ಮೋದಿ-ಸುಬ್ರಮಣಿಯನ್ ಸ್ವಾಮಿ 
ದೇಶ

ಮೋದಿ ನೇತೃತ್ವದ ಸರ್ಕಾರ ಎಲ್ಲ ರಂಗಗಳಲ್ಲೂ ವಿಫಲವಾಗಿದೆ: ಸುಬ್ರಮಣಿಯನ್ ಸ್ವಾಮಿ

ಪಶ‍್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಆಡಳಿತ ಶೈಲಿಯನ್ನು ಹೊಗಳಿದ 24 ಗಂಟೆಗಳ ನಂತರ ಬಿಜೆಪಿ ನಾಯಕ, ರಾಜ್ಯಸಭಾ ಸದಸ್ಯ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ...

ನವದೆಹಲಿ: ಪಶ‍್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಆಡಳಿತ ಶೈಲಿಯನ್ನು ಹೊಗಳಿದ 24 ಗಂಟೆಗಳ ನಂತರ ಬಿಜೆಪಿ ನಾಯಕ, ರಾಜ್ಯಸಭಾ ಸದಸ್ಯ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎಲ್ಲ ರಂಗಗಳಲ್ಲೂ ವಿಫಲವಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಆರ್ಥಿಕ ಪರಿಸ್ಥಿತಿ ನಿರ್ವಹಣೆ ರಕ್ಷಣೆ, ನೆರೆಹೊರೆ ದೇಶಗಳೊಂದಿಗೆ ಸಂಬಂಧಸುಧಾರಣೆ ಸೇರಿದಂತೆ ಆಡಳಿತದ ಎಲ್ಲ ರಂಗಗಳಲ್ಲೂ ಮೋದಿ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ನಾಯಕ ಆರೋಪಿಸಿದ್ದಾರೆ.

ಆಫ್ಘಾನಿಸ್ತಾನದ ಪರಿಸ್ಥಿತಿ ನಿರ್ವಹಣೆ, ಪೇಗಾಸಿಸ್ ಗೂಢಚಾರಿಕೆ ಪ್ರಕರಣದಲ್ಲೂ ಸರ್ಕಾರ ವಿವೇಚನಾರಹಿತ ಹೆಜ್ಜೆ ಇಟ್ಟಿದೆ ಎಂದು ಸ್ವಾಮಿ ದೂರಿದ್ದಾರೆ. ಪ್ರಸಕ್ತ ನರೇಂದ್ರ ಮೋದಿ ಆಡಳಿತದಲ್ಲಿ ಕಾಶ್ಮೀರ ಅಭಿವೃದ್ದಿ ಕಾಣುವ ಬದಲಿಗೆ ಕತ್ತಲೆಯಲ್ಲಿ ಮುಳುಗಿದೆ ಎಂದಿದ್ದಾರೆ.

ಕಳೆದ 24 ಗಂಟೆಗಳ ಹಿಂದೆ ದೆಹಲಿಯಲ್ಲಿ ಸುಬ್ರಹ್ಮಮಣಿಯನ್ ಸ್ವಾಮಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿ, ಅವರ ನಾಯಕತ್ವವನ್ನು ಮನಸಾರೆ ಹೊಗಳಿದ್ದರು.

ಮಮತಾ ಬ್ಯಾನರ್ಜಿ ಮುತ್ಸದ್ದಿ ನಾಯಕಿಯಾಗಿದ್ದು, ಜಯಪ್ರಕಾಶ್ ನಾರಾಯಣ್ ರಾಜೀವ್ ಗಾಂಧಿ ಮತ್ತು ಮುರಾರ್ಜಿ ದೇಸಾಯಿ, ಪಿ.ವಿ. ನರಸಿಂಹ ರಾವ್ ಅವರ ರೀತಿಯಲ್ಲಿ ಉತ್ತಮ ಆಡಳಿತ, ಉತ್ತಮ ನಾಯಕತ್ವ ಗುಣ ಹೊಂದಿದ್ದಾರೆ ಎಂದೂ ಸ್ವಾಮಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT