನ್ನು ದ್ರುವೀಕರಿಸುವ ಯತ್ನದ ಭಾಗವಾಗಿ ಸಲ್ಮಾನ್ ಖುರ್ಷಿದ್ ಈ ಪುಸ್ತಕವನ್ನು ಬಿಡುಗಡೆ ಮಾಡಿದ್ದಾರೆ ಎಂದು ಗುಪ್ತ ಅವರ ಪರ ವಕೀಲ ಅಕ್ಷಯ್ ಅಗರ್ವಾಲ್ ಹಾಗೂ ಸುಶಾಂತ್ ಪ್ರಕಾಶ್ ವಾದಿಸಿದ್ದಾರೆ. ದೇಶ ಹಾಗೂ ಸಮಾಜದ ಹಿತ ದೃಷ್ಟಿಯಿಂದ ಪುಸ್ತಕದ ಮಾರಾಟ, ಮುದ್ರಣ, ಹಂಚಿಕೆಯನ್ನು ತಡೆಹಿಡಿಯಬೇಕೆಂದು ಕೋರ್ಟ್ ಗೆ ಅರ್ಜಿದಾರರು ಮನವಿ ಮಾಡಿದ್ದಾರೆ. 

ಸಲ್ಮಾನ್ ಖುರ್ಷಿದ್ ಅವರ ಪುಸ್ತಕ ಹಿಂದೂಗಳ ಭಾವನೆಗಳಿಗೆ ಧಕ್ಕೆ ಉಂಟು ಮಾಡುತ್ತಿರುವುದರಿಂದ ಸಲ್ಮಾನ್ ಖುರ್ಷಿದ್ ಅವರ ಪುಸ್ತಕವನ್ನು ನಿಷೇಧಿಸಬೇಕೆಂದು ಹಿಂದೂ ಸೇನಾ ಆಗ್ರಹಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT