ಅಭಿನಂದನ್ ವರ್ಧಮಾನ್ 
ದೇಶ

ಬಾಲಾಕೋಟ್ ವಾಯುದಾಳಿಯಲ್ಲಿ ಪಾಕ್ ಹುಟ್ಟಡಗಿಸಿದ್ದ ಅಭಿನಂದನ್ ವರ್ಧಮಾನ್ ಗೆ ವೀರ ಚಕ್ರ ಪದಕ ಪ್ರದಾನ: ವಿಡಿಯೋ

ಇತ್ತೀಚಿಗೆ ಬಡ್ತಿ ಪಡೆದಿರುವ ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ ಅವರಿಗೆ ಸೋಮವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ವೀರ ಚಕ್ರ ಪ್ರಶಸ್ತಿ ಪ್ರದಾನ ಮಾಡಿದರು.

ನವದೆಹಲಿ: ಇತ್ತೀಚಿಗೆ ಬಡ್ತಿ ಪಡೆದಿರುವ ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ ಅವರಿಗೆ ಸೋಮವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ವೀರ ಚಕ್ರ ಪ್ರಶಸ್ತಿ ಪ್ರದಾನ ಮಾಡಿದರು.

ಬಾಲಾಕೋಟ್ ವಾಯು ದಾಳಿಯ ನಂತರ ಭಾರತ ಮತ್ತು ಪಾಕ್ ಗಡಿಯಲ್ಲಿ ಹಾರಾಟ ನಡೆಸಿದ್ದ ಪಾಕ್ ವಾಯುಪಡೆಯ ವಿಮಾನವನ್ನು ಹೊಡೆದುರುಳಿಸಿದ ಕಾರಣಕ್ಕಾಗಿ ಅವರಿಗೆ ವೀರ ಚಕ್ರ ಪ್ರಶಸ್ತಿಗೌರವ ಲಭಿಸಿದೆ .

ಈ ಘಟನೆ ನಂತರ ಅಭಿನಂದನ್ ವರ್ಧಮಾನ್ ಅವರನ್ನು ಪಾಕ್ ವಾಯುಪಡೆ ತನ್ನ ವಶಕ್ಕೆ ತೆಗೆದುಕೊಂಡು. ಭಾರತ ಮತ್ತು ಅಂತಾರಾಷ್ಟ್ರೀಯ ಸಮುದಾಯದ ಒತ್ತಡ ಹೆಚ್ಚಿದ ಹಿನ್ನೆಲೆಯಲ್ಲಿ ಪಾಕಿಸ್ತಾನ ಅವರನ್ನು ನಂತರ ಬೇಷರತ್ತಾಗಿ ಬಿಡುಗಡೆ ಮಾಡಿತ್ತು.

ಪಾಕ್ ಆಕ್ರಮಿತ ಗಡಿಯಲ್ಲಿ, ಭಯೋತ್ಪಾದಕ ನೆಲೆಗಳ ಮೇಲೆ ಭಾರತೀಯ ವಾಯುಪಡೆ ಸರ್ಜಿಕಲ್ ದಾಳಿ ನಡೆಸಿ ಭಯೋತ್ಪಾದಕರ ನೆಲೆಗಳನ್ನು ದ್ವಂಸಗೊಳಿಸಿತ್ತು. ನಂತರ ಸರ್ಜಿಕಲ್ ದಾಳಿ ವಿಚಾರ ದೇಶಾದ್ಯಂತ ಮನೆಮಾತಾಗಿ ಭಾರತೀಯ ವೀರ ಯೋಧರ ಸಾಹಸವನ್ನು ದೇಶ ಕೊಂಡಾಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT