ದೆಹಲಿ ಪರಿಸರ ಖಾತೆ ಸಚಿವ ಗೋಪಾಲ್ ರೈ 
ದೇಶ

ದೆಹಲಿಯಲ್ಲಿ ನವೆಂಬರ್ 29 ರಿಂದ ಶಾಲಾ-ಕಾಲೇಜುಗಳು ಪುನರಾರಂಭ: ಪರಿಸರ ಸಚಿವ ಗೋಪಾಲ್ ರೈ

ಅಧಿಕ ವಾಯುಮಾಲಿನ್ಯದ ಕಾರಣದಿಂದ ಬಂದ್ ಆಗಿದ್ದ ಶಾಲಾ- ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳಲ್ಲಿ ನವೆಂಬರ್ 29 ರಿಂದ ದೈಹಿಕ ತರಗತಿಗಳು ಪುನರಾರಂಭಗೊಳ್ಳಲಿವೆ...

ನವದೆಹಲಿ: ಅಧಿಕ ವಾಯುಮಾಲಿನ್ಯದ ಕಾರಣದಿಂದ ಬಂದ್ ಆಗಿದ್ದ ಶಾಲಾ- ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳಲ್ಲಿ ನವೆಂಬರ್ 29 ರಿಂದ ದೈಹಿಕ ತರಗತಿಗಳು ಪುನರಾರಂಭಗೊಳ್ಳಲಿವೆ ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರೈ ಅವರು ಬುಧವಾರ ಹೇಳಿದ್ದಾರೆ.

ಸೋಮವಾರದಿಂದ ಎಲ್ಲಾ ಸರ್ಕಾರಿ ಕಚೇರಿಗಳು ತೆರೆಯಲಿವೆ ಎಂದು ತಿಳಿಸಿದ ಸಚಿವರು, ಸರ್ಕಾರಿ ನೌಕರರು ಸಾರ್ವಜನಿಕ ಸಾರಿಗೆ ಬಳಸಬೇಕು ಒತ್ತಾಯಿಸಿದರು ಮತ್ತು ಅವರಿಗಾಗಿ ವಿಶೇಷ ಬಸ್‌ಗಳನ್ನು ನಿಯೋಜಿಸಲಾಗುವುದು ಎಂದು ಹೇಳಿದ್ದಾರೆ.

ಅಗತ್ಯ ಸೇವೆಗಳಲ್ಲಿ ತೊಡಗಿರುವವರನ್ನು ಹೊರತುಪಡಿಸಿ ಸಿಎನ್‌ಜಿ ಮತ್ತು ಎಲೆಕ್ಟ್ರಿಕ್ ವಾಹನಗಳನ್ನು ಮಾತ್ರ ನವೆಂಬರ್ 27 ರಿಂದ ದೆಹಲಿ ಪ್ರವೇಶಿಸಲು ಅನುಮತಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಇತರ ಇಂಧನ ಬಳಸುವ ವಾಹನಗಳ ಪ್ರವೇಶದ ಮೇಲಿನ ನಿಷೇಧವನ್ನು ಡಿಸೆಂಬರ್ 3 ರವರೆಗೆ ಇರುತ್ತದೆ ಎಂದು ರೈ ಅವರು ಹಿರಿಯ ಅಧಿಕಾರಿಗಳೊಂದಿಗೆ ನಡೆದ ಪರಿಶೀಲನಾ ಸಭೆಯ ನಂತರ ಹೇಳಿದ್ದಾರೆ.

ಗಾಳಿಯ ಗುಣಮಟ್ಟದಲ್ಲಿ ಸುಧಾರಣೆಯಾದ ಹಿನ್ನೆಲೆಯಲ್ಲಿ ಮತ್ತು ಕಾರ್ಮಿಕರಿಗೆ ಉಂಟಾಗುವ ಅನಾನುಕೂಲತೆಯ ದೃಷ್ಟಿಯಿಂದ ದೆಹಲಿ ಸರ್ಕಾರವು ನಿರ್ಮಾಣ ಮತ್ತು ನೆಲಸಮ ಚಟುವಟಿಕೆಗಳ ಮೇಲಿನ ನಿಷೇಧವನ್ನು ಸೋಮವಾರ ತೆಗೆದುಹಾಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT