ರಾಜಧಾನಿ ದೆಹಲಿಯ ವಾಯುಮಾಲಿನ್ಯ 
ದೇಶ

'ವಾಯುಮಾಲಿನ್ಯ ನಿಯಂತ್ರಿಸಲು ಸಂಪೂರ್ಣ ಲಾಕ್ ಡೌನ್ ಗೆ ಸಿದ್ದ': ಸುಪ್ರೀಂ ಕೋರ್ಟ್ ಗೆ ದೆಹಲಿ ಸರ್ಕಾರ ಅಫಿಡವಿಟ್ಟು ಸಲ್ಲಿಕೆ

ದೆಹಲಿ-ಎನ್ ಸಿಆರ್ ವಲಯಗಳಲ್ಲಿ ವಾಯುಮಾಲಿನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಕೈಗೆತ್ತಿಕೊಳ್ಳುವ ಮೊದಲು ಸೋಮವಾರ ಸುಪ್ರೀಂ ಕೋರ್ಟ್ ಗೆ ಹೇಳಿಕೆ ನೀಡಿರುವ ದೆಹಲಿ ಆಪ್ ಸರ್ಕಾರ, ವಾಯುಮಾಲಿನ್ಯವನ್ನು ರಾಜಧಾನಿಯಲ್ಲಿ ತಡೆಗಟ್ಟಲು ಸಂಪೂರ್ಣ ಲಾಕ್ ಡೌನ್ ಗೆ ಸರ್ಕಾರ ಸಿದ್ದವಿದೆ ಎಂದು ಹೇಳಿದೆ.

ನವದೆಹಲಿ: ದೆಹಲಿ-ಎನ್ ಸಿಆರ್ ವಲಯಗಳಲ್ಲಿ ವಾಯುಮಾಲಿನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಕೈಗೆತ್ತಿಕೊಳ್ಳುವ ಮೊದಲು ಸೋಮವಾರ ಸುಪ್ರೀಂ ಕೋರ್ಟ್ ಗೆ ಹೇಳಿಕೆ ನೀಡಿರುವ ದೆಹಲಿ ಆಪ್ ಸರ್ಕಾರ, ವಾಯುಮಾಲಿನ್ಯವನ್ನು ರಾಜಧಾನಿಯಲ್ಲಿ ತಡೆಗಟ್ಟಲು ಸಂಪೂರ್ಣ ಲಾಕ್ ಡೌನ್ ಗೆ ಸರ್ಕಾರ ಸಿದ್ದವಿದೆ ಎಂದು ಹೇಳಿದೆ.

ದೆಹಲಿ ಮತ್ತು ಸುತ್ತಮುತ್ತ ರಾಜ್ಯಗಳಲ್ಲಿ ಕೂಡ ಲಾಕ್ ಡೌನ್ ಜಾರಿಗೆ ತಂದರೆ ಪರಿಣಾಮಕಾರಿಯಾಗುತ್ತದೆ ಎಂದು ಕೂಡ ದೆಹಲಿ ಸರ್ಕಾರ ಇದೇ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಗೆ ಹೇಳಿದೆ.

GNCTD (ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸರ್ಕಾರ) ವಾಯುಮಾಲಿನ್ಯವನ್ನು ನಿಯಂತ್ರಿಸಲು ಸಂಪೂರ್ಣ ಲಾಕ್‌ಡೌನ್‌ನಂತಹ ಕ್ರಮಗಳನ್ನು ಜಾರಿಗೆ ತರಲು ಸಿದ್ಧವಾಗಿದೆ. ಆದಾಗ್ಯೂ, ನೆರೆಯ ರಾಜ್ಯಗಳ ಎನ್‌ಸಿಆರ್ ಪ್ರದೇಶಗಳಾದ್ಯಂತ ಇದನ್ನು ಜಾರಿಗೊಳಿಸಿದರೆ ಲಾಕ್ ಡೌನ್ ಕ್ರಮವು ಅರ್ಥಪೂರ್ಣವಾಗಿರುತ್ತದೆ. ದೆಹಲಿಯ ವಾಯುಮಾಲಿನ್ಯ ಮಟ್ಟವನ್ನು ಗಮನಿಸಿದರೆ, ಲಾಕ್‌ಡೌನ್ ಗಾಳಿಯ ಗುಣಮಟ್ಟದ ಮೇಲೆ ಸೀಮಿತ ಪರಿಣಾಮವನ್ನು ಬೀರಬಹುದಷ್ಟೆ, ಸುತ್ತಮುತ್ತಲ ರಾಜ್ಯಗಳಲ್ಲಿ ಜಾರಿಗೆ ತಂದರೆ ಪರಿಣಾಮಕಾರಿಯಾಗಬಹುದು ಎಂದಿದೆ.

ಎನ್‌ಸಿಆರ್ ಪ್ರದೇಶಗಳನ್ನು ಒಳಗೊಂಡ ಏರ್‌ಶೆಡ್ ಮಟ್ಟದಲ್ಲಿ ಈ ಸಮಸ್ಯೆಯನ್ನು ಪರಿಹರಿಸಬೇಕಾಗಿದೆ. ಕೇಂದ್ರ ಸರ್ಕಾರ ಅಥವಾ ರಾಷ್ಟ್ರೀಯ ರಾಜಧಾನಿ ಪ್ರದೇಶ ಮತ್ತು ಪಕ್ಕದ ಪ್ರದೇಶಗಳಲ್ಲಿನ ವಾಯು ಗುಣಮಟ್ಟ ನಿರ್ವಹಣಾ ಆಯೋಗವು ಸಂಪೂರ್ಣ ಎನ್‌ಸಿಆರ್ ಪ್ರದೇಶಗಳಿಗೆ ಕಡ್ಡಾಯಗೊಳಿಸಿದರೆ ನಾವು ಈ ಹಂತವನ್ನು ಪರಿಗಣಿಸಲು ಸಿದ್ಧರಿದ್ದೇವೆ ಎಂದು ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಅಫಿಡವಿಟ್ಟು ಸಲ್ಲಿಸಿದೆ.

ಪರಿಸರ ಕಾರ್ಯಕರ್ತ ಆದಿತ್ಯ ದುಬೆ ಮತ್ತು ಕಾನೂನು ವಿದ್ಯಾರ್ಥಿ ಅಮನ್ ಬಂಕಾ ಅವರು ಸಲ್ಲಿಸಿದ ಮನವಿಗೆ ಪ್ರತಿಕ್ರಿಯೆಯಾಗಿ ದೆಹಲಿ ಸರ್ಕಾರ ಅಫಿಡವಿಟ್ಟು ಸಲ್ಲಿಸಿದೆ, ಅವರು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಉಚಿತವಾಗಿ ಹುಲ್ಲು ತೆಗೆಯುವ ಯಂತ್ರಗಳನ್ನು ನೀಡಲು ಆದೇಶ ನೀಡಬೇಕೆಂದು ಅರ್ಜಿಯಲ್ಲಿ ಕೋರಿದ್ದರು. 

ದೆಹಲಿ-ಎನ್‌ಸಿಆರ್‌ ಪ್ರದೇಶದಲ್ಲಿ ವಾಯುಮಾಲಿನ್ಯ ಹೆಚ್ಚಳವನ್ನು "ತುರ್ತು" ಪರಿಸ್ಥಿತಿ ಎಂದು ಬಣ್ಣಿಸಿದ ಸುಪ್ರೀಂ ಕೋರ್ಟ್, ವಾಯು ಗುಣಮಟ್ಟವನ್ನು ಸುಧಾರಿಸಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಮತ್ತು ದೆಹಲಿ ಸರ್ಕಾರಗಳಿಗೆ ಸೂಚಿಸಿ ಲಾಕ್ ಡೌನ್ ಕ್ರಮವನ್ನು ಸೂಚಿಸಿತ್ತು. ಮಾಲಿನ್ಯದ ಪರಿಸ್ಥಿತಿ ಎಷ್ಟು ಹದಗೆಟ್ಟು ಹೋಗಿದೆ ಎಂದರೆ ದೆಹಲಿ ನಿವಾಸಿಗಳು ತಮ್ಮ ಮನೆಯಲ್ಲಿರುವಾಗಲೂ ಮಾಸ್ಕ್ ಧರಿಸುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದ ನ್ಯಾಯಾಲಯ, ಮಾಲಿನ್ಯಕ್ಕೆ ವಾಹನಗಳ ಹೊರಸೂಸುವಿಕೆ, ಪಟಾಕಿ ಮತ್ತು ಧೂಳಿನಂತಹ ಇತರ ಕಾರಣಗಳಿವೆ, ಕೋಲು ಸುಡುವುದು ಪರಿಹಾರವಲ್ಲ ಎಂದು ಹೇಳಿದೆ. 

ನಗರದಲ್ಲಿ ಶಾಲೆಗಳು ತೆರೆದಿದ್ದು, ಮಕ್ಕಳು ತೀವ್ರ ಮಾಲಿನ್ಯಕ್ಕೆ ಒಳಗಾಗುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ.
ಈ ಮಧ್ಯೆ, ವಾಯು ಗುಣಮಟ್ಟ ಮತ್ತು ಹವಾಮಾನ ಇಲಾಖೆ ಪ್ರಕಾರ, ರಾಜಧಾನಿಯಲ್ಲಿನ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) 318 ಇದ್ದು 'ಅತ್ಯಂತ ಕಳಪೆ' ಮಟ್ಟದಿಂದ ಕೆಳ ಮಟ್ಟಕ್ಕೆ ಸುಧಾರಿಸಿದೆ. ಈ ಸಂದರ್ಭದಲ್ಲಿ ಲಾಕ್ ಡೌನ್ ಜಾರಿಗೆ ತಂದರೆ ಮಾಲಿನ್ಯ ಮಟ್ಟವನ್ನು ಇನ್ನಷ್ಟು ನಿಯಂತ್ರಿಸಬಹುದು ಎಂಬುದು ಸುಪ್ರೀಂ ಕೋರ್ಟ್ ಅಭಿಮತ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT