ಸಾಂದರ್ಭಿಕ ಚಿತ್ರ 
ದೇಶ

ಓಮಿಕ್ರಾನ್ ಆತಂಕ: ಮಹಾರಾಷ್ಟ್ರದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದರೆ 500 ರೂ. ದಂಡ

ಹೊಸ ಕೊರೋನಾ ವೈರಸ್ ರೂಪಾಂತರವಾದ `ಓಮಿಕ್ರಾನ್' ಜಗತ್ತಿನಾದ್ಯಂತ ತೀವ್ರ ಆತಂಕಕ್ಕೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಕೋವಿಡ್ ನಿಯಮಗಳನ್ನು ಅನುಸರಿಸದಿದ್ದರೆ ದಂಡ ವಿಧಿಸುವುದಾಗಿ ಶನಿವಾರ ಘೋಷಿಸಿದೆ.

ಮುಂಬೈ: ಹೊಸ ಕೊರೋನಾ ವೈರಸ್ ರೂಪಾಂತರವಾದ `ಓಮಿಕ್ರಾನ್' ಜಗತ್ತಿನಾದ್ಯಂತ ತೀವ್ರ ಆತಂಕಕ್ಕೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಕೋವಿಡ್ ನಿಯಮಗಳನ್ನು ಅನುಸರಿಸದಿದ್ದರೆ ದಂಡ ವಿಧಿಸುವುದಾಗಿ ಶನಿವಾರ ಘೋಷಿಸಿದೆ.

ಅಂತರಾಷ್ಟ್ರೀಯ ಪ್ರಯಾಣಿಕರಿಗೆ ನಿಯಮಗಳ ಪ್ರಕಾರ, ಮುಂಬೈ ಮಹಾನಗರ ಪಾಲಿಕೆ ಮತ್ತು ಕೇಂದ್ರ ಆರೋಗ್ಯ ಸಚಿವಾಲಯದ ಸಹಯೋಗದಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಿದೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಕುಂಟೆ ಅವರು ಪಿಟಿಐಗೆ ತಿಳಿಸಿದ್ದಾರೆ.

ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರು ಕೇಂದ್ರ ಸರ್ಕಾರದ ನಿರ್ದೇಶನಗಳಿಂದ ನಿಯಂತ್ರಿಸಲ್ಪಡುತ್ತಾರೆ. ಆದರೆ ರಾಜ್ಯಕ್ಕೆ ಆಗಮಿಸುವ ದೇಶೀಯ ಪ್ರಯಾಣಿಕರು ಸಂಪೂರ್ಣವಾಗಿ ಎರಡೂ ಡೋಸ್ ಲಸಿಕೆ ಪಡೆದಿರಬೇಕು ಅಥವಾ 72 ಗಂಟೆಗಳ ಮುನ್ನ ಪಡೆದ ಆರ್‌ಟಿ-ಪಿಸಿಆರ್ ನೆಗಟಿವ್ ವರದಿ ನೀಡಬೇಕು ಎಂದು ಅಧಿಕೃತ ಅಧಿಸೂಚನೆ ತಿಳಿಸಿದೆ.

ಹೊಸ ರೂಪಾಂತರದ ಪ್ರಕರಣಗಳು ಕಂಡುಬಂದಿರುವ ದಕ್ಷಿಣ ಆಫ್ರಿಕಾದ ಪ್ರಯಾಣಿಕರನ್ನು ಕ್ವಾರಂಟೈನ್ ಮಾಡಲಾಗುವುದು ಮತ್ತು ಅವರ ಮಾದರಿಗಳನ್ನು ಜೀನೋಮ್ ಅನುಕ್ರಮಕ್ಕಾಗಿ ಕಳುಹಿಸಲಾಗುವುದು ಎಂದು ನಿನ್ನೆಯಷ್ಚೇ ಮುಂಬೈ ಮೇಯರ್ ಕಿಶೋರಿ ಪೆಡ್ನೇಕರ್ ಅವರು ಹೇಳಿದ್ದರು.

ಕೋವಿಡ್ ನಿಯಮಗಳನ್ನು ಅನುಸರಿಸದ ವ್ಯಕ್ತಿಗೆ 500 ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ಮಹಾರಾಷ್ಟ್ರ ಸರ್ಕಾರ ಹೊರಡಿಸಿದ ಹೊಸ ಮಾರ್ಗಸೂಚಿಗಳಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಡಿಕೆಶಿ ಪ್ರಮಾಣ ವಚನ ದಿನವೇ ಹೊಸ ಕಾಂಗ್ರೆಸ್ ಭವನಕ್ಕೆ ರಾಹುಲ್ ಗಾಂಧಿ ಶಂಕು ಸ್ಥಾಪನೆ; ಸ್ಥಳ ಪರಿಶೀಲಿಸಿದ ನಿಯೋಜಿತ ಸಿಎಂ

IPL 2026 Final: RCB vs GT, ಮರುಕಳಿಸುತ್ತಾ ಪಿಚ್ ನಂ 6 ಕರಾಳತೆ, ಸಂಭಾವ್ಯ ಆಟಗಾರರ ಪಟ್ಟಿ ಇಲ್ಲಿದೆ

IPL 2026 Final: 'ಆತ 3 ಓವರ್ ಬೌಲಿಂಗ್ ಮಾಡಿದ್ರೂ RCB ಕಥೆ ಮುಗಿದಂತೆ, ಆಡಿಸಲೇಬೇಡಿ': ಫೈನಲ್ ಗೂ ಮುನ್ನ ಮಾಜಿ ಕ್ರಿಕೆಟಿಗನ ಹೊಸ ಬಾಂಬ್

ನೊಂದವರ ಗಾಯದ ಮೇಲೆ ಉಪ್ಪು ಸುರಿದಂತೆ: ಜಾಮೀನು ಸಿಕ್ಕಿದ್ದಕ್ಕೆ ಕೊಲೆ ಆರೋಪಿ ಕುಟುಂಬಸ್ಥರ ಪಾರ್ಟಿ, ನಟ ವಿಶಾಲ್ ಆಕ್ರೋಶ, Video!

ವೈಭವ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಕ್ರಿಕೆಟ್ ದೇವರು; ಯುವ ಆಟಗಾರ ಟೆಸ್ಟ್‌ ಕ್ರಿಕೆಟ್‌ ಆಡುವ ಕುರಿತು ಸಚಿನ್ ಹೇಳಿದ್ದೇನು?

SCROLL FOR NEXT