ಓಂ ಬಿರ್ಲಾ 
ದೇಶ

'ಒಂದು ರಾಷ್ಟ್ರ, ಒಂದು ಶಾಸಕಾಂಗ ನಿಯಮ' ಪ್ರಸ್ತಾಪಿಸಿದ ಲೋಕಸಭಾ ಸ್ಪೀಕರ್ ಓಂ ಬಿರ್ಲಾ

'ಒಂದು ರಾಷ್ಟ್ರ, ಒಂದು ಏಕರೂಪ ಶಾಸಕಾಂಗ ನಿಯಮಗಳು ಮತ್ತು ಕಾರ್ಯವಿಧಾನಗಳ' ಬಗ್ಗೆ ಪ್ರಸ್ತಾಪಿಸಿರುವ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು, ಇದು ದೇಶದ ಶಾಸಕಾಂಗಗಳನ್ನು ಹೆಚ್ಚು ಉತ್ಪಾದಕ...

ಶಿಮ್ಲಾ: 'ಒಂದು ರಾಷ್ಟ್ರ, ಒಂದು ಏಕರೂಪ ಶಾಸಕಾಂಗ ನಿಯಮಗಳು ಮತ್ತು ಕಾರ್ಯವಿಧಾನಗಳ' ಬಗ್ಗೆ ಪ್ರಸ್ತಾಪಿಸಿರುವ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು, ಇದು ದೇಶದ ಶಾಸಕಾಂಗಗಳನ್ನು ಹೆಚ್ಚು ಉತ್ಪಾದಕ ಮತ್ತು ಜನರಿಗೆ ಹೊಣೆಗಾರರನ್ನಾಗಿ ಮಾಡಲಿದೆ ಬುಧವಾರ ಹೇಳಿದ್ದಾರೆ.

ಶಿಮ್ಲಾದಲ್ಲಿ ನಡೆದ ಅಖಿಲ ಭಾರತ ಶಾಸನಸಭೆಗಳ ಅಧ್ಯಕ್ಷರ ಸಮ್ಮೇಳನ ಉದ್ದೇಶಿಸಿ ಮಾತನಾಡಿದ ಓಂ ಬಿರ್ಲಾ ಅವರು, ಶಾಸನ ಸಭೆಗಳಲ್ಲಿ ನಡೆಯುತ್ತಿರುವ ಅಧಿವೇಶನಗಳ ಸಂಖ್ಯೆ ಕಡಿಮೆಯಾಗುತ್ತಿರುವ ಬಗ್ಗೆ ಮತ್ತು ಕಾನೂನು ರಚನೆಯ ಬಗ್ಗೆ ಸಮರ್ಪಕ ಚರ್ಚೆ ನಡೆಯದಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು.

ಈ ಎಲ್ಲಾ ರಾಜಕೀಯ ಪಕ್ಷಗಳು ಸಮಾಲೋಚಿಸಿ ಕೆಲವು ನಿರ್ಣಾಯಕ ಕ್ರಮಗಳನ್ನು ತೆಗೆದುಕೊಳ್ಳುವ ಅವಶ್ಯಕತೆ ಇದೆ. ಈ ಮೂಲಕ ಶಾಸನಸಭೆಗಳ ಘನತೆಯನ್ನು ಉಳಿಸಬೇಕು ಎಂದು ಅವರು ಒತ್ತಿ ಹೇಳಿದರು.

ಜನರ ಹಕ್ಕುಗಳ ಪೂರಕವಾಗಿ ಶಾಸನಸಭೆಗಳು ತಮ್ಮ ಕಾರ್ಯವಿಧಾನ ಮತ್ತು ನಿಯಮಗಳನ್ನು ಪರಿಶೀಲಿಸಬೇಕು ಎಂದು ಓಂ ಬಿರ್ಲಾ ಅವರು ಕರೆ ನೀಡಿದರು.

ಎಲ್ಲಾ ಶಾಸನಸಭೆಗಳಲ್ಲಿ ಕಾನೂನು ಮತ್ತು ಕಾರ್ಯವಿಧಾನಗಳ ಏಕರೂಪತೆಗಾಗಿ ಮಾದರಿ ಡಾಕ್ಯೂಮೆಂಟ್ ಸಿದ್ಧಪಡಿಸಬೇಕು ಎಂದು ಅವರು ಹೇಳಿದರು.

ಸಾಮೂಹಿಕ ಸಂಕಲ್ಪದೊಂದಿಗೆ, ನಮ್ಮ ಸ್ವಾತಂತ್ರ್ಯದ 100 ವರ್ಷಗಳು ಪೂರ್ಣಗೊಂಡಾಗ, ಎಲ್ಲಾ ಶಾಸಕಾಂಗಗಳ ನಿಯಮಗಳು ಮತ್ತು ಕಾರ್ಯವಿಧಾನಗಳಲ್ಲಿ ಏಕರೂಪತೆ ಇರಬೇಕು ಮತ್ತು ಶಾಸಕಾಂಗ ಸಂಸ್ಥೆಗಳ ಕಾರ್ಯವು ಜನರ ಆಶಯಗಳಿಗೆ ಅನುಗುಣವಾಗಿರಬೇಕು ಮತ್ತು ಅಂತಹ ಮಾದರಿ ಡಾಕ್ಯೂಮೆಂಟ್ ಸಿದ್ಧಪಡಿಸಬೇಕು ಎಂದು ಬಿರ್ಲಾ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

SCROLL FOR NEXT