ಗೌತಮ್ ಗಂಭೀರ್-ನವಜೋತ್ ಸಿಧು 
ದೇಶ

'ನಿಮ್ಮ ಮಗನನ್ನು ಗಡಿಗೆ ಕಳುಹಿಸಿ: ಭಯೋತ್ಪಾದಕ ದೇಶದ ಪಿಎಂ ದೊಡ್ಡಣ್ಣ ಎಂದು ಕರೆದ'; ಸಿಧು ವಿರುದ್ಧ ಗಂಭೀರ್ ವಾಗ್ದಾಳಿ

ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ತಮ್ಮ ಹಿರಿಯ ಸಹೋದರ ಎಂದು ಬಣ್ಣಿಸುವ ಮೂಲಕ ವಿವಾದಗಳಲ್ಲಿ ಸಿಲುಕಿಕೊಂಡಿದ್ದಾರೆ.

ನವದೆಹಲಿ: ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ತಮ್ಮ ಹಿರಿಯ ಸಹೋದರ ಎಂದು ಬಣ್ಣಿಸುವ ಮೂಲಕ ವಿವಾದಗಳಲ್ಲಿ ಸಿಲುಕಿಕೊಂಡಿದ್ದಾರೆ. 

ಇದೀಗ ಬಿಜೆಪಿ ಸಂಸದ ಗೌತಮ್ ಗಂಭೀರ್ ಕೂಡ ನವಜೋತ್ ಸಿಧು ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಿಮ್ಮ ಮಗ ಅಥವಾ ಮಗಳನ್ನು ಗಡಿಗೆ ಕಳುಹಿಸಿ, ನಂತರ ಭಯೋತ್ಪಾದಕ ರಾಷ್ಟ್ರದ ಮುಖ್ಯಸ್ಥನನ್ನು ಅಣ್ಣ ಎಂದು ಕರೆಯಿರಿ ಎಂದು ಬಿಜೆಪಿ ಸಂಸದರು ಲೇವಡಿ ಮಾಡಿದರು. 

ಕಳೆದ 70 ವರ್ಷಗಳಿಂದ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆ ವಿರುದ್ಧ ಭಾರತ ಹೋರಾಡುತ್ತಿದೆ ಎಂದು ಗೌತಮ್ ಗಂಭೀರ್ ಹೇಳಿದ್ದಾರೆ. ಭಯೋತ್ಪಾದಕ ರಾಷ್ಟ್ರದ ಪ್ರಧಾನಿಯನ್ನು ಸಿದ್ದು ಅಣ್ಣ ಎಂದು ಕರೆಯುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದರು.

ಕಳೆದ ಒಂದು ತಿಂಗಳಲ್ಲಿ ಕಾಶ್ಮೀರದಲ್ಲಿ ಪಾಕಿಸ್ತಾನಿ ಭಯೋತ್ಪಾದಕರು ನಮ್ಮ 40ಕ್ಕೂ ಹೆಚ್ಚು ನಾಗರಿಕರು ಮತ್ತು ಯೋಧರನ್ನು ಕೊಂದಿದ್ದು ಸಿಧು ಅವರಿಗೆ ನೆನಪಿದೆಯೇ ಎಂದು ಪೂರ್ವ ದೆಹಲಿಯ ಲೋಕಸಭಾ ಸಂಸದ ಗೌತಮ್ ಗಂಭೀರ್ ಪ್ರಶ್ನಿಸಿದ್ದಾರೆ. ಇಮ್ರಾನ್ ಖಾನ್ ಅವರನ್ನು ಹಿರಿಯ ಸಹೋದರ ಎಂದು ಕರೆದಿದ್ದಕ್ಕಾಗಿ ಬಿಜೆಪಿ ಸಂಸದ ನವಜೋತ್ ಸಿಂಗ್ ಸಿಧು ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಾಕಿಸ್ತಾನಕ್ಕೆ ಭೇಟಿ ನೀಡಿದ್ದ ನವಜೋತ್ ಸಿಂಗ್ ಸಿಧು ಅಲ್ಲಿನ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಅಣ್ಣ ಎಂದು ಕರೆದಿದ್ದರು.

ನವಜೋತ್ ಸಿಧು ವಿರುದ್ಧ ಬಿಜೆಪಿ ವಾಗ್ದಾಳಿ
ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ಇದರಲ್ಲಿ ಇಮ್ರಾನ್ ಖಾನ್ ಪರವಾಗಿ ಪಾಕಿಸ್ತಾನಿ ಅಧಿಕಾರಿಯೊಬ್ಬರು ಅವರನ್ನು ಸ್ವಾಗತಿಸುತ್ತಿದ್ದಾರೆ. ವಿಡಿಯೋದಲ್ಲಿ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಇಮ್ರಾನ್ ಖಾನ್ ತನ್ನ ಹಿರಿಯ ಸಹೋದರನಿದ್ದಂತೆ ಮತ್ತು ಅವರು ಅವರನ್ನು ತುಂಬಾ ಪ್ರೀತಿಸುತ್ತಾರೆ ಎಂದು ಹೇಳುತ್ತಿರುವುದು ಕೇಳಿಬರುತ್ತಿದೆ. ಈ ವಿಚಾರದಲ್ಲಿ ಬಿಜೆಪಿ ಈಗ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಇದು ಕೋಟ್ಯಂತರ ಭಾರತೀಯರಿಗೆ ಗಂಭೀರ ಮತ್ತು ಕಳವಳಕಾರಿ ವಿಷಯವಾಗಿದೆ ಎಂದು ಸಂಬಿತ್ ಪಾತ್ರ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡ್ರಗ್ಸ್ ಸೇವನೆ ದೃಢ: ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ!

Video: 'ಪೊಲೀಸರು ಬುದ್ದಿ ಕಲಿಸಿದ್ದಾರೆ, ತಪ್ಪನ್ನ ಕ್ಷಮಿಸಲ್ಲ'; ಮಗ ಸಾಮ್ರಾಟ್‌ ಬಗ್ಗೆ ಕೊನೆಗೂ ಮೌನ ಮುರಿದ ನಟ Duniya Vijay

‘ಹೂತುಹಾಕಬೇಕು ಎನ್ನುವವರಲ್ಲ ನಾವು’.. ‘ಮಹಿಳೆಯರಿಗೆ ಶಿಕ್ಷಣ, ಅವಕಾಶ ನೀಡುತ್ತಿದ್ದೇವೆ’: ‘ಮನೆಯಲ್ಲೇ ಇರಬೇಕು’ ಹೇಳಿಕೆಗೆ ಮುಸ್ಲಿಂ ಧರ್ಮಗುರು ಸ್ಪಷ್ಟನೆ, Video

ಜಮ್ಮು-ಕಾಶ್ಮೀರ: ಬುಡ್ಗಾಮ್‌ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!

Mysuru Dasara: 'ಯುವ ದಸರಾ' ಉದ್ಘಾಟನೆಗೆ ಖ್ಯಾತ ನೃತ್ಯ ನಿರ್ದೇಶಕ ಪ್ರಭುದೇವಗೆ ಆಹ್ವಾನ!