ಸಾಂದರ್ಭಿಕ ಚಿತ್ರ 
ದೇಶ

ಮುಂಬೈನಲ್ಲಿ ಬಿಕೆಯು ರ‍್ಯಾಲಿ: ಪ್ರತಿಭಟನೆಯಲ್ಲಿ ಸಾವನ್ನಪ್ಪಿದ 700ಕ್ಕೂ ಹೆಚ್ಚು ರೈತರಿಗೆ ಗೌರವ ಸಮರ್ಪಣೆ

ಅಕ್ಟೋಬರ್ 3 ರಂದು ನಡೆದ ಲಖೀಂಪುರ ಖೇರಿ ಘಟನೆಯಲ್ಲಿ ಮೃತಪಟ್ಟ ರೈತರ ಚಿತಾಭಸ್ಮವನ್ನು ತಂದು ಅರಬ್ಬಿ ಸಮುದ್ರದಲ್ಲಿ ವಿಸರ್ಜಿಸಲು ಸಹ ಯೋಜಿಸಲಾಗಿದೆ ಎಂದು ರೈತ ಮುಖಂಡರು ಹೇಳಿದ್ದಾರೆ. 

ಮುಂಬೈ: ನೂತನ ಕೇಂದ್ರ ಕೃಷಿ ಕಾನೂನುಗಳ ವಿರುದ್ಧ ವರ್ಷವಿಡೀ ನಡೆದ ಪ್ರತಿಭಟನೆಯಲ್ಲಿ ಸಾವನ್ನಪ್ಪಿದ 700ಕ್ಕೂ ಹೆಚ್ಚು ರೈತರ ತ್ಯಾಗ, ಪರಿಶ್ರಮ, ಸ್ಮರಿಸಿ ಗೌರವ ಸಲ್ಲಿಸಲು ಮಹಾರಾಷ್ಟ್ರದ ಮುಂಬೈನ ಆಜಾದ್ ಮೈದಾನದಲ್ಲಿ ಇಂದು ಭಾನುವಾರ ಸಾವಿರಾರು ರೈತರು ರ‍್ಯಾಲಿ ನಡೆಸಲಿದ್ದಾರೆ.

ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಒಂದು ದಿನ ಮುಂಚಿತವಾಗಿ ಆಯೋಜಿಸಲಾದ ರ‍್ಯಾಲಿಯಲ್ಲಿ 50,000ಕ್ಕೂ ಹೆಚ್ಚು ರೈತರು ಸೇರುವ ನಿರೀಕ್ಷೆಯಿದೆ. ಇನ್ನು ಅಕ್ಟೋಬರ್ 3 ರಂದು ನಡೆದ ಲಖೀಂಪುರ ಖೇರಿ ಘಟನೆಯಲ್ಲಿ ಮೃತಪಟ್ಟ ರೈತರ ಚಿತಾಭಸ್ಮವನ್ನು ತಂದು ಅರಬ್ಬಿ ಸಮುದ್ರದಲ್ಲಿ ವಿಸರ್ಜಿಸಲು ಸಹ ಯೋಜಿಸಲಾಗಿದೆ ಎಂದು ರೈತ ಮುಖಂಡರು ಹೇಳಿದ್ದಾರೆ.

ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖಂಡ ರಾಕೇಶ್ ಟಿಕಾಯತ್ ಮಾತನಾಡಿ, ರೈತರು 'ಕಿಸಾನ್ ಮಜ್ದೂರ್ ಮಹಾಪಂಚಾಯತ್' ಅನ್ನು ಸಹ ಯೋಜಿಸಿದ್ದಾರೆ.

ಅಲ್ಲಿ ಅವರು ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‍ಪಿ) ಸೇರಿದಂತೆ ಎಲ್ಲ ಕೃಷಿ ಸಂಬಂಧಿತ ಸಮಸ್ಯೆಗಳು, ಸ್ವಾಮಿನಾಥನ್ ವರದಿ, ನಿರುದ್ಯೋಗ ಮತ್ತು ಇತರ ಸಮಸ್ಯೆಗಳು ಸೇರಿದಂತೆ ಇತರೆ ತಮ್ಮ ಬೇಡಿಕೆಗಳನ್ನು ಕೂಡ ಚರ್ಚಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT