ಸಾಂದರ್ಭಿಕ ಚಿತ್ರ 
ದೇಶ

ಶಾಲೆ ಬಸ್ ತಪ್ಪಿತೆಂದು ಮನನೊಂದ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಶರಣು!

ಶಾಲೆಗೆ ತೆರಳಬೇಕಿದ್ದ ಬಸ್ ತಪ್ಪಿತೆಂದು ಮನನೊಂದ 9 ನೇ ತರಗತಿ ವಿದ್ಯಾರ್ಥಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಅಘಾತಕಾರಿ ಘಟನೆ ಮಧ್ಯಪ್ರದೇಶದ ಬೆತುಲ್ ಜಿಲ್ಲೆಯಲ್ಲಿ ವರದಿಯಾಗಿದೆ. 

ಭೋಪಾಲ್: ಶಾಲೆಗೆ ತೆರಳಬೇಕಿದ್ದ ಬಸ್ ತಪ್ಪಿತೆಂದು ಮನನೊಂದ 9 ನೇ ತರಗತಿ ವಿದ್ಯಾರ್ಥಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಅಘಾತಕಾರಿ ಘಟನೆ ಮಧ್ಯಪ್ರದೇಶದ ಬೆತುಲ್ ಜಿಲ್ಲೆಯಲ್ಲಿ ವರದಿಯಾಗಿದೆ. 

ಆಮ್ಧೋಹ್ ಗ್ರಾಮದ ಘೋಡಾಡೋಂಗ್ರಿ ಪೋಲಿಸ್ ಪೋಸ್ಟ್ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವ 14 ವರ್ಷದ ಬಾಲಕ ಖಾಸಗಿ ಶಾಲೆಯಲ್ಲಿ 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ರವಿ ಶಾಕ್ಯ ಮಾಹಿತಿ ನೀಡಿದ್ದಾರೆ.   

ಪೋಷಕರು ಪೊಲೀಸರಿಗೆ ನೀಡಿರುವ ಮಾಹಿತಿಯ ಪ್ರಕಾರ ಬಾಲಕ ಶಾಲೆಗಳಲ್ಲಿ ತಪ್ಪದೇ ತರಗತಿಗಳಿಗೆ ಸರಿಯಾದ ಸಮಯಕ್ಕೆ ಹಾಜರಾಗುತ್ತಿದ್ದ ಹಾಗೂ ವಿದ್ಯಾಭ್ಯಾಸದಲ್ಲಿ ಮುಂದಿದ್ದ. ಶಾಲೆಗೆ ಹೋಗುವ ಬಸ್ ತಪ್ಪಿದ್ದಕ್ಕಾಗಿ ಬಾಲಕ ತೀವ್ರವಾಗಿ ಮನನೊಂದು ಕಣ್ಣೀರು ಹಾಕುತ್ತಾ ಮನೆಗೆ ಬಂದಿದ್ದಾನೆ. ಈ ಬಳಿಕ ಮನೆಯ ಹಿಂಭಾಗದಲ್ಲಿದ್ದ ಮರವೊಂದಕ್ಕೆ ನೇಣುಬಿಗಿದುಕೊಂಡು ಸಾವನ್ನಪ್ಪಿದ್ದಾನೆ" ಎಂದು ಪೋಷಕರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT