ದೇಶ

ಸರ್ವಪಕ್ಷ ಸಭೆಯಲ್ಲಿ 31 ಪಕ್ಷಗಳ ಮುಖಂಡರು ಭಾಗಿ, ಅಡಚಣೆಯಿಲ್ಲದೆ ಚರ್ಚೆಗೆ ಸರ್ಕಾರ ಸಿದ್ಧ- ಪ್ರಹ್ಲಾದ ಜೋಶಿ

Nagaraja AB

ನವದೆಹಲಿ: ಚಳಿಗಾಲದ ಸಂಸತ್ ಅಧಿವೇಶನ ಹಿನ್ನೆಲೆಯಲ್ಲಿ ನಡೆದ ಸರ್ವ ಪಕ್ಷ ಸಭೆಯಲ್ಲಿ 31 ರಾಜಕೀಯ ಪಕ್ಷಗಳಿಂದ 42 ಮುಖಂಡರು ಪಾಲ್ಗೊಂಡಿದ್ದರು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಭಾನುವಾರ ತಿಳಿಸಿದ್ದಾರೆ.

ಯಾವುದೇ ಅಡಚಣೆಯಿಲ್ಲದೆ ಸ್ಪೀಕರ್ ಹಾಗೂ ಸಭಾಪತಿ ಅನುಮತಿಸಿದ ಯಾವುದೇ ವಿಚಾರಗಳ ಬಗ್ಗೆ ಚರ್ಚೆಗೆ ಸರ್ಕಾರ ಸಿದ್ಧವಿದೆ ಎಂದು ಅವರು ಎಎನ್ ಐ ಸುದ್ದಿಸಂಸ್ಥೆಗೆ ಹೇಳಿದ್ದಾರೆ.

ಈ ಮಧ್ಯೆ ಕೃಷಿ ಕಾನೂನುಗಳ ಜಾರಿಗೆ ಆಗ್ರಹಿಸಿ ನಡೆದ ಪ್ರತಿಭಟನೆ ವೇಳೆ ಸಾವಿಗೀಡಾದ ಹಾಗೂ ಕೋವಿಡ್-19 ಸೋಂಕಿನಿಂದ ಮೃತಪಟ್ಟ ಕುಟುಂಬ ಸದಸ್ಯರಿಗೆ ಪರಿಹಾರ ನೀಡಬೇಕೆಂದು ಪ್ರತಿಪಕ್ಷಗಳು ಸಭೆಯಲ್ಲಿ ಸರ್ಕಾರವನ್ನು ಒತ್ತಾಯಿಸಿದವು.

ಅಧಿವೇಶನದಲ್ಲಿ ಮೂರು ಕೃಷಿ ಕಾನೂನುಗಳ ರದ್ಧತಿಗೆ ಸರ್ಕಾರ ಆದ್ಯತೆ ನೀಡಲಿದೆ ಎಂದು ಸಭೆ ಬಳಿಕ ಕೇಂದ್ರ ವಾರ್ತಾ ಸಚಿವ ಅನುರಾಗ್ ಠಾಕೂರ್ ತಿಳಿಸಿದರು. ನಾಳೆಯಿಂದ ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನ, ಡಿಸೆಂಬರ್ 23 ರಂದು ಕೊನೆಗೊಳ್ಳಲಿದೆ. 

SCROLL FOR NEXT