ದೆಹಲಿ ಪರಿಸರ ಖಾತೆ ಸಚಿವ ಗೋಪಾಲ್ ರೈ 
ದೇಶ

ದೆಹಲಿಯಲ್ಲಿ ನವೆಂಬರ್ 29 ರಿಂದ ಶಾಲಾ-ಕಾಲೇಜುಗಳು ಪುನರಾರಂಭ: ಪರಿಸರ ಸಚಿವ ಗೋಪಾಲ್ ರೈ

ಅಧಿಕ ವಾಯುಮಾಲಿನ್ಯದ ಕಾರಣದಿಂದ ಬಂದ್ ಆಗಿದ್ದ ಶಾಲಾ- ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳಲ್ಲಿ ನವೆಂಬರ್ 29 ರಿಂದ ದೈಹಿಕ ತರಗತಿಗಳು ಪುನರಾರಂಭಗೊಳ್ಳಲಿವೆ...

ನವದೆಹಲಿ: ಅಧಿಕ ವಾಯುಮಾಲಿನ್ಯದ ಕಾರಣದಿಂದ ಬಂದ್ ಆಗಿದ್ದ ಶಾಲಾ- ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳಲ್ಲಿ ನವೆಂಬರ್ 29 ರಿಂದ ದೈಹಿಕ ತರಗತಿಗಳು ಪುನರಾರಂಭಗೊಳ್ಳಲಿವೆ ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರೈ ಅವರು ಬುಧವಾರ ಹೇಳಿದ್ದಾರೆ.

ಸೋಮವಾರದಿಂದ ಎಲ್ಲಾ ಸರ್ಕಾರಿ ಕಚೇರಿಗಳು ತೆರೆಯಲಿವೆ ಎಂದು ತಿಳಿಸಿದ ಸಚಿವರು, ಸರ್ಕಾರಿ ನೌಕರರು ಸಾರ್ವಜನಿಕ ಸಾರಿಗೆ ಬಳಸಬೇಕು ಒತ್ತಾಯಿಸಿದರು ಮತ್ತು ಅವರಿಗಾಗಿ ವಿಶೇಷ ಬಸ್‌ಗಳನ್ನು ನಿಯೋಜಿಸಲಾಗುವುದು ಎಂದು ಹೇಳಿದ್ದಾರೆ.

ಅಗತ್ಯ ಸೇವೆಗಳಲ್ಲಿ ತೊಡಗಿರುವವರನ್ನು ಹೊರತುಪಡಿಸಿ ಸಿಎನ್‌ಜಿ ಮತ್ತು ಎಲೆಕ್ಟ್ರಿಕ್ ವಾಹನಗಳನ್ನು ಮಾತ್ರ ನವೆಂಬರ್ 27 ರಿಂದ ದೆಹಲಿ ಪ್ರವೇಶಿಸಲು ಅನುಮತಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಇತರ ಇಂಧನ ಬಳಸುವ ವಾಹನಗಳ ಪ್ರವೇಶದ ಮೇಲಿನ ನಿಷೇಧವನ್ನು ಡಿಸೆಂಬರ್ 3 ರವರೆಗೆ ಇರುತ್ತದೆ ಎಂದು ರೈ ಅವರು ಹಿರಿಯ ಅಧಿಕಾರಿಗಳೊಂದಿಗೆ ನಡೆದ ಪರಿಶೀಲನಾ ಸಭೆಯ ನಂತರ ಹೇಳಿದ್ದಾರೆ.

ಗಾಳಿಯ ಗುಣಮಟ್ಟದಲ್ಲಿ ಸುಧಾರಣೆಯಾದ ಹಿನ್ನೆಲೆಯಲ್ಲಿ ಮತ್ತು ಕಾರ್ಮಿಕರಿಗೆ ಉಂಟಾಗುವ ಅನಾನುಕೂಲತೆಯ ದೃಷ್ಟಿಯಿಂದ ದೆಹಲಿ ಸರ್ಕಾರವು ನಿರ್ಮಾಣ ಮತ್ತು ನೆಲಸಮ ಚಟುವಟಿಕೆಗಳ ಮೇಲಿನ ನಿಷೇಧವನ್ನು ಸೋಮವಾರ ತೆಗೆದುಹಾಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT