ಗೋದ್ರಾ ರೈಲು ಹತ್ಯಕಾಂಡ ಹಾಗೂ ಆರೋಪಿಯ ಚಿತ್ರ 
ದೇಶ

ಗುಜರಾತ್: 2002 ಗೋಧ್ರಾ ರೈಲು ಹತ್ಯಾಕಾಂಡ ಪ್ರಕರಣದ ಅಪರಾಧಿ ಚಿಕಿತ್ಸೆ ವೇಳೆ ಆಸ್ಪತ್ರೆಯಲ್ಲಿ ಸಾವು

2002ರಲ್ಲಿ ನಡೆದಿದ್ದ ಗೋಧ್ರಾ ರೈಲು ಹತ್ಯಾಕಾಂಡ ಪ್ರಕರಣದಲ್ಲಿ ಗುಜರಾತಿನ ವಡೋದರಾದ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಅಪರಾಧಿಯೊಬ್ಬ ಇಲ್ಲಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ವಡೋದರಾ: 2002ರಲ್ಲಿ ನಡೆದಿದ್ದ ಗೋಧ್ರಾ ರೈಲು ಹತ್ಯಾಕಾಂಡ ಪ್ರಕರಣದಲ್ಲಿ ಗುಜರಾತಿನ ವಡೋದರಾದ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಅಪರಾಧಿಯೊಬ್ಬ ಇಲ್ಲಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ವಡೋದರಾದ ಎಸ್ ಎಸ್ ಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 61 ವರ್ಷದ ಬಿಲಾಲ್ ಇಸ್ಮಾಯಿಲ್ ಅಬ್ದುಲ್ ಮಜೀದ್ ಅಥವಾ ಹಾಜಿ ಬಿಲಾಳ್ ಶುಕ್ರವಾರ, ಆರೋಗ್ಯ ಸಮಸ್ಯೆಯಿಂದಾಗಿ ಮೃತಪಟ್ಟಿರುವುದಾಗಿ ಸಹಾಯಕ ಪೊಲೀಸ್ ಆಯುಕ್ತ ಎ.ವಿ. ರಾಜ್ಗೋರ್ ಹೇಳಿದ್ದಾರೆ. 

ಕಳೆದ ಮೂರು- ನಾಲ್ಕು ವರ್ಷಗಳಲ್ಲಿಂದ ಬಿಲಾಲ್ ಆರೋಗ್ಯ ಸರಿಯಾಗಿರಲಿಲ್ಲ, ಆತನ ಆರೋಗ್ಯ ಕ್ಷೀಣಿಸಿದ ನಂತರ ನವೆಂಬರ್ 22 ರಂದು ಜೈಲಿನಿಂದ ಆಸ್ಪತ್ರೆಗೆ ಆತನನ್ನು ಸ್ಥಳಾಂತರಿಸಲಾಗಿತ್ತು.  2002, ಫೆಬ್ರವರಿ 27 ರಂದು ಗೋದ್ರಾದಲ್ಲಿ ಅಯೋಧ್ಯೆಯಿಂದ ಕರ ಸೇವಕರನ್ನು ಕರೆದೊಯ್ಯುತ್ತಿದ್ದ  ಸಬರಮತಿ ಎಕ್ಸ್ ಪ್ರೆಸ್ ಗೆ 6 ಕೋಚ್ ಗಳಿಗೆ ಬೆಂಕಿ ಹಚ್ಚಿದ  ಪ್ರಕರಣದಲ್ಲಿ ಜೀವವಾಧಿ ಶಿಕ್ಷೆಗೆ ಗುರಿಯಾದ 11 ಅಪರಾಧಿಗಳಲ್ಲಿ ಬಿಲಾಲ್ ಕೂಡಾ ಒಬ್ಬನಾಗಿದ್ದಾನೆ.

ಈ ದುರಂತದಲ್ಲಿ 59 ಜನರು ಹತ್ಯೆಯಾಗಿದ್ದರು. ರಾಜ್ಯಾದ್ಯಂತ ತೀವ್ರ ಹಿಂಸಾಚಾರ ಭುಗಿಲೆದ್ದಿತ್ತು.  ಬಿಲಾಲ್ ಮತ್ತಿತರ 10 ಮಂದಿಗೆ 2011ರಲ್ಲಿ ಎಸ್ ಐಟಿ ಕೋರ್ಟ್ ಮರಣ ದಂಡನೆ ನೀಡಿತ್ತು. ಆದಾಗ್ಯೂ, ಅಕ್ಟೋಬರ್ 2017ರಲ್ಲಿ ಗುಜರಾತ್ ಹೈಕೋರ್ಟ್ ಅವರ ಮರಣ ದಂಡನೆ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಬದಲಾಯಿಸಿತ್ತು.  ಗೋದ್ರಾ ರೈಲು ಹತ್ಯಾಕಾಂಡ ಗುಜರಾತ್ ರಾಜ್ಯಾದ್ಯಂತ ವ್ಯಾಪಕ ಹಿಂಸಾಚಾರಕ್ಕೆ ಕಾರಣವಾಗಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಸುಮಾರು 1 ಸಾವಿರ ಮಂದಿಯ ಹತ್ಯೆಯಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ