ಅಶೋಕ್ ಗೆಹ್ಲೋಟ್ 
ದೇಶ

ಸಂಪುಟ ಪುನಾರಚನೆಗೂ ಮುನ್ನ ಅಶೋಕ್ ಗೆಹ್ಲೋಟ್ ಸರ್ಕಾರದ ಎಲ್ಲಾ ಸಚಿವರ ರಾಜೀನಾಮೆ!

ರಾಜಸ್ಥಾನದಲ್ಲಿ ಸಚಿವ ಸಂಪುಟ ಪುನಾರಚನೆಗೂ ಮುನ್ನ ಅಶೋಕ್ ಗೆಹ್ಲೋಟ್ ಸಂಪುಟದ ಎಲ್ಲಾ ಸಚಿವರು ರಾಜೀನಾಮೆ ನೀಡಿದ್ದಾರೆ. 

ಜೈಪುರ: ರಾಜಸ್ಥಾನದಲ್ಲಿ ಸಚಿವ ಸಂಪುಟ ಪುನಾರಚನೆಗೂ ಮುನ್ನ ಅಶೋಕ್ ಗೆಹ್ಲೋಟ್ ಸಂಪುಟದ ಎಲ್ಲಾ ಸಚಿವರು ರಾಜೀನಾಮೆ ನೀಡಿದ್ದಾರೆ. 

ಶನಿವಾರ ಸಂಜೆ ಸಿಎಂ ಅಶೋಕ್ ಗೆಹ್ಲೋಟ್ ಅವರ ಮನೆಯಲ್ಲಿ ನಡೆದ ಸಭೆಯ ನಂತರ ಎಲ್ಲಾ ಸಚಿವರು ಪಕ್ಷದ ಹೈಕಮಾಂಡ್‌ಗೆ ರಾಜೀನಾಮೆ ಸಲ್ಲಿಸಿದರು. ಸಚಿವ ಸಂಪುಟ ಸಭೆಯ ಬಳಿಕ ರಾಜ್ಯ ಸಾರಿಗೆ ಸಚಿವ ಪ್ರತಾಪ್ ಸಿಂಗ್ ಖಚರಿಯಾವಾಸ್ ಅವರು ಪತ್ರಕರ್ತರಿಗೆ ಈ ಮಾಹಿತಿ ನೀಡಿದರು. ರಾಜಸ್ಥಾನದ ಸಚಿವ ಸಂಪುಟ ಸಭೆಯಲ್ಲಿ ಎಲ್ಲಾ ಸಚಿವರು ರಾಜೀನಾಮೆ ಸಲ್ಲಿಸಲು ಪ್ರಸ್ತಾವನೆ ಕಳುಹಿಸಿದ್ದಾರೆ.

ಸಿಎಂ ಗೆಹ್ಲೋಟ್ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಸಭೆ ನಡೆಯಿತು. ಎಲ್ಲಾ ಸಚಿವರು ರಾಜೀನಾಮೆ ನೀಡಿದ್ದಾರೆ. ಭಾನುವಾರ ಮಧ್ಯಾಹ್ನ 2 ಗಂಟೆಗೆ ಕಾಂಗ್ರೆಸ್ ಶಾಸಕರನ್ನು ಪಕ್ಷದ ರಾಜ್ಯ ಕಚೇರಿಗೆ ಕರೆಸಲಾಗುತ್ತದೆ. ಆ ನಂತರ ಕಾರ್ಯಕ್ರಮವನ್ನು ಗೆಹ್ಲೋಟ್ ಮತ್ತು ಪಕ್ಷದ ರಾಜ್ಯ ಉಸ್ತುವಾರಿ ಅಜಯ್ ಮಾಕೆನ್ ನಿರ್ಧರಿಸುತ್ತಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನು ಉದ್ದೇಶಿಸಿ ರಾಜೀನಾಮೆಯನ್ನು ತಿಳಿಸಲಾಗುವುದು, ನಂತರ ಸಚಿವ ಸಂಪುಟ ಪುನಾರಚನೆ ಪ್ರಕ್ರಿಯೆ ನಡೆಯುತ್ತದೆ ಎಂದು ಅವರು ಹೇಳಿದರು. ಈ ಕುರಿತು ಪಕ್ಷದ ರಾಜ್ಯಾಧ್ಯಕ್ಷ ಗೋವಿಂದ್ ಸಿಂಗ್ ದೋಟಸಾರ ಪ್ರಸ್ತಾವನೆ ಸಲ್ಲಿಸಿದ್ದಾರೆ. ಹೊಸ ಪ್ರಮಾಣ ವಚನ ಸ್ವೀಕಾರ ಸಮಾರಂಭ ಭಾನುವಾರ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಕಂದಾಯ ಸಚಿವ ಹರೀಶ್ ಚೌಧರಿ, ವೈದ್ಯಕೀಯ ಮತ್ತು ಆರೋಗ್ಯ ಸಚಿವ ಡಾ ರಘು ಶರ್ಮಾ ಮತ್ತು ಶಿಕ್ಷಣ ರಾಜ್ಯ ಸಚಿವ ಗೋವಿಂದ್ ಸಿಂಗ್ ದೋತಸ್ರಾ ಅವರು ಈಗಾಗಲೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಪ್ರಸ್ತುತ ರಾಜ್ಯ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಸೇರಿದಂತೆ 21 ಮಂದಿ ಇದ್ದಾರೆ. ರಾಜ್ಯದಲ್ಲಿ ಶಾಸಕರ ಸಂಖ್ಯೆ 200 ಆಗಿದ್ದು, ಅದರ ಪ್ರಕಾರ ಸಂಪುಟದಲ್ಲಿ ಗರಿಷ್ಠ 30 ಮಂದಿ ಸದಸ್ಯರಾಗಬಹುದು.

ಅಶೋಕ್ ಗೆಹ್ಲೋಟ್ ಸರ್ಕಾರ ಮುಂದಿನ ತಿಂಗಳು ಮೂರು ವರ್ಷ ಅಧಿಕಾರಾವಧಿಯನ್ನು ಪೂರ್ಣಗೊಳಿಸಲಿದೆ. ರಾಜಕೀಯ ವಿಶ್ಲೇಷಕರ ಪ್ರಕಾರ, ಸಚಿವ ಸಂಪುಟ ಪುನಾರಚನೆಯಲ್ಲಿ ಸಚಿನ್ ಪೈಲಟ್ ಪಾಳೆಯದ ಶಾಸಕರು ಹಾಗೂ ಕಳೆದ ವರ್ಷ ರಾಜಕೀಯ ಬಿಕ್ಕಟ್ಟಿನಲ್ಲಿ ಸರ್ಕಾರವನ್ನು ಬೆಂಬಲಿಸಿದ ಶಾಸಕರ ನಿರೀಕ್ಷೆಯನ್ನು ಈಡೇರಿಸುವ ಸವಾಲು ಪಕ್ಷದ ಹೈಕಮಾಂಡ್ ಮೇಲಿದೆ. ಈ ಶಾಸಕರಲ್ಲಿ ಬಿಎಸ್‌ಪಿಯಿಂದ ಕಾಂಗ್ರೆಸ್‌ಗೆ ಆರು ಶಾಸಕರು ಮತ್ತು ಒಂದು ಡಜನ್ ಸ್ವತಂತ್ರ ಶಾಸಕರಿದ್ದಾರೆ. ಅಂಕಿಅಂಶಗಳ ಪ್ರಕಾರ, ಪ್ರಸ್ತುತ ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್‌ನ 108 ಮತ್ತು ಬಿಜೆಪಿಯ 71 ಶಾಸಕರಿದ್ದಾರೆ. ಇದಲ್ಲದೇ 13 ಮಂದಿ ಸ್ವತಂತ್ರ ಶಾಸಕರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT