ಮೋಹನ್ ಭಾಗವತ್ 
ದೇಶ

'ಭಾರತ' ಭಾರತವಾಗಿಯೇ ಉಳಿಯಲು ಹಿಂದೂಗಳು ಹಿಂದೂಗಳಾಗಿಯೇ ಉಳಿಯಬೇಕು: ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್

ಅಖಂಡ ಭಾರತ ಒಡೆದಿದೆ. ನಾವು ಹಿಂದೂಗಳು ಎಂಬ ಭಾವನೆಯನ್ನು ಮರೆತಿದ್ದರಿಂದ ಪಾಕಿಸ್ತಾನ ಹುಟ್ಟಿದೆ. ಅಲ್ಲಿಯ ಮುಸ್ಲಿಮರು ಸಹ ಇದನ್ನು ಮರೆತಿದ್ದಾರೆ. ಹಿಂದೂ ಎಂದುಕೊಳ್ಳುವವರ ಶಕ್ತಿ ಕಡಿಮೆಯಾದ್ದರಿಂದಲೇ ಪಾಕಿಸ್ತಾನವು ಭಾರತವಾಗಿರಲೂ ಸಾಧ್ಯವಾಗಲಿಲ್ಲ- ಮೋಹನ್ ಭಾಗವತ್

ಭೋಪಾಲ್:"ಭಾರತ" ಭಾರತ ದೇಶವಾಗಿಯೇ ಉಳಿಯಬೇಕಾದರೆ ಹಿಂದೂಗಳು ಹಿಂದೂಗಳಾಗಿಯೇ ಉಳಿಯಬೇಕು ಎಂದು ಆರ್‌ಎಸ್‌ಎಸ್‌ ಪ್ರಮುಖ್ ಭಾಗವತ್ ಕರೆ ನೀಡಿದ್ದಾರೆ. ಗ್ವಾಲಿಯರ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದನ್ನುದ್ದೇಶಿಸಿ ಮಾತನಾಡಿದ ಭಾಗವತ್, ಹಿಂದೂಗಳಿಲ್ಲದೆ ಭಾರತವಿಲ್ಲ, ಭಾರತವಿಲ್ಲದೆ ಹಿಂದೂಗಳೂ ಇಲ್ಲ. ಹಿಂದೂ ಮತ್ತು ಭಾರತವನ್ನು ಬೇರ್ಪಡಿಸಲು ಸಾಧ್ಯವಿಲ್ಲ ಎಂದರು.

ಇದೇ ವೇಳೆ ಭಾರತ ಭಾರತವಾಗಿ ಉಳಿಯಬೇಕಾದರೆ ಭಾರತ ಹಿಂದೂವಾಗಿಯೇ ಉಳಿಯಬೇಕು. ಹಿಂದೂ ಹಿಂದೂವಾಗಿಯೇ ಉಳಿಯಬೇಕಾದರೆ ಭಾರತ ಒಂದಾಗಬೇಕು. ಅಖಂಡ ಭಾರತ ಒಡೆದಿದೆ. ನಾವು ಹಿಂದೂಗಳು ಎಂಬ ಭಾವನೆಯನ್ನು ಮರೆತಿದ್ದರಿಂದ ಪಾಕಿಸ್ತಾನ ಹುಟ್ಟಿದೆ. ಅಲ್ಲಿಯ ಮುಸ್ಲಿಮರು ಸಹ ಇದನ್ನು ಮರೆತಿದ್ದಾರೆ. ಹಿಂದೂ ಎಂದುಕೊಳ್ಳುವವರ ಶಕ್ತಿ ಕಡಿಮೆಯಾದ್ದರಿಂದಲೇ ಪಾಕಿಸ್ತಾನವು ಭಾರತವಾಗಿರಲೂ ಸಾಧ್ಯವಾಗಲಿಲ್ಲ ಎಂದು ಮಾರ್ಮಿಕವಾಗಿ ನುಡಿದರು.

ಇದಕ್ಕೂ ಮುನ್ನ ನೋಯ್ಡಾದಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ್ದ ಮೋಹನ್ ಭಾಗವತ್, ವಿಭಜನೆ ಎಂಬುದು ರಾಜಕೀಯ ಪ್ರಶ್ನೆಯಲ್ಲ, ಅದು ಅಸ್ತಿತ್ವದ ಪ್ರಶ್ನೆ. ಭಾರತದ ವಿಭಜನೆಯ ಪ್ರಸ್ತಾಪವನ್ನು ರಕ್ತದ ನದಿಗಳು ಹರಿಯದಂತೆ ತಡೆಯಲು ಮಾತ್ರ ಅಂಗೀಕರಿಸಲಾಗಿತ್ತಾದರೂ ಇದಕ್ಕೆ ವಿರುದ್ಧವಾಗಿ, ಉದ್ದೇಶವನ್ನೇ ಮರೆತು ಅಂದಿನಿಂದ ಹೆಚ್ಚು ರಕ್ತವನ್ನು ಹರಿಸಲಾಗುತ್ತಿದೆ. ಅಂದಿನ ಪರಿಸ್ಥಿತಿಯಿಂದಾಗಿ ಇಸ್ಲಾಂ ಮತ್ತು ಬ್ರಿಟಿಷರ ದಾಳಿಯ ಪರಿಣಾಮವೇ ಭಾರತ ವಿಭಜನೆಯಾಗಿದೆ ಭಾಗವತ್ ಅಭಿಪ್ರಾಯಪಟ್ಟರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT