ರಾಜಧಾನಿ ದೆಹಲಿಯ ವಾಯುಮಾಲಿನ್ಯ 
ದೇಶ

'ವಾಯುಮಾಲಿನ್ಯ ನಿಯಂತ್ರಿಸಲು ಸಂಪೂರ್ಣ ಲಾಕ್ ಡೌನ್ ಗೆ ಸಿದ್ದ': ಸುಪ್ರೀಂ ಕೋರ್ಟ್ ಗೆ ದೆಹಲಿ ಸರ್ಕಾರ ಅಫಿಡವಿಟ್ಟು ಸಲ್ಲಿಕೆ

ದೆಹಲಿ-ಎನ್ ಸಿಆರ್ ವಲಯಗಳಲ್ಲಿ ವಾಯುಮಾಲಿನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಕೈಗೆತ್ತಿಕೊಳ್ಳುವ ಮೊದಲು ಸೋಮವಾರ ಸುಪ್ರೀಂ ಕೋರ್ಟ್ ಗೆ ಹೇಳಿಕೆ ನೀಡಿರುವ ದೆಹಲಿ ಆಪ್ ಸರ್ಕಾರ, ವಾಯುಮಾಲಿನ್ಯವನ್ನು ರಾಜಧಾನಿಯಲ್ಲಿ ತಡೆಗಟ್ಟಲು ಸಂಪೂರ್ಣ ಲಾಕ್ ಡೌನ್ ಗೆ ಸರ್ಕಾರ ಸಿದ್ದವಿದೆ ಎಂದು ಹೇಳಿದೆ.

ನವದೆಹಲಿ: ದೆಹಲಿ-ಎನ್ ಸಿಆರ್ ವಲಯಗಳಲ್ಲಿ ವಾಯುಮಾಲಿನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಕೈಗೆತ್ತಿಕೊಳ್ಳುವ ಮೊದಲು ಸೋಮವಾರ ಸುಪ್ರೀಂ ಕೋರ್ಟ್ ಗೆ ಹೇಳಿಕೆ ನೀಡಿರುವ ದೆಹಲಿ ಆಪ್ ಸರ್ಕಾರ, ವಾಯುಮಾಲಿನ್ಯವನ್ನು ರಾಜಧಾನಿಯಲ್ಲಿ ತಡೆಗಟ್ಟಲು ಸಂಪೂರ್ಣ ಲಾಕ್ ಡೌನ್ ಗೆ ಸರ್ಕಾರ ಸಿದ್ದವಿದೆ ಎಂದು ಹೇಳಿದೆ.

ದೆಹಲಿ ಮತ್ತು ಸುತ್ತಮುತ್ತ ರಾಜ್ಯಗಳಲ್ಲಿ ಕೂಡ ಲಾಕ್ ಡೌನ್ ಜಾರಿಗೆ ತಂದರೆ ಪರಿಣಾಮಕಾರಿಯಾಗುತ್ತದೆ ಎಂದು ಕೂಡ ದೆಹಲಿ ಸರ್ಕಾರ ಇದೇ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಗೆ ಹೇಳಿದೆ.

GNCTD (ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸರ್ಕಾರ) ವಾಯುಮಾಲಿನ್ಯವನ್ನು ನಿಯಂತ್ರಿಸಲು ಸಂಪೂರ್ಣ ಲಾಕ್‌ಡೌನ್‌ನಂತಹ ಕ್ರಮಗಳನ್ನು ಜಾರಿಗೆ ತರಲು ಸಿದ್ಧವಾಗಿದೆ. ಆದಾಗ್ಯೂ, ನೆರೆಯ ರಾಜ್ಯಗಳ ಎನ್‌ಸಿಆರ್ ಪ್ರದೇಶಗಳಾದ್ಯಂತ ಇದನ್ನು ಜಾರಿಗೊಳಿಸಿದರೆ ಲಾಕ್ ಡೌನ್ ಕ್ರಮವು ಅರ್ಥಪೂರ್ಣವಾಗಿರುತ್ತದೆ. ದೆಹಲಿಯ ವಾಯುಮಾಲಿನ್ಯ ಮಟ್ಟವನ್ನು ಗಮನಿಸಿದರೆ, ಲಾಕ್‌ಡೌನ್ ಗಾಳಿಯ ಗುಣಮಟ್ಟದ ಮೇಲೆ ಸೀಮಿತ ಪರಿಣಾಮವನ್ನು ಬೀರಬಹುದಷ್ಟೆ, ಸುತ್ತಮುತ್ತಲ ರಾಜ್ಯಗಳಲ್ಲಿ ಜಾರಿಗೆ ತಂದರೆ ಪರಿಣಾಮಕಾರಿಯಾಗಬಹುದು ಎಂದಿದೆ.

ಎನ್‌ಸಿಆರ್ ಪ್ರದೇಶಗಳನ್ನು ಒಳಗೊಂಡ ಏರ್‌ಶೆಡ್ ಮಟ್ಟದಲ್ಲಿ ಈ ಸಮಸ್ಯೆಯನ್ನು ಪರಿಹರಿಸಬೇಕಾಗಿದೆ. ಕೇಂದ್ರ ಸರ್ಕಾರ ಅಥವಾ ರಾಷ್ಟ್ರೀಯ ರಾಜಧಾನಿ ಪ್ರದೇಶ ಮತ್ತು ಪಕ್ಕದ ಪ್ರದೇಶಗಳಲ್ಲಿನ ವಾಯು ಗುಣಮಟ್ಟ ನಿರ್ವಹಣಾ ಆಯೋಗವು ಸಂಪೂರ್ಣ ಎನ್‌ಸಿಆರ್ ಪ್ರದೇಶಗಳಿಗೆ ಕಡ್ಡಾಯಗೊಳಿಸಿದರೆ ನಾವು ಈ ಹಂತವನ್ನು ಪರಿಗಣಿಸಲು ಸಿದ್ಧರಿದ್ದೇವೆ ಎಂದು ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಅಫಿಡವಿಟ್ಟು ಸಲ್ಲಿಸಿದೆ.

ಪರಿಸರ ಕಾರ್ಯಕರ್ತ ಆದಿತ್ಯ ದುಬೆ ಮತ್ತು ಕಾನೂನು ವಿದ್ಯಾರ್ಥಿ ಅಮನ್ ಬಂಕಾ ಅವರು ಸಲ್ಲಿಸಿದ ಮನವಿಗೆ ಪ್ರತಿಕ್ರಿಯೆಯಾಗಿ ದೆಹಲಿ ಸರ್ಕಾರ ಅಫಿಡವಿಟ್ಟು ಸಲ್ಲಿಸಿದೆ, ಅವರು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಉಚಿತವಾಗಿ ಹುಲ್ಲು ತೆಗೆಯುವ ಯಂತ್ರಗಳನ್ನು ನೀಡಲು ಆದೇಶ ನೀಡಬೇಕೆಂದು ಅರ್ಜಿಯಲ್ಲಿ ಕೋರಿದ್ದರು. 

ದೆಹಲಿ-ಎನ್‌ಸಿಆರ್‌ ಪ್ರದೇಶದಲ್ಲಿ ವಾಯುಮಾಲಿನ್ಯ ಹೆಚ್ಚಳವನ್ನು "ತುರ್ತು" ಪರಿಸ್ಥಿತಿ ಎಂದು ಬಣ್ಣಿಸಿದ ಸುಪ್ರೀಂ ಕೋರ್ಟ್, ವಾಯು ಗುಣಮಟ್ಟವನ್ನು ಸುಧಾರಿಸಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಮತ್ತು ದೆಹಲಿ ಸರ್ಕಾರಗಳಿಗೆ ಸೂಚಿಸಿ ಲಾಕ್ ಡೌನ್ ಕ್ರಮವನ್ನು ಸೂಚಿಸಿತ್ತು. ಮಾಲಿನ್ಯದ ಪರಿಸ್ಥಿತಿ ಎಷ್ಟು ಹದಗೆಟ್ಟು ಹೋಗಿದೆ ಎಂದರೆ ದೆಹಲಿ ನಿವಾಸಿಗಳು ತಮ್ಮ ಮನೆಯಲ್ಲಿರುವಾಗಲೂ ಮಾಸ್ಕ್ ಧರಿಸುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದ ನ್ಯಾಯಾಲಯ, ಮಾಲಿನ್ಯಕ್ಕೆ ವಾಹನಗಳ ಹೊರಸೂಸುವಿಕೆ, ಪಟಾಕಿ ಮತ್ತು ಧೂಳಿನಂತಹ ಇತರ ಕಾರಣಗಳಿವೆ, ಕೋಲು ಸುಡುವುದು ಪರಿಹಾರವಲ್ಲ ಎಂದು ಹೇಳಿದೆ. 

ನಗರದಲ್ಲಿ ಶಾಲೆಗಳು ತೆರೆದಿದ್ದು, ಮಕ್ಕಳು ತೀವ್ರ ಮಾಲಿನ್ಯಕ್ಕೆ ಒಳಗಾಗುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ.
ಈ ಮಧ್ಯೆ, ವಾಯು ಗುಣಮಟ್ಟ ಮತ್ತು ಹವಾಮಾನ ಇಲಾಖೆ ಪ್ರಕಾರ, ರಾಜಧಾನಿಯಲ್ಲಿನ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) 318 ಇದ್ದು 'ಅತ್ಯಂತ ಕಳಪೆ' ಮಟ್ಟದಿಂದ ಕೆಳ ಮಟ್ಟಕ್ಕೆ ಸುಧಾರಿಸಿದೆ. ಈ ಸಂದರ್ಭದಲ್ಲಿ ಲಾಕ್ ಡೌನ್ ಜಾರಿಗೆ ತಂದರೆ ಮಾಲಿನ್ಯ ಮಟ್ಟವನ್ನು ಇನ್ನಷ್ಟು ನಿಯಂತ್ರಿಸಬಹುದು ಎಂಬುದು ಸುಪ್ರೀಂ ಕೋರ್ಟ್ ಅಭಿಮತ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT