ಚಂದ್ರಬಾಬು ನಾಯ್ಡು 
ದೇಶ

ಸದನದಲ್ಲಿ ತೀವ್ರ ಅಪಮಾನ: ಸಿಎಂ ಗಾದಿಗೇರುವವರೆಗೂ ಅಸೆಂಬ್ಲಿಗೆ ಕಾಲಿಡುವುದಿಲ್ಲ ಎಂದು ಚಂದ್ರಬಾಬು ನಾಯ್ಡು ಶಪಥ!

ಆಡಳಿತಾರೂಢ ವೈಎಸ್ ಆರ್ ಪಿ ಪಕ್ಷದ ಸದಸ್ಯರಿಂದ ಉಂಟಾದ ತೀವ್ರ ವಾಗ್ದಾಳಿ ಮತ್ತು ಅಪಮಾನದಿಂದ ನೊಂದ ಆಂಧ್ರ ಪ್ರದೇಶ ಮಾಜಿ ಸಿಎಂ ಹಾಗೂ ತೆಲುಗುದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಮತ್ತೆ ಸಿಎಂ ಗಾದಿಗೇರುವವರೆಗೂ ವಿಧಾನಸಭೆಗೆ ಕಾಲಿಡುವುದಿಲ್ಲ ಎಂದು ಶಪಥ ಗೈದಿದ್ದಾರೆ.

ಅಮರಾವತಿ: ಆಡಳಿತಾರೂಢ ವೈಎಸ್ ಆರ್ ಪಿ ಪಕ್ಷದ ಸದಸ್ಯರಿಂದ ಉಂಟಾದ ತೀವ್ರ ವಾಗ್ದಾಳಿ ಮತ್ತು ಅಪಮಾನದಿಂದ ನೊಂದ ಆಂಧ್ರ ಪ್ರದೇಶ ಮಾಜಿ ಸಿಎಂ ಹಾಗೂ ತೆಲುಗುದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಮತ್ತೆ ಸಿಎಂ ಗಾದಿಗೇರುವವರೆಗೂ ವಿಧಾನಸಭೆಗೆ ಕಾಲಿಡುವುದಿಲ್ಲ ಎಂದು ಶಪಥ ಗೈದಿದ್ದಾರೆ.

ವಿಧಾನಸಭೆ ಆರಂಭವಾದಾಗಿನಿಂದಲೂ ವೈಎಸ್ ಆರ್ ಕಾಂಗ್ರೆಸ್ ಪಕ್ಷದ ಸಚಿವರು ಮತ್ತು ಶಾಸಕರು ಟಿಡಿಪಿ ಮತ್ತು ಪಕ್ಷದ ಮುಖ್ಯಸ್ಥರ ವಿರುದ್ಧ ನಿಂದಿಸುತ್ತಲೇ ಕಾಲ ಕಳೆಯುತ್ತಿದ್ದಾರೆ. ಒಂದೆಡೆ ಸಚಿವ ಕೊಡಾಲಿ ನಾನಿ ಚಂದ್ರಬಾಬು ಲುಚ್ಚಾ ಎನ್ನುತ್ತಿದ್ದರೆ ಮತ್ತೊಂದೆಡೆ ಮತ್ತೊಬ್ಬ ಸಚಿವ ಕನ್ನಬಾಬು ಸೇರಿದಂತೆ ಶಾಸಕರು ತಮ್ಮದೇ ಶೈಲಿಯಲ್ಲಿ ಖಾರವಾದ ವಾಗ್ದಾಳಿ ನಡೆಸುತ್ತಿದ್ದಾರೆ. ನನ್ನ ಮೇಲೆ ಮಾತ್ರವಲ್ಲದೇ ನನ್ನ ಕುಟುಂಬಸ್ಥರ ವಿರುದ್ಧ ನನ್ನ ಪತ್ನಿ ವಿರುದ್ಧ ಅವಾಚ್ಯ ಶಬ್ಧಗಳಿಂದ ನಿಂದಿಸುತ್ತಿದ್ದಾರೆ. ಇದರಿಂದ ನನ್ನ ಮನಸ್ಸಿಗೆ ಆಘಾತವಾಗಿದ್ದು, ನಾನು ಮತ್ತೆ ಮುಖ್ಯಮಂತ್ರಿಯಾಗುವವರೆಗೂ ಸದನಕ್ಕೆ ಕಾಲಿಡುವುದಿಲ್ಲ ಎಂದು ಭಾವುಕರಾಗಿ ಶಪಥ ಮಾಡಿದ್ದಾರೆ.

'ನನ್ನ ಇಷ್ಟು ವರ್ಷಗಳ ರಾಜಕೀಯ ಇತಿಹಾಸದಲ್ಲಿ ದೊಡ್ಡ ದೊಡ್ಡ ನಾಯಕರೊಂದಿಗೆ, ರಾಷ್ಟ್ರಮಟ್ಟದಲ್ಲಿಯೂ ಹಲವು ನಾಯಕರ ಜತೆ ಕೆಲಸ ಮಾಡಿದ್ದೇನೆ. ಆದರೆ ಕಳೆದ ಎರಡೂವರೆ ವರ್ಷಗಳಿಂದ ಸದನದಲ್ಲಿ ಹಲವು ಟೀಕೆಗಳು ಕೇಳಿ ಬರುತ್ತಿವೆ. ನಾನು ವಿರೋಧ ಪಕ್ಷದಲ್ಲಿದ್ದಾಗಲೂ.. ಆಡಳಿತದಲ್ಲಿದ್ದಾಗಲೂ ಇಂತಹ ಕೆಟ್ಟ ಅನುಭವಗಳನ್ನು ಕಂಡಿಲ್ಲ. ದೊಡ್ಡ ದೊಡ್ಡ ನಾಯಕರೊಂದಿಗಾಗದ ಎಂದಿಗೂ ಎದುರಿಸದ ಅಪಮಾನಗಳನ್ನು ಈಗ ಎದುರಿಸುತ್ತಿದ್ದೇವೆ. ನಿನ್ನೆ ಕೂಡ ಮುಖ್ಯಮಂತ್ರಿ ಜಗನ್ ಅವರು ಸದನಕ್ಕೆ ಗೈರಾದ ಕುರಿತು ಕೆಟ್ಟದಾಗಿ ನನ್ನ ಬಗ್ಗೆ ಮಾತನಾಡಿದರು. ಈ ಸದನದಲ್ಲಿ ಹೇಳಲಾಗದ ಅವಮಾನಗಳಿಗೆ ಒಳಗಾದ ಅನೇಕ ಸನ್ನಿವೇಷಗಳಿವೆ. ವೈಯಕ್ತಿಕವಾಗಿ ಮತ್ತು ಪಕ್ಷದ ದೃಷ್ಟಿಯಿಂದ ಟೀಕಿಸುತ್ತಿದ್ದಾರೆ ಎಂದು ಗದ್ಗಧಿತರಾಗಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

Nepal Floods: ಭೀಕರ ಪ್ರವಾಹದಲ್ಲಿ 30 ದೇಶಗಳ ನಾಗರೀಕರು ನಾಪತ್ತೆ, ಅಮೆರಿಕದವರೇ ಅತೀ ಹೆಚ್ಚು!

ಎಂ.ಎಸ್. ಧೋನಿ ಸಿಎಸ್ ಕೆ ಯಲ್ಲಿ ಶೇ. 25 ರಷ್ಟು ಪಾಲು ಕೇಳಿದ್ದಾರೆಯೇ? 3,820 ಕೋಟಿ ರೂ ಮೊತ್ತದ ಕ್ಲೈಮ್ ಹಿಂದಿರುವ ಸತ್ಯವೇನು?

ವಿದ್ಯಾರ್ಥಿಗಳ ವಿರೋಧದ ಬೆನ್ನಲ್ಲೇ NLSIU ಘಟಿಕೋತ್ಸವ ರದ್ದು; ‘ಅನಿವಾರ್ಯ ಕಾರಣ’ ಎಂದ ವಿವಿ

Yash’s Toxic: ನೆಗೆಟಿವ್ ರಿವ್ಯೂ ನಡುವೆ 'ರೇಟಿಂಗ್' ತೆಗೆದುಹಾಕಿದ ಬುಕ್ ಮೈ ಶೋ; ನಿರೀಕ್ಷಿತ ಕಲೆಕ್ಷನ್ ಇಲ್ವಾ? ನೆಟ್ಟಿಗರಿಂದ ತರಾಟೆ!