ಸಾಂದರ್ಭಿಕ ಚಿತ್ರ 
ದೇಶ

ಬೆತ್ತಲೆ ವಿಡಿಯೊ ಕಾಲ್ ಮಾಡಿ ಬ್ಲ್ಯಾಕ್ ಮೇಲ್ ಮಾಡುವ ಪ್ರಕರಣಗಳ ಹೆಚ್ಚಳ: ಸೈಬರ್ ಕ್ರೈಮ್ ಪೊಲೀಸರ ಎಚ್ಚರಿಕೆ

ದೆಹಲಿ ವಿವಿಯಲ್ಲಿ ಉಪನ್ಯಾಸಕರಾಗಿ ವೃತ್ತಿ ನಿರ್ವಹಿಸುತ್ತಿರುವ ಗೌರವಾನ್ವಿತ ವ್ಯಕ್ತಿಗೆ ಒಂದು ದಿನ ಫೇಸ್ ಬುಕ್ ಮೆಸೆಂಜರ್ ನಿಂದ ಕರೆ ಬರುತ್ತದೆ. ಕಾಲ್ ರಿಸೀವ್ ಮಾಡಿದರೆ ಅತ್ತ ಕಡೆ ಯುವತಿಯೋರ್ವಳು ಬೆತ್ತಲೆಯಾಗಿ ನಿಂತು ಮಾತಾಡುತ್ತಿದ್ದಳು.

ನವದೆಹಲಿ: ದೇಶದಲ್ಲಿ ಅಶ್ಲೀಲ ವಿಡಿಯೋ ಕಾಲ್ ಮಾಡಿ, ಆ ಕಾಲ್ ರೆಕಾರ್ಡ್ ಮುಂದಿಟ್ಟುಕೊಂಡು ಜನರಿಂದ ಸುಲಿಗೆ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಪೊಲೀಸರು ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್ ಮೆಸೆಂಜರ್ ಅನ್ನು ಈ ಕೆಲಸಕ್ಕೆ ಖದೀಮರು ಬಳಸಿಕೊಳ್ಳುತ್ತಿದ್ದಾರೆ. 

ದೆಹಲಿ ವಿವಿಯಲ್ಲಿ ಉಪನ್ಯಾಸಕರಾಗಿ ವೃತ್ತಿ ನಿರ್ವಹಿಸುತ್ತಿರುವ ಗೌರವಾನ್ವಿತ ವ್ಯಕ್ತಿಗೆ ಒಂದು ದಿನ ಫೇಸ್ ಬುಕ್ ಮೆಸೆಂಜರ್ ನಿಂದ ಕರೆ ಬರುತ್ತದೆ. ಕಾಲ್ ರಿಸೀವ್ ಮಾಡಿದರೆ ಅತ್ತ ಕಡೆ ಯುವತಿಯೋರ್ವಳು ಬೆತ್ತಲೆಯಾಗಿ ನಿಂತು ಮಾತಾಡುತ್ತಿದ್ದಳು. ಒಡನೆಯೇ ಮುಜುಗರದಿಂದ ಉಪನ್ಯಾಸಕ ಕಾಲ್ ಕಟ್ ಮಾಡಿದ್ದರು. ಆದರೆ ಅಷ್ಟರವೇಳೆಗೆ ಕೆಲವೇ ಸೆಕೆಂಡುಗಳ ಕಾಲ ಉಪನ್ಯಾಸಕ ಬೆತ್ತಲೆ ಹುಡುಗಿಯೊಡನೆ ಸಂಭಾಷಿಸುತ್ತಿರುವ ವಿಡಿಯೊವನ್ನು ರೆಕಾರ್ಡ್ ಮಾಡಿದ್ದ ವಂಚಕರು ಆ ವಿಡಿಯೋವನ್ನು ಉಪನ್ಯಾಸಕರಿಗೆ ಕಳಿಸಿದರು. 

5 ನಿಮಿಷಗಳಲ್ಲಿ 20,000 ರೂ. ಗಳನ್ನು ಡಿಜಿಟಲ್ ಪೇಮೆಂಟ್ ಮಾಡಬೇಕು ಇಲ್ಲವಾದರೆ ಈ ವಿಡಿಯೋವನ್ನು ಫೇಸ್ ಬುಕ್ ನಲ್ಲಿ ಶೇರ್ ಮಾಡುವುದಾಗಿ ಬೆದರಿಕೆಯೊಡ್ಡಲಾಯಿತು. ಉಪನ್ಯಾಸಕರು ಅವರನ್ನು ಬ್ಲಾಕ್ ಮಾಡಿದಾಗ ಮತ್ತೊಂದು ನಂಬರ್ ನಿಂದ ಬೆದರಿಕೆ ಕರೆ ಬಂದಿತು. ನಂತರ ಈ ಬಗ್ಗೆ ಆ ವ್ಯಕ್ತಿ ಪೊಲೀಸರಿಗೆ ದೂರು ನೀಡಿದ್ದರು. 

ಈ ಬಗೆಯ ವಂಚನೆಯ ಕೇಂದ್ರ ಸ್ಥಾನ ರಾಜಸ್ಥಾನ ಎಂಬುದು ತಿಳಿದುಬಂಡಿದೆ. ಈ ಹಿಂದೆ ಡಿಜಿಟಲ್ ಪೇಮೆಂಟ್, ಕ್ರೆಡಿಟ್ ಕಾರ್ಡ್, ಎಟಿಎಂ ಪಾಸ್ವರ್ಡ್ ಮತ್ತಿತರ ಮಾಹಿತಿ ಪಡೆದು ಚಂಚಿಸುತ್ತಿದ್ದ ತಂಡವೇ ಇದೀಗ ಈ ಹೊಸ ಅಶ್ಲೀಲ ಮಾರ್ಗ ಹಿಡಿದಿದೆ ಎನ್ನಲಾಗುತ್ತಿದೆ. ಈವರೆಗೆ ಪೊಲೀಸರು ಒಟ್ಟು 36 ಗ್ಯಾಂಗ್ ಗಳಿಗೆ ಸೇರಿದ 600ಕ್ಕೂ ಹೆಚ್ಚು ಮಂದಿಯನ್ನು ಇದೇ ಪ್ರಕರಣದಡಿ ಬಂಧಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT