ಕಂಗನಾ ರಣಾವತ್ 
ದೇಶ

ಗಾಂಧೀಜಿಯ ಅಹಿಂಸಾ ತತ್ವವನ್ನು ಅಣಕಿಸಿದ ಕಂಗನಾ ರಣಾವತ್!

ಇತ್ತೀಚಿಗೆ 1947ರಲ್ಲಿ ಭಾರತಕ್ಕೆ ಬ್ರಿಟಿಷರಿಂದ ಸಿಕ್ಕಿದ್ದು ಸ್ವಾತಂತ್ರವಲ್ಲ ಭಿಕ್ಷೆ ಎಂದು ಹೇಳಿ ವಿವಾದಕ್ಕೆ ಗುರಿಯಾಗಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್, ಇದೀಗ ಮಹಾತ್ಮ ಗಾಂಧಿ ಅವರ ಅಹಿಂಸಾ ತತ್ವವನ್ನು ಅಣಕಿಸಿದ್ದಾರೆ.

ಮುಂಬೈ: ಇತ್ತೀಚಿಗೆ 1947ರಲ್ಲಿ ಭಾರತಕ್ಕೆ ಬ್ರಿಟಿಷರಿಂದ ಸಿಕ್ಕಿದ್ದು ಸ್ವಾತಂತ್ರವಲ್ಲ ಭಿಕ್ಷೆ ಎಂದು ಹೇಳಿ ವಿವಾದಕ್ಕೆ ಗುರಿಯಾಗಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್ , ಇದೀಗ ಮಹಾತ್ಮ ಗಾಂಧಿ ಅವರ ಅಹಿಂಸಾ ತತ್ವವನ್ನು ಅಣಕಿಸಿದ್ದಾರೆ.

  ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಅವರಿಗೆ ಗಾಂಧೀಜಿ ಅವರಿಂದ ಬೆಂಬಲವೇ ಸಿಗಲಿಲ್ಲ. ಒಂದು ಕೆನ್ನೆಗೆ ಹೊಡೆದರೆ ಇನ್ನೊಂದು ಕೆನ್ನೆ ತೋರಿಸು ಎಂಬ ಗಾಂಧೀಜಿ ಅವರ ತತ್ವವನ್ನು ಅನುಸರಿಸಿದರೆ ನಿಮಗೆ ಸ್ವಾತಂತ್ರ್ಯ ಸಿಗುವುದಿಲ್ಲ , ಭಿಕ್ಷೆ ಮಾತ್ರ ಸಿಗುತ್ತದೆ ಎಂದು ಕಂಗನಾ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸರಣಿ ಫೋಸ್ಟ್ ಮಾಡಿದ್ದಾರೆ.

ನೇತಾಜಿಯನ್ನು ಹಸ್ತಾಂತರಿಸಲು ಗಾಂಧಿ ಮತ್ತು ಇತರರ ಸಮ್ಮಿತಿ ಎಂಬ ಶೀರ್ಷಿಕೆಯ ಹಳೆಯ ಪತ್ರಿಕೆಯೊಂದರ ವರದಿಯ ತುಣುಕನ್ನು ಇನ್ಸ್ಟಾಗ್ರಾಮ್ ನಲ್ಲಿ ಅವರು ಹಂಚಿಕೊಂಡಿದ್ದಾರೆ.

ಜವಹರ್ ಲಾಲ್ ನೆಹರು, ಮೊಹಮ್ಮದ್ ಆಲಿ ಜಿನ್ನಾ ಅವರೊಂದಿಗೆ ಗಾಂಧೀಜಿ ಅವರು ಬ್ರಿಟಿಷ್ ನ್ಯಾಯಾಧೀಶರೊದಿಗೆ ಒಪ್ಪಂದಕ್ಕೆ ಬಂದಿದ್ದಾರೆ. ಬೋಸ್ ಒಂದು ವೇಳೆ ಭಾರತ ಪ್ರವೇಶಿಸಿದರೆ, ಅವರನ್ನು ಹಸ್ತಾಂತರಿಸಲು ಅವರು ಒಪ್ಪಿದ್ದಾರೆ ಎಂದು ಆ ವರದಿಯಲ್ಲಿದೆ.  ಭಗತ್ ಸಿಂಗ್ ಅವರನ್ನು ಗಲ್ಲಿಗೇರಿಸಬೇಕೆಂದು ಬಯಸಿದ್ದನ್ನು ಸೂಚಿಸುವ ಪುರಾವೆಗಳಿವೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನ್ಯಾಯಯುತವಾಗಿ ನಡೆಸಿಕೊಳ್ಳಿ': ಪಾಕ್ ಮಾಜಿ ಪ್ರಧಾನಿ ಪರ ಕಪಿಲ್ ದೇವ್, ಸುನೀಲ್ ಗವಾಸ್ಕರ್ ಸೇರಿ 14 ಮಾಜಿ ನಾಯಕರು ಬ್ಯಾಟಿಂಗ್!

India AI Impact Expo 2026: ಆವಿಷ್ಕಾರ, ನಾವೀನ್ಯತೆಗಳ ಪ್ರಬಲ ಸಂಗಮ- ಪ್ರಧಾನಿ ಮೋದಿ

ವಿಮಾನ ಪತನದಲ್ಲಿ ಅಜಿತ್ ಪವಾರ್ ಸಾವು: ಎರಡೂ ಫ್ಲೈಟ್ ರೆಕಾರ್ಡರ್‌ಗಳು ಹಾನಿಗೊಳಗಾಗಿವೆ; ನಾಗರಿಕ ವಿಮಾನಯಾನ ಸಚಿವಾಲಯ

ರಾಜ್ಯ ಬಜೆಟ್: SC-ST ಗಳಿಗೆ ಅನುದಾನ ಹಂಚಿಕೆಯೇ CM ಸಿದ್ದರಾಮಯ್ಯ ಮುಂದಿರುವ ಬಹು ದೊಡ್ಡ ಸವಾಲು!

'ಮಹಿಳಾ ಮೀಸಲಾತಿ ಬಂದರೆ ನನ್ನ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ, ಶಾಸಕರು ಫಾರಿನ್ ಟ್ರಿಪ್ ಹೋದ್ರೆ ಏನು ತಪ್ಪು'? : ಕೆ ಎನ್ ರಾಜಣ್ಣ

SCROLL FOR NEXT