ಸಂಗ್ರಹ ಚಿತ್ರ 
ದೇಶ

ಜಗತ್ತಿಗೆ ಕಂಟಕವಾಗಿರುವ ಹೊಸ ಕೊರೋನಾ ರೂಪಾಂತರ: ಭಾರತಕ್ಕೆ ಬರಲು ಈ ದೇಶಗಳ ಪ್ರಯಾಣಿಕರಿಗೆ ಟೆಸ್ಟ್ ಕಡ್ಡಾಯ...

ಮಹಾಮಾರಿ ಕೊರೋನಾ ಹೊಸ ತಳಿ B.1.1.529 ವೈರಸ್ ಜಗತ್ತಿನ ಹಲವು ದೇಶಗಳಲ್ಲಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಕೆಲ ನಿರ್ದಿಷ್ಟ ದೇಶಗಳಿಂದ ಆಗಮಿಸುವವರಿಗೆ ಟೆಸ್ಟ್‌ ಕಡ್ಡಾಯಗೊಳಿಸಿದೆ. 

ನವದೆಹಲಿ: ಮಹಾಮಾರಿ ಕೊರೋನಾ ಹೊಸ ತಳಿ B.1.1.529 ವೈರಸ್ ಜಗತ್ತಿನ ಹಲವು ದೇಶಗಳಲ್ಲಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಕೆಲ ನಿರ್ದಿಷ್ಟ ದೇಶಗಳಿಂದ ಆಗಮಿಸುವವರಿಗೆ ಟೆಸ್ಟ್‌ ಕಡ್ಡಾಯಗೊಳಿಸಿದೆ. 

ಐರೋಪ್ಯ ರಾಷ್ಟ್ರಗಳು, ದಕ್ಷಿಣ ಆಫ್ರಿಕಾ, ಬ್ರೆಜಿಲ್‌, ಬಾಂಗ್ಲಾದೇಶ, ಬೋಟ್ವಾನಾ, ಚೀನಾ, ಮಾರಿಷಸ್‌, ನ್ಯೂಜಿಲೆಂಡ್‌, ಸಿಂಗಾಪುರ, ಹಾಂಗ್‌ಕಾಂಗ್‌, ಇಸ್ರೆಲ್‌ನಿಂದ ಭಾರತಕ್ಕೆ ಬರುವವರಿಗೆ ಕೊವೀಡ್ ಟೆಸ್ಟ್‌ ಸೇರಿ ಹೆಚ್ಚುವರಿ ಕ್ರಮ ಅನುಸರಿಸುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. 

ಕೋವಿಡ್ ಲಸಿಕೆ ಅಭಿಯಾನದ ನಂತರ ಎಲ್ಲರೂ ನಿರ್ಭೀತರಾಗಿ ಓಡಾಡುವ ದಿನಗಳು ಸಮೀಪಿಸಿತು ಎನ್ನುವಾಗಲೇ ಇದೀಗ ಕೊರೊನಾ ರೂಪಾಂತರಿ ಸೋಂಕುಗಳ ಹಾವಳಿ ಶುರುವಾಗಿದೆ. ಇದೀಗ ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೊನಾ ವೈರಸ್ ಸೋಂಕಿನ ಹೊಸ ತಳಿ ಭಾರೀ ಅಪಾಯಕಾರಿಯಾಗಿದೆ. 

ಈ ರೂಪಾಂತರಿ ವೈರಸ್ ಡೆಲ್ಟಾ ವೈರಸ್​ಗಿಂತಲೂ ಅಪಾಯಕಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರ ದಕ್ಷಿಣ ಆಫ್ರಿಕಾ, ಹಾಂಕಾಂಗ್ ಮತ್ತು ಬೋಟ್ಸ್​ವಾನಾ ದೇಶಗಳಿಂದ ಬರುವ ಪ್ರಯಾಣಿಕರನ್ನು ಕಟ್ಟುನಿಟ್ಟಿನ ತಪಾಸಣೆ ಹಾಗೂ ಪರೀಕ್ಷೆಗೆ ಒಳಪಡಿಸುವಂತೆ ನಿನ್ನೆ ಆದೇಶ ಹೊರಡಿಸಿತ್ತು.

ಕೋವಿಡ್ ಸೋಂಕಿನಲ್ಲಿ ಈವರೆಗಿನ ಎಲ್ಲಾ ರೂಪಾಂತರಿಗಳಿಗಿಂತಲೂ ಭಿನ್ನವಾದ, ತತಕ್ಷಣಕ್ಕೆ ಹಾಗೂ ವೇಗವಾಗಿ ಪ್ರಸರಿಸುವ ಹೊಸ ರೂಪಾಂತರಿ ಕೊರೊನಾ ದಕ್ಷಿಣ ಆಫ್ರಿಕಾ, ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕಾಣಿಸಿಕೊಂಡಿದ್ದು ಆತಂಕ ಮೂಡಿಸಿದೆ. ಭಾರತ ಸೇರಿದಂತೆ ಹಲವು ರಾಷ್ಟ್ರಗಳು ಈ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸಿದ್ದು, ಮುಜಾಂಗ್ರತೆಗಾಗಿ ವಿಶ್ವಸಂಸ್ಥೆ ತುರ್ತು ಸಭೆ ಕರೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT