ದೆಹಲಿ ಭಾಗದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳ(ಸಂಗ್ರಹ ಚಿತ್ರ) 
ದೇಶ

ಕೃಷಿ ಕಾನೂನುಗಳ ವರದಿಯನ್ನು ನ್ಯಾಯಾಲಯ ಬಿಡುಗಡೆ ಮಾಡದಿದ್ದರೆ ನಾವೇ ಬಿಡುಗಡೆ ಮಾಡುತ್ತೇವೆ: ಸುಪ್ರೀಂ ಕೋರ್ಟ್ ಸಮಿತಿ ಸದಸ್ಯ!

ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಕೇಂದ್ರ ಸರ್ಕಾರ ಪ್ರಕಟಿಸುತ್ತಿದ್ದಂತೆ ಸುಪ್ರೀಂ ಕೋರ್ಟ್ ನೇಮಿಸಿರುವ ತಂಡದ ಸದಸ್ಯರೊಬ್ಬರು ವರದಿಯನ್ನು ಸಾರ್ವಜನಿಕರ ಮುಂದೆ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.

ನವದೆಹಲಿ: ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಕೇಂದ್ರ ಸರ್ಕಾರ ಪ್ರಕಟಿಸುತ್ತಿದ್ದಂತೆ ಸುಪ್ರೀಂ ಕೋರ್ಟ್ ನೇಮಿಸಿರುವ ತಂಡದ ಸದಸ್ಯರೊಬ್ಬರು ವರದಿಯನ್ನು ಸಾರ್ವಜನಿಕರ ಮುಂದೆ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿ ಈಗಾಗಲೇ ಕಾಯ್ದೆಗೆ ಸಂಬಂಧಿಸಿದ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು.ಇದೀಗ ಕೇಂದ್ರ ಸರ್ಕಾರವೇ ಕಾಯ್ದೆಯನ್ನು ಹಿಂಪಡೆಯುವುದರಿಂದ ಈ ವರದಿಯ ಉದ್ದೇಶವೇನೂ ಇಲ್ಲದಾಗಿದೆ, ಸುಪ್ರೀಂ ಕೋರ್ಟ್ ವರದಿ ಬಿಡುಗಡೆ ಮಾಡದಿದ್ದರೆ ನಾವೇ ಸಾರ್ವಜನಿಕರ ಮುಂದಿಡುತ್ತೇವೆ ಎಂದಿದ್ದಾರೆ.

ಸಮಿತಿಯ ವರದಿ ರೈತರ ಪರವಾಗಿದ್ದಿತ್ತು. ಮುಂದಿನ ವಾರ ವರದಿಯನ್ನು ಬಿಡುಗಡೆ ಮಾಡುವುದಾಗಿ ಶೆಟ್ಕರಿ ಸಂಘಟನೆ ಅಧ್ಯಕ್ಷ ಅನಿಲ್ ಜೆ ಘನ್ವಾಟ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ಸಾಧಕ-ಬಾಧಕಗಳ ಬಗ್ಗೆ ಸಂಬಂಧಪಟ್ಟವರೊಂದಿಗೆ ಸಮಾಲೋಚನೆ ನಡೆಸಿ ಅಧ್ಯಯನ ಮಾಡಿ ಮೂವರು ಸದಸ್ಯರನ್ನೊಳಗೊಂಡ ಸುಪ್ರೀಂ ಕೋರ್ಟ್ ನೇಮಕ ಮಾಡಿರುವ ಸಮಿತಿ ಕಳೆದ ಮಾರ್ಚ್ 19ರಂದು ಸುಪ್ರೀಂ ಕೋರ್ಟ್ ಗೆ ವರದಿ ಸಲ್ಲಿಸಿತ್ತು.

ಸಮಿತಿಯ ವರದಿಯನ್ನು ಬಿಡುಗಡೆ ಮಾಡಿದರೆ ರೈತರಿಗೆ ಮನದಟ್ಟಾಗುತ್ತದೆ, ಸರ್ಕಾರ ವಿರುದ್ಧ ಮಾಡುತ್ತಿರುವ ಪ್ರತಿಭಟನೆ ನಿಲ್ಲುತ್ತದೆ ಎಂದು ಘನವಟ್ ಕಳೆದ ಸೆಪ್ಟೆಂಬರ್ 1 ರಂದು ಭಾರತದ ಮುಖ್ಯ ನ್ಯಾಯಾಧೀಶರಿಗೆ ಪತ್ರದ ಮೂಲಕ ವಿನಂತಿ ಮಾಡಿಕೊಂಡಿದ್ದರು. ಆದರೆ ವರದಿಯನ್ನು ಇನ್ನೂ ಸಾರ್ವಜನಿಕಗೊಳಿಸಲಾಗಿಲ್ಲ.

ಈ ಬಗ್ಗೆ ಪಿಟಿಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ ಘನವಟ್, ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದರೆ ನಾವು ಸಲ್ಲಿಸಿರುವ ವರದಿಗೆ ಯಾವುದೇ ಅರ್ಥವಿಲ್ಲ. ಸುಪ್ರೀಂ ಕೋರ್ಟ್ ಜನರಿಗೆ ನಮ್ಮ ವರದಿಯನ್ನು ಬಿಡುಗಡೆ ಮಾಡದಿದ್ದರೆ ನಾನು ಬಹಿರಂಗಪಡಿಸುತ್ತೇನೆ ಎಂದಿರುವ ಅವರು ವರದಿ ತಯಾರಿಸಲು ಮೂರು ತಿಂಗಳು ತೆಗೆದುಕೊಂಡಿದ್ದೆವು ಎನ್ನುತ್ತಾರೆ. 

ರೈತರ ಹಿತದೃಷ್ಟಿಯಿಂದ ಸಮಿತಿಗಳ ವರದಿಯನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಲು ಮುಂದಾಗುತ್ತೇನೆ. ಸಮಿತಿ ಮಾಡಿರುವ ಶಿಫಾರಸ್ಸುಗಳನ್ನು ರೈತರು, ಪತ್ರಿಕೆಗಳು ಮತ್ತು ಸರಕಾರ ಅರಿಯಬೇಕು,’’ ಎಂದು ಹೇಳಿದ ಅವರು, ವರದಿಯು ರೈತರ ಪರವಾಗಿದೆ. ಕೃಷಿಗೆ ಸಂಬಂಧಿಸಿದ ಭವಿಷ್ಯದ ಕಾನೂನುಗಳನ್ನು ರೂಪಿಸಲು ವರದಿಯು ಉತ್ತಮ ಉಲ್ಲೇಖವಾಗಲಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT