ಸುಪ್ರೀಂ ಕೋರ್ಟ್ 
ದೇಶ

ಪೋಕ್ಸೋ ಕಾಯ್ದೆಯಡಿ ಲೈಂಗಿಕ ದೌರ್ಜನ್ಯಕ್ಕೆ 'ಸ್ಪರ್ಶ' ಸಂಪರ್ಕ ಪರಿಗಣನೆಯಲ್ಲ: ಸುಪ್ರೀಂ ಕೋರ್ಟ್

ಪೋಕ್ಸೋ ಕಾಯ್ದೆಯಡಿ ಲೈಂಗಿಕ ದೌರ್ಜನ್ಯ ಅಪರಾಧ ಪ್ರಕರಣ ದಾಖಲಾಗಲು ಸ್ಪರ್ಶ (skin-to-skin)ವು ಕೂಡ ಕಾರಣವಾಗುತ್ತದೆ ಎಂದಿದ್ದ ಬಾಂಬೆ ಹೈಕೋರ್ಟ್​ನ ತೀರ್ಪನ್ನು ಸುಪ್ರೀಂಕೋರ್ಟ್​ ತಳ್ಳಿಹಾಕಿದೆ.

ನವದೆಹಲಿ: ಪೋಕ್ಸೋ ಕಾಯ್ದೆಯಡಿ ಲೈಂಗಿಕ ದೌರ್ಜನ್ಯ ಅಪರಾಧ ಪ್ರಕರಣ ದಾಖಲಾಗಲು ಸ್ಪರ್ಶ (skin-to-skin)ವು ಕಾರಣವಾಗುತ್ತದೆ ಎಂದಿದ್ದ ಬಾಂಬೆ ಹೈಕೋರ್ಟ್​ನ ತೀರ್ಪನ್ನು ಸುಪ್ರೀಂಕೋರ್ಟ್​ ತಳ್ಳಿಹಾಕಿದೆ.

ನ್ಯಾಯಮೂರ್ತಿಗಳಾದ ಯುಯು ಲಲಿತ್, ಎಸ್ ರವೀಂದ್ರ ಭಟ್ ಮತ್ತು ಬೇಲಾ ತ್ರಿವೇದಿ ಅವರ ಪೀಠವು ಸ್ಪರ್ಶ ಎಂಬ ಅರ್ಥವನ್ನು ನೇರ ನೇರ ಸಂಪರ್ಕಕ್ಕೆ ಹೋಲಿಸುವುದು ಸಂಕುಚಿತ ಮತ್ತು ಅಸಂಬದ್ಧ ವ್ಯಾಖ್ಯಾನಕ್ಕೆ ಕಾರಣವಾಗುತ್ತದೆ. ಇದು ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸಲು ಜಾರಿಗೆ ತಂದ ಕಾಯ್ದೆಯ ಉದ್ದೇಶಕ್ಕೆ ವಿರುದ್ಧವಾಗಿದೆ ಎಂದು ಹೇಳಿದೆ.

ಲೈಂಗಿಕ ಉದ್ದೇಶದಿಂದ ಬಟ್ಟೆ/ಹಾಳೆಯ ಮೂಲಕ ಸ್ಪರ್ಶಿಸುವುದು ಕೂಡ POCSO ವ್ಯಾಖ್ಯಾನದಲ್ಲಿ ಒಳಗೊಂಡಿದೆ. ಸರಳವಾದ ಪದಗಳಲ್ಲಿ ದ್ವಂದ್ವಾರ್ಥತೆಯನ್ನು ಹುಡುಕುವಲ್ಲಿ ನ್ಯಾಯಾಲಯಗಳು ಅತಿಯಾದ ಉತ್ಸಾಹ ತೋರಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಬಾಂಬೆ ಹೈಕೋರ್ಟ್ ನ ನಾಗ್ಪುರ ಪೀಠ ಜನವರಿ 12 ರ ತೀರ್ಪಿನ ವಿರುದ್ಧ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್, ಎನ್ ಸಿಡಬ್ಲ್ಯೂ ಮತ್ತು ಮಹಾರಾಷ್ಟ್ರ ರಾಜ್ಯವು ಸಲ್ಲಿಸಿದ ಮೇಲ್ಮನವಿಗಳ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ಅವಲೋಕನಗಳನ್ನು ಮಾಡಿದೆ. ಜನವರಿ 27 ರಂದು, ಸುಪ್ರೀಂಕೋರ್ಟ್ ಪೋಕ್ಸೊ ಕಾಯ್ದೆಯಡಿಯಲ್ಲಿ ವ್ಯಕ್ತಿಯೊಬ್ಬನನ್ನು ದೋಷಮುಕ್ತಗೊಳಿಸಿದ ಆದೇಶಕ್ಕೆ ತಡೆ ನೀಡಿತ್ತು.

ಪುರುಷ ತನ್ನ ಬಟ್ಟೆಯನ್ನು ತೆಗೆಯದೆ ಮಗುವನ್ನು ಹಿಡಿದಿದ್ದರಿಂದ, ಈ ಅಪರಾಧವನ್ನು ಲೈಂಗಿಕ ದೌರ್ಜನ್ಯ ಎಂದು ಕರೆಯಲಾಗುವುದಿಲ್ಲ. ಆದರೆ ಇದು ಐಪಿಸಿ ಸೆಕ್ಷನ್ 354 ರ ಅಡಿಯಲ್ಲಿ ಅಪರಾಧವಾಗಿದೆ ಎಂದು ನ್ಯಾಯಮೂರ್ತಿ ಪುಷ್ಪಾ ಗಣೆಡಿವಾಲಾ ಹೇಳಿದ್ದರು.

2016 ರಲ್ಲಿ 12 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 39 ವರ್ಷದ ವ್ಯಕ್ತಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಮಾರ್ಪಡಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT