ಸಾಂದರ್ಭಿಕ ಚಿತ್ರ 
ದೇಶ

ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ, ಮುಂದಿನ ಐದು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ಒಂದು ಚಂಡಮಾರುತ ಎದುರಾಗುವ ಸಾಧ್ಯತೆ ಇದ್ದು, ಅದರ ಪ್ರಭಾವದಿಂದ ವಾಯುಭಾರ ಕುಸಿತ ಪ್ರದೇಶವಾಗಿ ರೂಪಾಂತರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಬುಧವಾರ ತಿಳಿಸಿದೆ.

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಒಂದು ಚಂಡಮಾರುತ ಎದುರಾಗುವ ಸಾಧ್ಯತೆ ಇದ್ದು, ಅದರ ಪ್ರಭಾವದಿಂದ ವಾಯುಭಾರ ಕುಸಿತ ಪ್ರದೇಶವಾಗಿ ರೂಪಾಂತರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಬುಧವಾರ ತಿಳಿಸಿದೆ. ಅಲ್ಲದೆ ಮುಂದಿನ ಐದು ದಿನಗಳ ಕಾಲ ದಕ್ಷಿಣ ಭಾರತದ ರಾಜ್ಯಗಳ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ಚಂಡಮಾರುತದ ಕೇಂದ್ರ ಬಿಂದು ನೈಋತ್ಯ ಮತ್ತು ಪಕ್ಕದ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

"ಇದರ ಪ್ರಭಾವದಿಂದ ಮುಂದಿನ 24 ಗಂಟೆಗಳಲ್ಲಿ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪ್ರದೇಶವಾಗಿ ರೂಪಾಂತರಗೊಳ್ಳುವ ಸಾಧ್ಯತೆಯಿದೆ ಸಾಧ್ಯತೆಯಿದೆ. ಇದು ಶ್ರೀಲಂಕಾ ಮತ್ತು ದಕ್ಷಿಣ ತಮಿಳುನಾಡು ಕರಾವಳಿಯ ಕಡೆಗೆ ಚಲಿಸುವ ಸಾಧ್ಯತೆಯಿದೆ" ಎಂದು ಹವಾಮಾನ ಇಲಾಖೆ ಹೇಳಿದೆ.

ಮುಂದಿನ ಐದು ದಿನಗಳಲ್ಲಿ ಆಂಧ್ರಪ್ರದೇಶದ ಕರಾವಳಿ, ಯಾನಂ, ರಾಯಲಸೀಮಾ, ಕರ್ನಾಟಕದ ದಕ್ಷಿಣ ಒಳನಾಡು, ಕೇರಳ, ಮಾಹೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆಯಲಿದ್ದು, ಇನ್ನೂ ಐದು ದಿನ ಕೆಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT