ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19: ದೇಶದಲ್ಲಿ 9,283 ಹೊಸ ಪ್ರಕರಣ, ಕಳೆದ 537 ದಿನಗಳಲ್ಲಿ ಅತಿ ಕಡಿಮೆ; 437 ಮಂದಿ ಸಾವು

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 9 ಸಾವಿರದ 283 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು ಒಟ್ಟಾರೆ ಸೋಂಕಿತರ ಸಂಖ್ಯೆ 3 ಕೋಟಿಯ 45 ಲಕ್ಷದ  35 ಸಾವಿರದ 763ಕ್ಕೆ ಏರಿಕೆಯಾಗಿದೆ.

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 9 ಸಾವಿರದ 283 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು ಒಟ್ಟಾರೆ ಸೋಂಕಿತರ ಸಂಖ್ಯೆ 3 ಕೋಟಿಯ 45 ಲಕ್ಷದ  35 ಸಾವಿರದ 763ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ 1 ಲಕ್ಷದ 11 ಸಾವಿರದ 481ಕ್ಕೆ ಇಳಿಕೆಯಾಗಿದೆ. ಇದು ಕಳೆದ 537 ದಿನಗಳಲ್ಲಿ ಅತಿ ಕಡಿಮೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶ ವರದಿ ಮಾಡಿದೆ.

ದೇಶದಲ್ಲಿ ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 4 ಲಕ್ಷದ 66 ಸಾವಿರದ 584ಕ್ಕೆ ತಲುಪಿದ್ದು 437 ಮಂದಿ ಹೊಸದಾಗಿ ಮೃತಪಟ್ಟಿದ್ದಾರೆ. ಪ್ರತಿದಿನ ಸೋಂಕಿತರ ಸಂಖ್ಯೆ ಸತತ 47 ದಿನಗಳಿಂದ 20 ಸಾವಿರಕ್ಕಿಂತ ಕಡಿಮೆ ಸಂಖ್ಯೆಯಲ್ಲಿದೆ ಹಾಗೂ ಸತತ 150 ದಿನಗಳಿಂದ ಪ್ರತಿದಿನ ಸೋಂಕಿತರ ಸಂಖ್ಯೆ 50 ಸಾವಿರಕ್ಕಿಂತ ಕಡಿಮೆ ವರದಿಯಾಗಿದೆ.

ಒಟ್ಟಾರೆ ಸೋಂಕಿತರ ಪೈಕಿ ಸಕ್ರಿಯ ಪ್ರಕರಣಗಳ ಸಂಖ್ಯೆ ಶೇಕಡಾ 0.32ರಷ್ಟಿದ್ದು, ಕಳೆದ ವರ್ಷ ಮಾರ್ಚ್ ನಿಂದ ಅತಿ ಕಡಿಮೆಯಾಗಿದೆ. ದೇಶದಲ್ಲಿ ಕೋವಿಡ್ ನಿಂದ ಗುಣಮುಖ ಹೊಂದುತ್ತಿರುವವರ ಪ್ರಮಾಣ ಶೇಕಡಾ 98.33ರಷ್ಟಿದ್ದು ಕಳೆದ ವರ್ಷ ಮಾರ್ಚ್ ನಿಂದ ಅತಿ ಗರಿಷ್ಠವಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಕಳೆದ ಒಂದು ದಿನದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 2 ಸಾವಿರದ 103ರಷ್ಟು ಕಡಿಮೆಯಾಗಿದೆ. ಭಾರತದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಕಳೆದ ವರ್ಷ 2020ರ ಆಗಸ್ಟ್ 7ರಂದು 20 ಲಕ್ಷ ಗಡಿ ದಾಟಿತ್ತು. ಆಗಸ್ಟ್ 23ರಂದು 30 ಲಕ್ಷ, ಸೆಪ್ಟೆಂಬರ್ 5ರಂದು 40 ಲಕ್ಷ ಮತ್ತು ಸೆಪ್ಟೆಂಬರ್ 16ರಂದು 50 ಲಕ್ಷ ಗಡಿಯನ್ನು ದಾಟಿತ್ತು.

ನಂತರ 2020ರ ಸೆಪ್ಟೆಂಬರ್ 28 ರಂದು 60 ಲಕ್ಷ, ಅಕ್ಟೋಬರ್ 11 ರಂದು 70 ಲಕ್ಷ, ಅಕ್ಟೋಬರ್ 29 ರಂದು 80 ಲಕ್ಷ, ನವೆಂಬರ್ 20 ರಂದು 90 ಲಕ್ಷ ಮತ್ತು ಡಿಸೆಂಬರ್ 19 ರಂದು ಒಂದು ಕೋಟಿ ಗಡಿ ದಾಟಿತ್ತು. ಭಾರತವು ಕಳೆದ ಮೇ 4 ರಂದು ಎರಡು ಕೋಟಿ ಮತ್ತು ಜೂನ್ 23 ರಂದು ಮೂರು ಕೋಟಿಗೆ ಸೋಂಕಿತರ ಸಂಖ್ಯೆ ತಲುಪಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಿ-ಫೋರ್ಸ್ ಬ್ಲಾಕೌಟ್ ನಿಂದ ಪತನ ಸಾಧ್ಯತೆ: ತೇಜಸ್ ಅಪಘಾತ ಬಗ್ಗೆ ತಜ್ಞರು; ಮಗನ ಸಾವಿನ ಸುದ್ದಿ Youtube ನೋಡಿ ತಿಳಿದುಕೊಂಡ ಪೈಲಟ್ ತಂದೆ !

ಬೆಂಗಳೂರು ಎಟಿಎಂ ದರೋಡೆ: ಮತ್ತೋರ್ವ ಪ್ರಮುಖ ಆರೋಪಿ Xavier ತಮಿಳುನಾಡಿನಲ್ಲಿ ಬಂಧನ!

ತಪ್ಪಿಗಿಲ್ಲ ಅವಕಾಶ: ದುಬೈನಲ್ಲಿ ತೇಜಸ್ ವಿಮಾನದ ಇಜೆಕ್ಷನ್ ಸೀಟನ್ನು ಮಣಿಸಿದ ಭೌತಶಾಸ್ತ್ರ

ಐಟಿ ಸಿಟಿ ಬೆಂಗಳೂರಿನ ಮಕ್ಕಳು ಕಲಿಕೆಯಲ್ಲಿ ಹಿಂದೆ: 3ರಿಂದ 5ನೇ ಕ್ಲಾಸಿನ ಶೇ.18ರಷ್ಟು ಮಕ್ಕಳು ಮಾತ್ರ 2ನೇ ತರಗತಿ ಪಠ್ಯ ಓದಬಲ್ಲರು !

ಮತ್ತೆ ಶಾಕ್ ಕೊಟ್ಟ Amazon, ಅಕ್ಟೋಬರ್‌ನಲ್ಲಿ 1800ಕ್ಕೂ ಅಧಿಕ ಎಂಜಿನಿಯರ್ ಗಳ ಉದ್ಯೋಗ ಕಡಿತ, ಒಟ್ಟಾರೆ 14 ಸಾವಿರ ಮಂದಿ ವಜಾ!

SCROLL FOR NEXT