ಸಾಂದರ್ಭಿಕ ಚಿತ್ರ 
ದೇಶ

ಮುಂಬೈನಲ್ಲಿ ಬಿಕೆಯು ರ‍್ಯಾಲಿ: ಪ್ರತಿಭಟನೆಯಲ್ಲಿ ಸಾವನ್ನಪ್ಪಿದ 700ಕ್ಕೂ ಹೆಚ್ಚು ರೈತರಿಗೆ ಗೌರವ ಸಮರ್ಪಣೆ

ಅಕ್ಟೋಬರ್ 3 ರಂದು ನಡೆದ ಲಖೀಂಪುರ ಖೇರಿ ಘಟನೆಯಲ್ಲಿ ಮೃತಪಟ್ಟ ರೈತರ ಚಿತಾಭಸ್ಮವನ್ನು ತಂದು ಅರಬ್ಬಿ ಸಮುದ್ರದಲ್ಲಿ ವಿಸರ್ಜಿಸಲು ಸಹ ಯೋಜಿಸಲಾಗಿದೆ ಎಂದು ರೈತ ಮುಖಂಡರು ಹೇಳಿದ್ದಾರೆ. 

ಮುಂಬೈ: ನೂತನ ಕೇಂದ್ರ ಕೃಷಿ ಕಾನೂನುಗಳ ವಿರುದ್ಧ ವರ್ಷವಿಡೀ ನಡೆದ ಪ್ರತಿಭಟನೆಯಲ್ಲಿ ಸಾವನ್ನಪ್ಪಿದ 700ಕ್ಕೂ ಹೆಚ್ಚು ರೈತರ ತ್ಯಾಗ, ಪರಿಶ್ರಮ, ಸ್ಮರಿಸಿ ಗೌರವ ಸಲ್ಲಿಸಲು ಮಹಾರಾಷ್ಟ್ರದ ಮುಂಬೈನ ಆಜಾದ್ ಮೈದಾನದಲ್ಲಿ ಇಂದು ಭಾನುವಾರ ಸಾವಿರಾರು ರೈತರು ರ‍್ಯಾಲಿ ನಡೆಸಲಿದ್ದಾರೆ.

ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಒಂದು ದಿನ ಮುಂಚಿತವಾಗಿ ಆಯೋಜಿಸಲಾದ ರ‍್ಯಾಲಿಯಲ್ಲಿ 50,000ಕ್ಕೂ ಹೆಚ್ಚು ರೈತರು ಸೇರುವ ನಿರೀಕ್ಷೆಯಿದೆ. ಇನ್ನು ಅಕ್ಟೋಬರ್ 3 ರಂದು ನಡೆದ ಲಖೀಂಪುರ ಖೇರಿ ಘಟನೆಯಲ್ಲಿ ಮೃತಪಟ್ಟ ರೈತರ ಚಿತಾಭಸ್ಮವನ್ನು ತಂದು ಅರಬ್ಬಿ ಸಮುದ್ರದಲ್ಲಿ ವಿಸರ್ಜಿಸಲು ಸಹ ಯೋಜಿಸಲಾಗಿದೆ ಎಂದು ರೈತ ಮುಖಂಡರು ಹೇಳಿದ್ದಾರೆ.

ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖಂಡ ರಾಕೇಶ್ ಟಿಕಾಯತ್ ಮಾತನಾಡಿ, ರೈತರು 'ಕಿಸಾನ್ ಮಜ್ದೂರ್ ಮಹಾಪಂಚಾಯತ್' ಅನ್ನು ಸಹ ಯೋಜಿಸಿದ್ದಾರೆ.

ಅಲ್ಲಿ ಅವರು ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‍ಪಿ) ಸೇರಿದಂತೆ ಎಲ್ಲ ಕೃಷಿ ಸಂಬಂಧಿತ ಸಮಸ್ಯೆಗಳು, ಸ್ವಾಮಿನಾಥನ್ ವರದಿ, ನಿರುದ್ಯೋಗ ಮತ್ತು ಇತರ ಸಮಸ್ಯೆಗಳು ಸೇರಿದಂತೆ ಇತರೆ ತಮ್ಮ ಬೇಡಿಕೆಗಳನ್ನು ಕೂಡ ಚರ್ಚಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

SCROLL FOR NEXT