ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ 
ದೇಶ

ಕಾಶ್ಮೀರ 'ಉಳಿಸಿಕೊಳ್ಳಲು' ಬಯಸಿದರೆ 370 ವಿಧಿಯನ್ನು ಮರುಸ್ಥಾಪಿಸಿ, ಸಮಸ್ಯೆ ಬಗೆಹರಿಸಿ: ಕೇಂದ್ರಕ್ಕೆ ಮೆಹಬೂಬಾ ಮುಫ್ತಿ

ನೀವು "ಕಾಶ್ಮೀರವನ್ನು ಉಳಿಸಿಕೊಳ್ಳಲು" ಬಯಸಿದರೆ 370ನೇ ವಿಧಿಯನ್ನು ಪುನಃಸ್ಥಾಪಿಸಬೇಕು ಮತ್ತು ಕಣಿವೆಯ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು...

ಬನಿಹಾಲ್/ಜಮ್ಮು: ನೀವು "ಕಾಶ್ಮೀರವನ್ನು ಉಳಿಸಿಕೊಳ್ಳಲು" ಬಯಸಿದರೆ 370ನೇ ವಿಧಿಯನ್ನು ಪುನಃಸ್ಥಾಪಿಸಬೇಕು ಮತ್ತು ಕಣಿವೆಯ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಬುಧವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕಣಿವೆಯ ಜನರು "ನಮ್ಮ ಗುರುತು ಮತ್ತು ಗೌರವವನ್ನು" ಮರಳಿ ಪಡೆಯಲು ಬಯಸುತ್ತಾರೆ ಮತ್ತು ಅದು ಕೂಡ ಆಸಕ್ತಿಯಿಂದ ಕೂಡಿದೆ ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಹೇಳಿದ್ದಾರೆ.

ಬನಿಹಾಲ್‌ನ ನೀಲ್ ಗ್ರಾಮದಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮುಫ್ತಿ, ಜಮ್ಮು ಮತ್ತು ಕಾಶ್ಮೀರದ ಜನರು "ನಮಗೆ 370ನೇ ವಿಧಿ, ನಮ್ಮದೇ ಸಂವಿಧಾನ ಮತ್ತು ಧ್ವಜವನ್ನು ನೀಡಿದ ಮಹಾತ್ಮ ಗಾಂಧಿಯವರ ಭಾರತದೊಂದಿಗೆ ತಮ್ಮ ಭವಿಷ್ಯ" ನಿರ್ಧರಿಸಲು ಬಯಸುತ್ತಾರೆ. ಆದರೆ (ನಾಥುರಾಮ್)ಗೋಡ್ಸೆಯ ಭಾರತದೊಂದಿಗೆ ಬದುಕಲು ಸಾಧ್ಯವಿಲ್ಲ ಎಂದಿದ್ದಾರೆ.

"ವಿಶೇಷ ಸ್ಥಾನಮಾನ ಮರುಸ್ಥಾಪನೆಗಾಗಿ ಜನರು ಒಗ್ಗಟ್ಟಾಗಿ ನಿಲ್ಲಬೇಕು ಮತ್ತು ಜಮ್ಮು ಮತ್ತು ಕಾಶ್ಮೀರದ ಜನರ ಗುರುತು ಮತ್ತು ಗೌರವವನ್ನು ಕಾಪಾಡುವ ತಮ್ಮ ಹೋರಾಟವನ್ನು ಬಲಪಡಿಸಬೇಕು" ಮಾಜಿ ಸಿಎಂ ಜನರನ್ನು ಕೇಳಿಕೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT