ಸಾಂದರ್ಭಿಕ ಚಿತ್ರ 
ದೇಶ

ಸತ್ತ 7 ಗಂಟೆಗಳ ತರುವಾಯ ಶವಾಗಾರದ ಫ್ರೀಜರ್ ನಿಂದ ಎದ್ದು ಕೂತ ವ್ಯಕ್ತಿ

ಆತನ ಶವವನ್ನು ಅಲ್ಲಿನ ಸಿಬ್ಬಂದಿ ಶವಾಗಾರಕ್ಕೆ ಸ್ಥಳಾಂತರಿಸಿದರು. ಆತನ ಮನೆಯವರು ಆಸ್ಪತ್ರೆಗೆ ಬಂದು ಶವವನ್ನು ಗುರುತಿಸಿ, ಮರಣೋತ್ತರ ಪರೀಕ್ಷೆ ನಡೆಸಲು ಅನುಮತಿ ನೀಡಿ ಸಹಿಯನ್ನೂ ಹಾಕಿದರು.

ಮೊರಾದಾಬಾದ್: ಸಿನಿಮಾಗಳಲ್ಲಿ ನಡೆಯುವಂತೆ ಸತ್ತಿದ್ದ ವ್ಯಕ್ತಿಯೋರ್ವ 7 ಗಂಟೆಗಳ ತರುವಾಯ ಶವಾಗಾರದ ಫ್ರೀಜರ್ ನಿಂದ ಎದ್ದು ಕೂತ ಕುತೂಹಲಕರ ಪ್ರಸಂಗ ಉತ್ತರಪ್ರದೇಶದ ಮೊರಾದಾಬಾದ್ ಎಂಬಲ್ಲಿ ನಡೆದಿದೆ. 

ಶ್ರೀಕೇಶ್ ಕುಮಾರ್ ಎಂಬ ಎಲೆಕ್ಟ್ರಿಷಿಯನ್ ವೃತ್ತಿ ನಿರ್ವಹಿಸುತ್ತಿದ್ದ. ಬೈಕಿನಲ್ಲಿ ವೇಗವಾಗಿ ತೆರಳುತ್ತಿದ್ದಾಗ ಆಕ್ಸಿಡೆಂಟ್ ಆಗಿ ಆತನನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಲ್ಲಿ ಆತನನ್ನು ಸತ್ತಿದ್ದಾನೆ ಎಂದು ವೈದ್ಯರು ಘೋಷಿಸಿದ್ದರು. 

ಆತನ ಶವವನ್ನು ಅಲ್ಲಿನ ಸಿಬ್ಬಂದಿ ಶವಾಗಾರಕ್ಕೆ ಸ್ಥಳಾಂತರಿಸಿದರು. ಆತನ ಮನೆಯವರು ಆಸ್ಪತ್ರೆಗೆ ಬಂದು ಶವವನ್ನು ಗುರುತಿಸಿ, ಮರಣೋತ್ತರ ಪರೀಕ್ಷೆ ನಡೆಸಲು ಅನುಮತಿ ನೀಡಿ ಸಹಿಯನ್ನೂ ಹಾಕಿದರು. ಈ ಸಂದರ್ಭದಲ್ಲಿ ಅಲ್ಲಿ ಹಾಜರಿದ್ದ ಸಂಬಧಿಕರಲ್ಲಿ ಒಬ್ಬಳು ಹುಡುಗಿ ಮೃತದೇಹದಲ್ಲಿ ಚಲನೆಯನ್ನು ಗುರುತಿಸಿದ್ದಳು. ನಂತರ ಆತ ಜೀವದಿಂದ ಇರುವುದು ಪತ್ತೆಯಾಗಿತ್ತು. ನಂತರ ಸೂಕ್ತ ಶುಶ್ರೂಷೆ ಮಾಡಿದನಂತರ ಆತ ಎದ್ದು ಕೂತ ಎಂದು ತಿಳಿದುಬಂದಿದೆ.

ಆತನ ದೇಹವನ್ನು ಆಸ್ಪತ್ರೆಗೆ ತಂದಾಗ ಬೆಳಗಿನ ಜಾವ ೩ ಗಂಟೆ. ಆ ಸಂದರ್ಭ ಆಸ್ಪತ್ರೆಯಲ್ಲಿ ಹಾಜರಿದ್ದ ಮೆಡಿಕಲ್ ಆಫೀಸರ್ ದೇಹವ ತಪಾಸಣೆ ನಡೆಸಿದಾಗ ಹೃದಯ ಬಡಿತ ಇರಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಇಂಥ ಘಟನೆಗಳು ನಡೆಯುವುದು ಅಪರೂಪ. ಈ ಘಟನೆ ನಿರ್ಲಕ್ಷ್ಯದಿಂದ ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Watch| Traffic Fine ಗೆ ಶೇ.50 ರಷ್ಟು ರಿಯಾಯಿತಿ; ವಂಚಕರಿಂದ ಮೋಸಹೋದ ಟೆಕ್ಕಿ!; Dharmasthala Case: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ SIT ದಾಳಿ; ಮೊಬೈಲ್ ವಶಕ್ಕೆ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT