ಪಿಎಂ ಮೋದಿ 
ದೇಶ

ವಸಾಹತುಶಾಹಿ ಮನಸ್ಥಿತಿ ಅಸ್ತಿತ್ವದಲ್ಲಿದ್ದು, ದೇಶದ ಅಭಿವೃದ್ಧಿಗೆ ತೊಡಕಾಗಿದೆ: ಪಿಎಂ ಮೋದಿ

ವಸಾಹತುಶಾಹಿ ಮನಸ್ಥಿತಿ ಇನ್ನೂ ಅಸ್ತಿತ್ವದಲ್ಲಿದೆ ಮತ್ತು ಇದು ಭಾರತದ ಅಭಿವೃದ್ಧಿಗೆ ತೊಡಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.

ನವದೆಹಲಿ: ವಸಾಹತುಶಾಹಿ ಮನಸ್ಥಿತಿ ಇನ್ನೂ ಅಸ್ತಿತ್ವದಲ್ಲಿದೆ ಮತ್ತು ಇದು ಭಾರತದ ಅಭಿವೃದ್ಧಿಗೆ ತೊಡಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.

ದೆಹಲಿಯ ವಿಜ್ಞಾನ ಭವನದಲ್ಲಿ ಸುಪ್ರೀಂಕೋರ್ಟ್​ನಿಂದ ಆಯೋಜಿಸಲಾಗಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಕೆಲವು ಶಕ್ತಿಗಳು ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳ ಬೆಳವಣಿಗೆಯ ಹಾದಿಯಲ್ಲಿ ಅಡೆತಡೆಗಳನ್ನು ಹಾಕಲು ಪ್ರಯತ್ನಿಸುತ್ತಿವೆ ಎಂದರು.

ಪ್ರಪಂಚದಲ್ಲಿ ಯಾವುದೇ ದೇಶವು ಬೇರೆ ದೇಶದ ವಸಾಹತುಶಾಹಿಯಾಗಿ ಅಸ್ತಿತ್ವದಲ್ಲಿಲ್ಲ. ಆದರೆ ವಸಾಹತುಶಾಹಿ ಮನಸ್ಥಿತಿ ಮುಗಿದಿದೆ ಎಂದು ಇದರ ಅರ್ಥವಲ್ಲ. ಈ ಮನಸ್ಥಿತಿಯು ಅನೇಕ ವಿರೂಪಗಳಿಗೆ ಕಾರಣವಾಗುವುದನ್ನು ನಾವು ನೋಡುತ್ತಿದ್ದೇವೆ. ಇದಕ್ಕೆ ಅತ್ಯಂತ ಸ್ಪಷ್ಟವಾದ ಉದಾಹರಣೆ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಿಗೆ ಎದುರಾಗುತ್ತಿರುವ ಅಡೆತಡೆಗಳು ಎಂದು ಪ್ರಧಾನಿ ಮೋದಿ ಹೇಳಿದರು.

ಭಾರತ ಮಾತ್ರ ಪ್ಯಾರಿಸ್ ಒಪ್ಪಂದದ ಗುರಿಗಳನ್ನು ಸಾಧಿಸುವ ಹಾದಿಯಲ್ಲಿದೆ. ಪರಿಸರದ ಹೆಸರಲ್ಲಿ ಭಾರತದ ಮೇಲೆ ಹಲವು ಒತ್ತಡಗಳನ್ನು ಸೃಷ್ಟಿಸಲಾಗಿದೆ. ಅವು ಎಲ್ಲವೂ ವಸಾಹತುಸಾಹಿ ಮನಸ್ಥಿತಿಯ ಫಲಿತಾಂಶವಾಗಿದೆ ಎಂದು ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT