ಕೋವ್ಯಾಕ್ಸಿನ್ 
ದೇಶ

ರೋಗಲಕ್ಷಣದ ಸಹಿತ ಕೋವಿಡ್ ವಿರುದ್ಧ ಕೋವ್ಯಾಕ್ಸಿನ್ ಲಸಿಕೆ ಶೇ.50 ರಷ್ಟು ಪರಿಣಾಮಕಾರಿ

ಭಾರತದಲ್ಲಿ ದೇಶೀಯವಾಗಿ ಅಭಿವೃದ್ಧಿಯಾಗಿರುವ ಕೋವ್ಯಾಕ್ಸಿನ್ ಲಸಿಕೆಯ ಎರಡು ಡೋಸ್ ಗಳು ಶೇ.50 ರಷ್ಟು ಪರಿಣಾಮಕಾರಿಯಾಗಿದೆ ಎಂದು ಲ್ಯಾನ್ಸೆಟ್ ಸಾಂಕ್ರಾಮಿಕ ರೋಗಗಳ ಜರ್ನಲ್ ನಲ್ಲಿ ಪ್ರಕಟವಾಗಿರುವ ಅಧ್ಯಯನ ವರದಿ ತಿಳಿಸಿದೆ. 

ನವದೆಹಲಿ: ಭಾರತದಲ್ಲಿ ದೇಶೀಯವಾಗಿ ಅಭಿವೃದ್ಧಿಯಾಗಿರುವ ಕೋವ್ಯಾಕ್ಸಿನ್ ಲಸಿಕೆಯ ಎರಡು ಡೋಸ್ ಗಳು ಶೇ.50 ರಷ್ಟು ಪರಿಣಾಮಕಾರಿಯಾಗಿದೆ ಎಂದು ಲ್ಯಾನ್ಸೆಟ್ ಸಾಂಕ್ರಾಮಿಕ ರೋಗಗಳ ಜರ್ನಲ್ ನಲ್ಲಿ ಪ್ರಕಟವಾಗಿರುವ ಅಧ್ಯಯನ ವರದಿ ತಿಳಿಸಿದೆ. 

ಮೊದಲ ರಿಯಲ್ ವರ್ಲ್ಡ್ ಮೌಲ್ಯಮಾಪನದಲ್ಲಿ ಈ ಅಂಕಿ-ಅಂಶಗಳು ಬಹಿರಂಗವಾಗಿದ್ದು, ಈ ಲಸಿಕೆ ರೋಗಲಕ್ಷಣ ಸಹಿತ ಕೊರೋನಾ ಸೋಂಕಿನ ವಿರುದ್ಧ ಶೇ.77.8 ಪರಿಣಾಮಕಾರಿತ್ವ (ದಕ್ಷತೆ)ಯನ್ನು ಹೊಂದಿದೆ, ಸುರಕ್ಷತೆಯ ಆತಂಕ ಇಲ್ಲ ಎಂದು ವರದಿ ಹೇಳಿದೆ. 

ಏ.15-ಮೇ 15 ವರೆಗೆ ರೋಗಲಕ್ಷಣಗಳನ್ನು ಹೊಂದಿ, ಕೋವಿಡ್-19 ಸೋಂಕು ಪತ್ತೆ ಪರೀಕ್ಷೆಗಾಗಿ ಆರ್ ಟಿಪಿಸಿಆರ್ ಪರೀಕ್ಷೆಗೆ ಒಳಪಟ್ಟಿದ್ದ  ದೆಹಲಿಯ ಏಮ್ಸ್ ನ 2,714 ಸಿಬ್ಬಂದಿಗಳನ್ನು ಲಸಿಕೆಗೆ ಸಂಬಂಧಿಸಿದಂತೆ ಮೌಲ್ಯಮಾಪನಕ್ಕೆ ಒಳಪಡಿಸಲಾಗಿತ್ತು.
 
ಈ ಅಧ್ಯಯನ ನಡೆದ ಅವಧಿಯಲ್ಲಿ ಭಾರತದಲ್ಲಿ ವರದಿಯಾಗುತ್ತಿದ್ದ ಶೇ.80 ರಷ್ಟು ಪ್ರಕರಣಗಳು ಡೆಲ್ಟಾ ರೂಪಾಂತರಿಯಾಗಿ ಪ್ರಬಲವಾಗಿತ್ತು ಎಂದು ಸಂಶೋಧಕರು ತಿಳಿಸಿದ್ದಾರೆ. 

ಹೈದರಾಬಾದ್ ಮೂಲದ ಸಂಸ್ಥೆ ಭಾರತ್ ಬಯೋಟೆಕ್ ಸಂಸ್ಥೆ ಕೋವ್ಯಾಕ್ಸಿನ್ ನ್ನು ಅಭಿವೃದ್ಧಿಪಡಿಸಿದ್ದು, ಜಾಗತಿಕ ಮಟ್ಟದಲ್ಲಿ ತುರ್ತು ಬಳಕೆಯ ಅನುಮೋದನೆಗೆ ಸಿದ್ಧಗೊಂಡಿದೆ. ವಿಶ್ವಸಂಸ್ಥೆ ತುರ್ತು ಬಳಕೆಗೆ ಈ ತಿಂಗಳಲ್ಲಿ ಅನುಮೋದನೆ ನೀಡಿತ್ತು.

ಕೋವ್ಯಾಕ್ಸಿನ್ ಲಸಿಕೆಯ ಮೊದಲ ಡೋಸ್ ನಂತರದ 28 ದಿನಗಳಲ್ಲಿ ಎರಡನೇ ಡೋಸ್ ನ್ನು ನೀಡಬೇಕಾಗುತ್ತದೆ. ಭಾರತದಲ್ಲಿ 18 ವರ್ಷದ ಮೇಲ್ಪಟ್ಟ ವ್ಯಕ್ತಿಗಳಿಗೆ  ಕೋವ್ಯಾಕ್ಸಿನ್ ನೀಡುವುದಕ್ಕೆ 2021 ರ ಜನವರಿಯಲ್ಲಿ ಅನುಮತಿ ನೀಡಲಾಗಿತ್ತು. ಇತ್ತೀಚಿನ ಅಧ್ಯಯನವನ್ನು ಭಾರತದಲ್ಲಿ ಕೋವಿಡ್-19 ನ ಎರಡನೇ ಅಲೆಯ ಅವಧಿಯಲ್ಲಿ ನಡೆಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!