ಸಾಕ್ಷಿ ಮಹಾರಾಜ್ 
ದೇಶ

ಪ್ರಧಾನಿ ಮೋದಿಗೆ ದೇಶವೇ ಮೊದಲು...ಕೃಷಿ ಕಾನೂನು ರದ್ದು ಮಾಡಿದ್ದು, ಚುನಾವಣೆಗಾಗಿ ಅಲ್ಲ: ಸಾಕ್ಷಿ ಮಹಾರಾಜ್

ಚುನಾವಣೆ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿಯವರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿಲ್ಲ.. ಅವರಿಗೆ ದೇಶವೇ ಮೊದಲು ಎಂದು ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಹೇಳಿದ್ದಾರೆ.

ಲಖನೌ: ಚುನಾವಣೆ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿಯವರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿಲ್ಲ.. ಅವರಿಗೆ ದೇಶವೇ ಮೊದಲು ಎಂದು ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಹೇಳಿದ್ದಾರೆ.

ಎಎನ್ ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಸಾಕ್ಷಿ ಮಹಾರಾಜ್ ಅವರು, ‘ಕೃಷಿ ಕಾಯ್ದೆಗಳಿಗೆ ಚುನಾವಣೆಗಳೊಂದಿಗೆ ಯಾವುದೇ ಸಂಬಂಧವಿಲ್ಲ. ಮೋದಿಯವರಿಗೆ ದೇಶವೇ ಮೊದಲು. ಕಾಯ್ದೆಗಳು ಬರಬಹುದು, ರದ್ದುಗೊಳಿಸಬಹುದು, ಮರು ರೂಪಿಸಬಹುದು. ಕಾಯ್ದೆಗಳಿಗಿಂತಲೂ ದೇಶವನ್ನೇ ಮೊದಲ ಆಯ್ಕೆಯನ್ನಾಗಿ ಮಾಡಿ ತಪ್ಪು ಉದ್ದೇಶಗಳಿಗೆ ಹೊಡೆತ ನೀಡಿದ್ದಕ್ಕಾಗಿ ಪ್ರಧಾನಿಯವರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ’ ಎಂದು ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರವು ಕಳೆದ ವರ್ಷ ರೂಪಿಸಿದ್ದ ಮೂರು ಕೃಷಿ ಕಾಯ್ದೆಗಳನ್ನು ರೈತರ ಭಾರಿ ವಿರೋಧದ ಕಾರಣ ರದ್ದುಪಡಿಸುವುದಾಗಿ ಮೋದಿ ಅವರು ಶುಕ್ರವಾರ ಘೋಷಿಸಿದ್ದರು. ಕಾಯ್ದೆಗಳ ಬಗ್ಗೆ ಒಂದು ವರ್ಗದ ರೈತರಿಗೆ ಮನವರಿಕೆ ಮಾಡಿಕೊಡುವಲ್ಲಿ ವಿಫಲರಾಗಿರುವುದಕ್ಕೆ ದೇಶದ ಜನತೆ ಬಳಿ ಕ್ಷಮೆಯನ್ನೂ ಯಾಚಿಸಿದ್ದರು. ಆದರೆ ಪ್ರಧಾನಿ ಮೋದಿ ನಡೆಯನ್ನು ಟೀಕಿಸಿದ್ದ ವಿಪಕ್ಷಗಳು ಚುನಾವಣೆ ಹಿನ್ನಲೆಯಲ್ಲಿ ಕೃಷಿ ಕಾನೂನು ಹಿಂಪಡೆದಿದ್ದಾರೆ ಎಂದು ಟೀಕಿಸಿದ್ದವು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT