ಅನ್ನಪೂರ್ಣ ದೇವಿಯ ವಿಗ್ರಹದ ಮೆರವಣಿಗೆ 
ದೇಶ

108 ವರ್ಷಗಳ ನಂತರ ಕೆನಡಾದಿಂದ ತವರಿಗೆ ಮರಳಿದ ಅನ್ನಪೂರ್ಣ ದೇವಿಯ ವಿಗ್ರಹ ವಾರಣಾಸಿಯಲ್ಲಿ ಪ್ರತಿಷ್ಠಾಪನೆ

108 ವರ್ಷಗಳ ನಂತರ ಕೆನಡಾದಿಂದ ಭಾರತಕ್ಕೆ ಮರಳಿ ತರಲಾದ ಅನ್ನಪೂರ್ಣ ದೇವಿಯ ವಿಗ್ರಹವನ್ನು ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಸೋಮವಾರ ಪ್ರತಿಷ್ಠಾಪಿಸಲಾಯಿತು.

ವಾರಣಾಸಿ: 108 ವರ್ಷಗಳ ನಂತರ ಕೆನಡಾದಿಂದ ಭಾರತಕ್ಕೆ ಮರಳಿ ತರಲಾದ ಅನ್ನಪೂರ್ಣ ದೇವಿಯ ವಿಗ್ರಹವನ್ನು ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಸೋಮವಾರ ಪ್ರತಿಷ್ಠಾಪಿಸಲಾಯಿತು. ಈ ಸಮಾರಂಭದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭಾಗವಹಿಸಿದ್ದರು.

ಇದೇ ವೇಳೆ ದೇವಾಲಯದ ಪುನರ್ನಿರ್ಮಾಣದ ಸಮಯದಲ್ಲಿ ತೆಗೆದುಹಾಕಲಾದ ಇತರ ಐದು ದೇವತೆಗಳ ವಿಗ್ರಹಗಳನ್ನು ಸಹ ಪ್ರತಿಷ್ಠಾಪಿಸಲಾಗಿದೆ. ದೇವಿಯ ವಿಗ್ರಹವನ್ನು ಬೆಳ್ಳಿಯ ಪಲ್ಲಕ್ಕಿಯಲ್ಲಿ ದೇವಸ್ಥಾನಕ್ಕೆ ಕೊಂಡೊಯ್ಯಲಾಯಿತು. ಸಿಎಂ ಯೋಗಿ ಆದಿತ್ಯನಾಥ್ ಸಹ ಪಲ್ಲಕ್ಕಿಗೆ ಹೆಗಲು ಕೊಟ್ಟರು.

ಬೆಳಗ್ಗೆ ದುರ್ಗಕುಂಡದ ಕೂಷ್ಮಾಂಡ ದೇವಸ್ಥಾನದಿಂದ ಪಲ್ಲಕ್ಕಿ ಮೆರವಣಿಗೆ ಆರಂಭವಾಯಿತು. ಬಳಿಕ ದೇವಾಲಯದ ಈಶಾನ್ಯ ಮೂಲೆಯಲ್ಲಿ ಸ್ತೋತ್ರಗಳ ಪಠಣದ ನಡುವೆ ಸ್ಥಾಪಿಸಲಾಯಿತು.

ಸುಮಾರು ಒಂದು ಶತಮಾನದ ಹಿಂದೆ ಭಾರತದಿಂದ ಕಳವು ಮಾಡಲಾದ ಅನ್ನಪೂರ್ಣ ದೇವಿಯ ವಿಗ್ರಹವನ್ನು ಕೆನಡಾದಿಂದ ಮರಳಿ ತರಲಾಗುವುದು ಎಂದು ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆ ನೀಡಿದ್ದರು. ಅದರಂತೆ ವಿಗ್ರಹ ಭಾರತಕ್ಕೆ ಮರಳಿದ್ದು, ಈಗ ವಾರಣಾಸಿಯಲ್ಲಿ ಪ್ರತಿಷ್ಠಾಪಿಸಲಾಗಿದೆ.

108 ವರ್ಷಗಳ ಹಿಂದೆ ಅನ್ನಪೂರ್ಣ ಮಾತೆಯ ವಿಗ್ರಹವನ್ನು ಕಾಶಿಯಿಂದ ಕಳವು ಮಾಡಲಾಗಿತ್ತು. ಇದು ಕೈಯಿಂದ ಕೈಗೆ ಬದಲಾವಣೆ ಹೊಂದುತ್ತಾ ಕಡೆಗೆ ಕೆನಡಾದ ವಿಶ್ವವಿದ್ಯಾನಿಲಯದ ವಸ್ತು ಸಂಗ್ರಹಾಲಯ ತಲುಪಿತ್ತು. ಕೆನಡಾ ವಿಶ್ವವಿದ್ಯಾನಿಲಯದಿಂದ ವಿಗ್ರಹ ಮರಳಿಸುವ ಭಾರತ ಸರ್ಕಾರದ ಮನವಿಗೆ ಮನ್ನಣೆ ಸಿಕ್ಕದೆ. ಈಗ ಮತ್ತೆ ಅನ್ನಪೂರ್ಣೆ ತನ್ನ ಸ್ಥಾನ ಸೇರಿದ್ದಾಳೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT