ಸಚಿನ್ ಪೈಲಟ್ 
ದೇಶ

ರಾಜಸ್ಥಾನ: ಸಚಿವ ಸಂಪುಟ ಪುನಾರಚನೆಯಿಂದ ಸಚಿನ್ ಪೈಲಟ್ ಫುಲ್ ಖುಷ್!

ರಾಜಸ್ಥಾನದಲ್ಲಿ ತಿಂಗಳ ಕಾಲ ನಡೆದ ಗೊಂದಲದ ನಡುವೆ ಇಂದು ನೂತನ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರ ಮಾಡಲಿದೆ. ಇದೇ ವೇಳೆ ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಸುದ್ದಿಗೋಷ್ಠಿ ನಡೆಸಿ ಸಚಿವ ಸಂಪುಟದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. 

ರಾಜಸ್ಥಾನ: ರಾಜಸ್ಥಾನದಲ್ಲಿ ತಿಂಗಳ ಕಾಲ ನಡೆದ ಗೊಂದಲದ ನಡುವೆ ಇಂದು ನೂತನ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರ ಮಾಡಲಿದೆ. ಇದೇ ವೇಳೆ ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಸುದ್ದಿಗೋಷ್ಠಿ ನಡೆಸಿ ಸಚಿವ ಸಂಪುಟದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. 

ನೂತನ ಸಚಿವ ಸಂಪುಟ ಪಟ್ಟಿಯಿಂದ ಜನರಿಗೆ ಉತ್ತಮ ಸಂದೇಶ ರವಾನೆಯಾಗಿದೆ. ಪಕ್ಷದಲ್ಲಿ ಕೆಲವು ಲೋಪದೋಷಗಳಿದ್ದು, ಅವುಗಳನ್ನು ಭರ್ತಿ ಮಾಡಲಾಗಿದೆ. ಸಚಿವ ಸಂಪುಟ ಪುನಾರಚನೆಗೊಂಡಿದ್ದಕ್ಕೆ ಸೋನಿಯಾ ಗಾಂಧಿ, ಅಶೋಕ್ ಗೆಹ್ಲೋಟ್ ಮತ್ತು ಅಜಯ್ ಮಾಕನ್ ಅವರಿಗೆ ಪೈಲಟ್ ಧನ್ಯವಾದ ತಿಳಿಸಿದರು.

ದಲಿತ ಸಮಾಜದ ನಾಲ್ವರು ಕ್ಯಾಬಿನೆಟ್ ಮಂತ್ರಿಗಳನ್ನು ಮಾಡಿರುವುದು ತುಂಬಾ ಒಳ್ಳೆಯದಾಗಿದೆ. ಆದಿವಾಸಿ ಜನಾಂಗಕ್ಕೆ ಸೂಕ್ತ ಪ್ರಾತಿನಿಧ್ಯ ಸಿಕ್ಕಿದೆ. ಎಲ್ಲರ ಒಪ್ಪಿಗೆ ಪಡೆದು ನೂತನ ಸಚಿವ ಸಂಪುಟ ರಚನೆ ಮಾಡಲಾಗಿದೆ ಎಂದು ತಿಳಿಸಿದರು. ದೆಹಲಿ ಮತ್ತು ರಾಜಸ್ಥಾನದ ನಾಯಕರು ಒಟ್ಟಾಗಿ ಸೇರಿ ಹೊಸ ಸಚಿವ ಸಂಪುಟವನ್ನು ಸಿದ್ಧಪಡಿಸಿದ್ದಾರೆ ಅಂತಾ ಪೈಲಟ್ ತಿಳಿಸಿದರು.

ಪೈಲಟ್ ಬಣ ಅಶೋಕ್ ಬಣದಿಂದ ಮಂತ್ರಿಯಾಗಿದ್ದಾರೆ ಅಂತಾ ಹೇಳಲಾಗುತ್ತಿದೆ. ಆದರೆ,  ರಾಜಸ್ಥಾನದ ಕಾಂಗ್ರೆಸ್ ನಲ್ಲಿ ಯಾವುದೇ ಬಣವಿಲ್ಲ. 2018ರಲ್ಲಿ ನಾವು ಒಟ್ಟಾಗಿ ಚುನಾವಣೆಗಳನ್ನು ಎದುರಿಸಿದ್ದೇವೆ. ಹಾಗಾಗಿಯೇ ಕಾಂಗ್ರೆಸ್ ನಲ್ಲಿ ಒಂದೇ ಬಣ ಮತ್ತು ಅದು ಕಾಂಗ್ರೆಸ್ ಹೈಕಮಾಂಡ್ ನ ಬಣ. ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಸರ್ಕಾರ ರಚಿಸುವುದು ನಮ್ಮ ಗುರಿ. ಕಾಂಗ್ರೆಸ್ ನಲ್ಲಿ ಯಾವಾಗಲೂ ಸಾಮೂಹಿಕ ನಾಯಕತ್ವದ ಆಧಾರದ ಮೇಲೆ ಚುನಾವಣೆ ನಡೆಯುತ್ತದೆ. ಸೋನಿಯಾ ಗಾಂಧಿ ನೇತೃತ್ವದಲ್ಲಿ ಮುಂದಿನ ಚುನಾವಣೆಗೆ ಹೋಗುತ್ತೇವೆ ಅಂತಾ ಪೈಲಟ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT